![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 2, 2024, 2:48 PM IST
ಸ್ಯಾನ್ ಫ್ರಾನ್ಸಿಸ್ಕೋ: ಆರ್ಥಿಕ ನಷ್ಟಕ್ಕೆ ಗುರಿಯಾಗಿರುವ ಅನೇಕ ಬೃಹತ್ ಕಂಪನಿಗಳು ಈಗಾಗಲೇ ಉದ್ಯೋಗಿಗಳನ್ನು ಕಡಿತಗೊಳಿಸಿದೆ. ಇದೀಗ ಅದಕ್ಕೊಂದು ಸೇರ್ಪಡೆ ಎಂಬಂತೆ ಅಮೆರಿಕದ ಪ್ರತಿಷ್ಠಿತ ಚಿಪ್ (Chip) ತಯಾರಿಕಾ ಕಂಪನಿ ಇಂಟೆಲ್ ಶೇ.15ಕ್ಕೂ ಅಧಿಕ ಉದ್ಯೋಗಿಗಳನ್ನು ವಜಾಗೊಳಿಸಿರುವುದಾಗಿ ವರದಿ ತಿಳಿಸಿದೆ.
ಇತ್ತೀಚೆಗೆ ಕೊನೆಗೊಂಡ ತ್ರೈಮಾಸಿಕ ವರದಿಯಲ್ಲಿ ಇಂಟೆಲ್ ಕಾರ್ಪೋರೇಶನ್ ಬರೋಬ್ಬರಿ 1.6 ಬಿಲಿಯನ್ ಡಾಲರ್ ನಷ್ಟ ಅನುಭವಿಸಿತ್ತು. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 20 ಬಿಲಿಯನ್ ಡಾಲರ್ ನಷ್ಟು ಬೃಹತ್ ಮೊತ್ತವನ್ನು ಕಡಿತಗೊಳಿಸಲು ಚಿಂತನೆ ನಡೆಸಿರುವುದಾಗಿ ವರದಿ ವಿವರಿಸಿದೆ.
“ ನಮ್ಮ 2ನೇ ತ್ರೈಮಾಸಿಕ ಆರ್ಥಿಕ ಪ್ರಗತಿ ತುಂಬಾ ನಿರಾಶದಾಯಕವಾಗಿದ್ದು, ನಮ್ಮ ಪ್ರಮುಖ ಉತ್ಪಾದನೆ ಮತ್ತು ತಾಂತ್ರಿಕ ಪ್ರಗತಿಯ ಗುರಿ ಮುಟ್ಟುವಲ್ಲಿ ವಿಫಲವಾಗಿರುವುದಾಗಿ ಇಂಟೆಲ್ ನ ಚೀಫ್ ಎಕ್ಸಿಕ್ಯೂಟಿವ್ ಪ್ಯಾಟ್ ಗೆಲ್ಸಿಂಗರ್” ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಂಪನಿಯ ವೆಚ್ಚವನ್ನು ಕಡಿತಗೊಳಿಸುವ ಮೂಲಕ ನಮ್ಮ ಲಾಭವನ್ನು ಸುಧಾರಿಸುವ ಮೂಲಕ ಆರ್ಥಿಕ ಲಾಭವನ್ನು ಬಲಗೊಳಿಸಲು ಉದ್ಯೋಗಿಗಳನ್ನು ಕಡಿತಗೊಳಿಸಲು ಮುಂದಾಗಿರುವುದಾಗಿ ಇಂಟೆಲ್ ತಿಳಿಸಿದೆ.
ಇಂಟೆಲ್ ವರದಿಯ ಪ್ರಕಾರ, ಕಳೆದ ವರ್ಷ 1,24,800 ಸಾವಿರ ಉದ್ಯೋಗಿಗಳನ್ನು ಹೊಂದಿದೆ. ಅಂದರೆ ಸುಮಾರು 18,000 ಉದ್ಯೋಗಿಗಳು ವಜಾಗೊಳ್ಳುವ ಸಾಧ್ಯತೆ ಇದ್ದಿರುವುದಾಗಿ ವರದಿ ವಿವರಿಸಿದೆ.
ಜೂನ್ ನಲ್ಲಿ ಇಸ್ರೇಲ್ ನಲ್ಲಿ ಪ್ರಾರಂಭವಾಗಬೇಕಿದ್ದ ಪ್ರಮುಖ ಫ್ಯಾಕ್ಟರಿ ಯೋಜನೆಯನ್ನು ಕೈಬಿಡುವುದಾಗಿ ಇಂಟೆಲ್ ಘೋಷಿಸಿತ್ತು. ಈ ಚಿಪ್ ಪ್ಲ್ಯಾಂಟ್ ಗೆ ಹೆಚ್ಚುವರಿ 15 ಬಿಲಿಯನ್ ಡಾಲರ್ ವ್ಯಯಿಸಬೇಕಾಗಿತ್ತು ಎಂದು ತಿಳಿಸಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್ಸ್ಟಾರ್ ಇದೀಗ ಜಿಯೋ ಹಾಟ್ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.