ಈಕ್ವಿಟಿಯಲ್ಲಿ ಹೂಡಿಕೆ ಉತ್ತಮ ಮಾರ್ಗ


Team Udayavani, Jan 31, 2021, 6:00 AM IST

ಈಕ್ವಿಟಿಯಲ್ಲಿ ಹೂಡಿಕೆ ಉತ್ತಮ ಮಾರ್ಗ

ಖರ್ಚುಗಳೆಲ್ಲ ಕಳೆದು ಕೊನೆಗೆ ಉಳಿ ಯುವ ಹಣವನ್ನು ಉಳಿತಾಯ ಅಥವಾ ಹೂಡಿಕೆಗೆ ಮೀಸಲಿಡುವುದು ಸರಿಯಲ್ಲ. ಹೂಡಿಕೆಗಾಗಿ ಒಂದಿಷ್ಟು ಹಣವನ್ನು ತೆಗೆದಿರಿಸಿ, ಅನಂತರ ಉಳಿಯುವ ಹಣವನ್ನು ನಿತ್ಯದ ಖರ್ಚುಗಳಿಗೆ ಬಳಕೆ ಮಾಡಿಕೊಳ್ಳ ಬೇಕು ಎನ್ನುವುದು ತಜ್ಞರ ಮಾತು.

ಈ ಮಾತು ಸಾಮಾನ್ಯ ಸಂದರ್ಭ ಗಳಲ್ಲಿ ಬಹುತೇಕರಿಗೆ ಹಾಸ್ಯಾಸ್ಪದ ಎನಿಸಿದ್ದಿದೆ. ಆದರೆ ಕೋವಿಡ್‌ ಬಿಕ್ಕ ಟ್ಟಿನ ಸಂದರ್ಭದಲ್ಲಿ ಈ ಮಾತಿನ ಹಿಂದಿನ ಮರ್ಮವೇನು ಎಂಬುದು ಅನೇಕರಿಗೆ ಅರಿವಾಗಿದೆ. ಉಳಿತಾಯ ಮಾಡಬೇಕು ಎಂಬ ಮಾತಿಗೆ ತತ್‌ಕ್ಷಣಕ್ಕೆ ಎದುರಾಗುವ ಪ್ರಶ್ನೆ, ಎಲ್ಲಿ ಉಳಿತಾಯ ಮಾಡಬೇಕು?, ಎಷ್ಟು ಉಳಿತಾಯ ಮಾಡಬೇಕು? ಎಂಬುದು. ತಿಂಗಳ ಆದಾಯದ ಶೇ.20ರಷ್ಟನ್ನಾದರೂ ನಿಶ್ಚಿತವಾಗಿ ಉಳಿತಾಯ ಮಾಡಲು ಸಾಧ್ಯವಾದರೆ ಒಳ್ಳೆಯದು ಎನ್ನುತ್ತಾರೆ ತಜ್ಞರು.

ಈಕ್ವಿಟಿಗಳಲ್ಲಿ ಹೂಡಿಕೆ ಮಾಡಿ
ಹಣವನ್ನು ಠೇವಣಿ ರೂಪದಲ್ಲಷ್ಟೇ ಇರಿಸಿದರೆ ಕಾಲಕ್ರಮೇಣ ಹಣದ ಮೌಲ್ಯವೇ ಕಡಿಮೆ ಆಗಿ ಬಿಡ ಬಹುದು. ಹಾಗಾಗಿ ಹಣದುಬ್ಬರ ಪ್ರಮಾಣಕ್ಕಿಂತ ಹೆಚ್ಚಿನ ಲಾಭ ತಂದು ಕೊಡುವ ಸಾಮರ್ಥ್ಯವಿರುವ ಈಕ್ವಿಟಿಗ ಳಲ್ಲಿ ಹೂಡಿಕೆ ಮಾಡುವುದು ಉತ್ತಮ.

ವಯಸ್ಸನ್ನು ಆಧರಿಸಿ ಹೂಡಿಕೆ
ಸದಾ ಏರಿಳಿತ ಕಾಣುವ ಷೇರು ಮಾರುಕಟ್ಟೆಯಲ್ಲಿ ಎಷ್ಟು ಹಣ ಹೂಡಿಕೆ ಮಾಡುವುದು ಸೂಕ್ತ ಎಂಬುದು ಸಾಮಾನ್ಯ ಪ್ರಶ್ನೆ. ಇದು ವ್ಯಕ್ತಿಯ ವಯಸ್ಸನ್ನು ಆಧರಿಸಿರುತ್ತದೆ. ವ್ಯಕ್ತಿಯ ಈಗಿನ ವಯಸ್ಸನ್ನು 100ರಿಂದ ಕಳೆದಾಗ ಎಷ್ಟು ಮೊತ್ತ ಸಿಗುತ್ತದೆಯೋ, ಅಷ್ಟು ಪ್ರಮಾಣದ ಹಣವನ್ನು ಈಕ್ವಿಟಿಗಳಲ್ಲಿ ಹೂಡಿಕೆ ಮಾಡುವುದು ಸೂಕ್ತ. ಉದಾಹರಣೆಗೆ ವ್ಯಕ್ತಿಯೊಬ್ಬನಿಗೆ ಈಗ 30 ವರ್ಷ ವಯಸ್ಸು ಎಂದಾದಲ್ಲಿ, ಆತ ತನ್ನ ಒಟ್ಟು ಉಳಿತಾಯದಲ್ಲಿ ಶೇ.70ರಷ್ಟನ್ನು ಈಕ್ವಿಟಿಗಳ ಮೇಲೆ ಹೂಡಿಕೆ ಮಾಡಬಹುದು.

ಇನ್ನುಳಿದ ಶೇ.30ರಷ್ಟನ್ನು ನಿಶ್ಚಿತ ಠೇವಣಿಗಳಲ್ಲಿ ಅಥವಾ ಸಾಲಪತ್ರಗಳಲ್ಲಿ ಹೂಡಿಕೆ ಮಾಡಬಹುದು. 70 ವರ್ಷದವರು ಈಕ್ವಿಟಿಗಳ ಮೇಲಿನ ಹೂಡಿಕೆಯನ್ನು ಶೇ.30ರಷ್ಟಕ್ಕೆ ಇಳಿಸಿ, ಇನ್ನುಳಿದ ಶೇ.70ನ್ನು ನಿಶ್ಚಿತ ಠೇವಣಿಗಳಲ್ಲಿ ಇರಿಸುವುದು ಉತ್ತಮ. ಈ ಸೂತ್ರ ವನ್ನು ಎಲ್ಲರೂ ಪಾಲಿಸಬೇಕು ಎಂದೇನೂ ಇಲ್ಲ. ಮಾರುಕಟ್ಟೆಯ ಏರಿಳಿತ ಜೀರ್ಣಿಸಿಕೊಳ್ಳುವ ಶಕ್ತಿ ಇರುವವರು ಹೆಚ್ಚಿನ ಮೊತ್ತವನ್ನು ಅಲ್ಲಿ ಹೂಡಿಕೆ ಮಾಡಬಹುದು.

ನೇರ ಹೂಡಿಕೆ ಎಚ್ಚರ ಅಗತ್ಯ
ಹಣಕಾಸು ಸೇವೆಗಳನ್ನು ಒದಗಿಸುತ್ತಿರುವ ಕೆಲವು ಆ್ಯಪ್‌ ಅತ್ಯಂತ ಸುಲಭವಾಗಿ, ಮನೆ ಯಲ್ಲಿ ಕುಳಿತೇ ಡಿಮ್ಯಾಟ್‌ ಖಾತೆ ತೆರೆ ಯುವ, ಷೇರುಗಳಲ್ಲಿ ನೇರವಾಗಿ ಹೂಡಿಕೆ ಮಾಡುವ ಸೌಲಭ್ಯ ನೀಡುತ್ತಿವೆ. ಇದು ನೇರ ವಾಗಿ ಷೇರುಗಳಲ್ಲಿ ಹೂಡಿಕೆ ಮಾಡುವ ಆಸೆಯನ್ನು ಹಲವರಲ್ಲಿ ಹುಟ್ಟಿಸಬಹುದು. ಆದರೆ ಕಂಪೆನಿಗಳ ಶಕ್ತಿ-ದೌರ್ಬಲ್ಯಗಳನ್ನು ಖು¨ªಾಗಿ ಅರ್ಥ ಮಾಡಿ ಕೊಳ್ಳುವ ಶಕ್ತಿ ಇಲ್ಲದಿದ್ದರೆ ಷೇರುಗಳಲ್ಲಿ ನೇರ ಹೂಡಿಕೆ ಬೇಡವೇ ಬೇಡ. ಮ್ಯೂಚುವಲ್‌ ಫ‌ಂಡ್‌ಗಳ ಮೂಲಕ ಷೇರುಗಳಲ್ಲಿ ಹೂಡಿಕೆ ಹೆಚ್ಚು ಸುರಕ್ಷಿತ. ಮ್ಯೂಚುವಲ್‌ ಫ‌ಂಡ್‌ಗಳನ್ನು ನಿರ್ವಹಿಸುವವರು, ಪ್ರತೀ ಕಂಪೆನಿಯ ಶಕ್ತಿ- ದೌರ್ಬಲ್ಯಗಳನ್ನು ಅರ್ಥ ಮಾಡಿಕೊಂಡು ಹಣ ಹೂಡಿಕೆ ಮಾಡಿ ಗರಿಷ್ಠ ಲಾಭವನ್ನು ತಂದು ಕೊಡುವ ಹೊಣೆ ಹೊತ್ತಿ ರುತ್ತಾರೆ. ಹಾಗಾಗಿ ಷೇರು ಮಾರುಕಟ್ಟೆಯ ಏರಿಳಿತಗಳ ಅರಿವು ಇಲ್ಲ ದವರಿಗೆ ನೇರವಾಗಿ ಷೇರು ವಹಿವಾಟು ಸೂಕ್ತ ವಲ್ಲ ಎಂಬುದು ತಜ್ಞರ ಕಿವಿಮಾತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.