2022ರ ಐಪಿಎಲ್‌ ಸಂಭ್ರಮಕ್ಕೆ ಕ್ಷಣಗಣನೆ: ಇತಿಹಾಸ ಚೆನ್ನೈ ಪರ


Team Udayavani, Mar 26, 2022, 6:14 PM IST

ಐಪಿಎಲ್‌ ಕ್ಷಣಗಣನೆ: ಇತಿಹಾಸ ಚೆನ್ನೈ ಪರ

2022ರ ಐಪಿಎಲ್‌ ಸಂಭ್ರಮಕ್ಕೆ ಕ್ಷಣಗಣನೆ ಮೊದಲ್ಗೊಂಡಿದೆ. ಕಳೆದ ಸಲದ ಫೈನಲಿಸ್ಟ್‌ಗಳಾದ ಚೆನ್ನೈ ಸೂಪರ್‌ ಕಿಂಗ್ಸ್‌ ಮತ್ತು ಕೋಲ್ಕತಾ ನೈಟ್‌ರೈಡರ್ ಇನ್ನೇನು ಕೆಲವೇ ಹೊತ್ತಿನಲ್ಲಿ ಚುಟುಕು ಕ್ರಿಕೆಟಿನ ಮಹಾಸಮರಕ್ಕಾಗಿ “ವಾಂಖೇಡೆ’ ಅಂಗಳಕ್ಕಿಳಿಯಲಿವೆ.

ಐಪಿಎಲ್‌ ಇತಿಹಾಸದಲ್ಲಿ ಕೆಕೆಆರ್‌ ವಿರುದ್ಧ ಚೆನ್ನೈ ನಿಚ್ಚಳ ಮೇಲುಗೈ ಹೊಂದಿರುವುದನ್ನು ಗಮನಿಸಬಹುದು. ಚೆನ್ನೈ 17, ಕೆಕೆಆರ್‌ 8 ಪಂದ್ಯ ಗೆದ್ದಿದೆ. 2021ರ ಋತುವಿನ ಎಲ್ಲ 3 ಪಂದ್ಯಗಳಲ್ಲೂ ಕೆಕೆಆರ್‌ ವಿರುದ್ಧ ಧೋನಿ ಪಡೆ ಜಯಭೇರಿ ಮೊಳಗಿಸಿತ್ತು. ಇದರಲ್ಲಿ ಫೈನಲ್‌ ಮುಖಾಮುಖೀಯೂ ಸೇರಿದೆ. ಇದಕ್ಕೂ ಮೊದಲು 2012ರ ಫೈನಲ್‌ನಲ್ಲಿ ಚೆನ್ನೈಯನ್ನು ಮಣಿಸಿಯೇ ಕೆಕೆಆರ್‌ ಮೊದಲ ಸಲ ಚಾಂಪಿಯನ್‌ ಆಗಿತ್ತು. ಚೆನ್ನೈಯಲ್ಲೇ ನಡೆದ ಈ ಪ್ರಶಸ್ತಿ ಕಾಳಗದಲ್ಲಿ ಗೌತಮ್‌ ಗಂಭೀರ್‌ ಪಡೆ 5 ವಿಕೆಟ್‌ಗಳ ಜಯ ಸಾಧಿಸಿ ಧೋನಿ ಬಳಗಕ್ಕೆ ಹ್ಯಾಟ್ರಿಕ್‌ ತಪ್ಪಿಸಿತ್ತು.

ಈ ಬಾರಿ ಎರಡೂ ತಂಡಗಳ ನಾಯಕತ್ವ ಬದಲಾಗಿದೆ. ಚೆನ್ನೈಗೆ 4 ಸಲ ಟ್ರೋಫಿ ತಂದಿತ್ತ ಮಹೇಂದ್ರ ಸಿಂಗ್‌ ಧೋನಿ ದಿಢೀರನೇ ರಾಜೀನಾಮೆ ನೀಡಿ ಅಚ್ಚರಿ ಮೂಡಿಸಿದ್ದಾರೆ. ಇವರ ಉತ್ತರಾಧಿಕಾರಿಯಾಗಿ ರವೀಂದ್ರ ಜಡೇಜ ನೇಮಕಗೊಂಡಿದ್ದಾರೆ.

ಇದನ್ನೂ ಓದಿ :ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಸಮಿತಿ ರಚಿಸಲಾಗಿದೆ : ಸಿಎಂ

ಕೆಕೆಆರ್‌ ಶ್ರೇಯಸ್‌ ಅಯ್ಯರ್‌ ಸಾರಥ್ಯ ಹೊಂದಿದೆ. ಡೆಲ್ಲಿ ಕ್ಯಾಪಿಟಲ್ಸ್‌ ತಂಡವನ್ನು ಮುನ್ನಡೆಸಿದ್ದ ಅನುಭವವುಳ್ಳ ಅಯ್ಯರ್‌ ಕೆಕೆಆರ್‌ ತಂಡವನ್ನು ಪ್ರತಿನಿಧಿಸುತ್ತಿರುವುದು ಇದೇ ಮೊದಲು.

ಜಡೇಜ, ಅಯ್ಯರ್‌ ಇಬ್ಬರೂ ಟೀಮ್‌ ಇಂಡಿಯಾದ ಸ್ಟಾರ್‌ ಆಟಗಾರರು. ಮೊದಲ ಪಂದ್ಯದಲ್ಲೇ ಮುಖಾಮುಖೀ ಆಗುತ್ತಿರುವುದು ವಿಶೇಷ. ಅಂದಹಾಗೆ ಮುಂಬಯಿಯವರಾದ ಅಯ್ಯರ್‌ಗೆ ವಾಂಖೇಡೆ “ಹೋಮ್‌ ಗ್ರೌಂಡ್‌’ ಆಗಿದೆ.

ಬನ್ನಿ, 15ನೇ ಐಪಿಎಲ್‌ ರೋಮಾಂಚನವನ್ನು ಸವಿಯಲು ಸಜ್ಜಾಗೋಣ…

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್‌ ಟೈಟಾನ್ಸ್‌ ರೋಡ್‌ ಶೋ; ಐಪಿಎಲ್‌ ಬೆಸ್ಟ್‌ ಇಲೆವೆನ್‌

ಗುಜರಾತ್‌ ಟೈಟಾನ್ಸ್‌ ರೋಡ್‌ ಶೋ; ಐಪಿಎಲ್‌ ಬೆಸ್ಟ್‌ ಇಲೆವೆನ್‌

1-wtwtw

ಆರೆಂಜ್ ಕ್ಯಾಪ್ ವಿಜೇತ ಜೋಸ್ ಬಟ್ಲರ್ ಗೆ ತೀವ್ರ ನಿರಾಸೆ ತಂದಿಟ್ಟ ಫೈನಲ್ ಸೋಲು

ರಣವೀರ್‌-ರೆಹಮಾನ್‌ ಕಾಂಬಿನೇಶನ್‌ ಐಪಿಎಲ್‌ ಜೈ ಹೋ

ರಣವೀರ್‌-ರೆಹಮಾನ್‌ ಕಾಂಬಿನೇಶನ್‌ ಐಪಿಎಲ್‌ ಜೈ ಹೋ

ಐಪಿಎಲ್‌ T20 ಫೈನಲ್ : ಗುಜರಾತ್‌ ಟೈಟಾನ್ಸ್‌ ಗೆ ಚಾಂಪಿಯನ್‌ ಪಟ್ಟ

ಐಪಿಎಲ್‌ T20 ಫೈನಲ್ : ಗುಜರಾತ್‌ ಟೈಟಾನ್ಸ್‌ ಗೆ ಚಾಂಪಿಯನ್‌ ಪಟ್ಟ

1-sad-dad

ಐಪಿಎಲ್‌ ಫೈನಲ್‌: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್‌ ರಾಯಲ್ಸ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.