ರೊಬೊಟಿಕ್ಸ್ ತರಬೇತಿಗೆ ಸೂಚಿಸಿದ್ದ ISIS !- ಶಿವಮೊಗ್ಗ ಪ್ರಕರಣದಲ್ಲಿ ವಿಚಾರ ಬಹಿರಂಗ
- 9 ಆರೋಪಿಗಳ ವಿರುದ್ಧ NIA ಯಿಂದ ಪೂರಕ ಆರೋಪಪಟ್ಟಿ
Team Udayavani, Jul 2, 2023, 7:04 AM IST
ಹೊಸದಿಲ್ಲಿ/ಬೆಂಗಳೂರು: ಶಿವಮೊಗ್ಗದಲ್ಲಿ ಕಳೆದ ವರ್ಷ ನಡೆದಿದ್ದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಮತ್ತು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜಾಗತಿಕ ಉಗ್ರ ಸಂಘಟನೆ ಐಸಿಸ್ ಕೈವಾಡವಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಆರೋಪಿಗಳಲ್ಲಿ ಕೆಲವರಿಗೆ ರೊಬೊಟಿಕ್ಸ್ ತರಬೇತಿ ಪಡೆಯುವಂತೆ ಐಸಿಸ್ ಹ್ಯಾಂಡ್ಲರ್ನಿಂದ ಸೂಚನೆ ಬಂದಿತ್ತು ಎಂಬ ಆಘಾತಕಾರಿ ವಿಚಾರವೂ ಬಹಿರಂಗವಾಗಿದೆ. ಈ ಪ್ರಕರಣಗಳು ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಐಸಿಸ್ ರೂಪಿಸಿದ್ದ ಸಂಚಿನ ಭಾಗವಾಗಿದ್ದವು ಎಂಬುದೂ ತನಿಖೆಯಿಂದ ಸಾಬೀತಾಗಿದೆ.
ಶಿವಮೊಗ್ಗದ ಉಗ್ರ ಸಂಚು ಪ್ರಕರಣ ಸಂಬಂಧ ಶುಕ್ರವಾರ 9 ಮಂದಿ ಆರೋಪಿಗಳ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ) ಪೂರಕ ಆರೋಪಪಟ್ಟಿ ಸಲ್ಲಿಸಿದ್ದು, ಅದರಲ್ಲಿ ಹಲವು ಹೊಸ ಅಂಶಗಳನ್ನು ಬಹಿರಂಗಪಡಿಸಲಾಗಿದೆ. ಚಾರ್ಜ್ಶೀಟ್ನಲ್ಲಿ ಹೆಸರಿಸಲಾದ ಐವರು ಆರೋಪಿಗಳು ಟೆಕ್ನಿಕಲ್ ಹಿನ್ನೆಲೆ ಹೊಂದಿದ್ದು, ಅವರಿಗೆ ರೊಬೊಟಿಕ್ಸ್ ತರಬೇತಿ ಪಡೆದು ಉಗ್ರ ಕೃತ್ಯಕ್ಕೆ ಅಗತ್ಯವಿರುವ ಕೌಶಲ ಪಡೆಯುವಂತೆ ಸೂಚಿಸಲಾಗಿತ್ತು ಎಂದು ಉಲ್ಲೇಖೀಸಲಾಗಿದೆ.
ಆರೋಪಿಗಳು ಯಾರು?
ಮೊಹಮ್ಮದ್ ಶಾರೀಕ್(25), ಮಾಜ್ ಮುನೀರ್ ಅಹ್ಮದ್(23), ಸಯ್ಯದ್ ಯಾಸೀನ್(22), ರೀಶಾನ್ ತಾಜುದ್ದೀನ್ ಶೇಖ್(22), ಹುಜೈರ್ ಫರ್ಹಾನ್ ಬೇಗ್(22), ಮಾಜಿನ್ ಅಬ್ದುಲ್ ರೆಹಮಾನ್(22), ನದೀಂ ಅಹ್ಮದ್ ಕೆ. ಎ. (22), ಝಬೀವುಲ್ಲಾ (32) ಮತ್ತು ನದೀಮ್ ಫೈಜಲ್ ಎನ್.(27) ಹೆಸರುಗಳು ಆರೋಪಪಟ್ಟಿಯಲ್ಲಿವೆ. ಇವರೆಲ್ಲರೂ ಕರ್ನಾಟಕದವರೇ ಆಗಿದ್ದು, ಇವರ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ, ಐಪಿಸಿ ಮತ್ತು ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ.
ಕ್ರಿಮಿನಲ್ ಸಂಚು
ಶಾರೀಕ್, ಮುನೀರ್ ಮತ್ತು ಯಾಸೀನ್ ಐಸಿಸ್ ಹ್ಯಾಂಡ್ಲರ್ನೊಂದಿಗೆ ಸೇರಿ ಭಾರತದಲ್ಲಿ ಭಯೋತ್ಪಾದನೆ ಮತ್ತು ಹಿಂಸಾಚಾರಕ್ಕೆ ಕುಮ್ಮಕ್ಕು ನೀಡುವಂಥ ಕೃತ್ಯಗಳನ್ನು ಎಸಗಲು ಕ್ರಿಮಿನಲ್ ಸಂಚು ರೂಪಿಸಿದ್ದರು. ಈ ಮೂವರು ದೇಶದ ಭದ್ರತೆ, ಏಕತೆ ಮತ್ತು ಸಾರ್ವಭೌಮತೆಗೆ ಧಕ್ಕೆ ತರುವ ಉದ್ದೇಶದಿಂದಲೇ ಸಹ ಆರೋಪಿಗಳನ್ನು ನೇಮಕ ಮಾಡಿಕೊಂಡಿದ್ದರು ಎಂದೂ ಎನ್ಐಎ ಆರೋಪಪಟ್ಟಿಯಲ್ಲಿ ಉಲ್ಲೇಖೀಸಿದೆ. ಆನ್ಲೈನ್ ಹ್ಯಾಂಡ್ಲರ್ ಎಲ್ಲ ಆರೋಪಿಗಳಿಗೂ ಕ್ರಿಪ್ಟೋಕರೆನ್ಸಿ ಮೂಲಕ ಹಣ ರವಾನಿಸುತ್ತಿದ್ದ.
ಕಳೆದ ವರ್ಷದ ಸೆ. 19ರಂದು ಶಿವಮೊಗ್ಗ ಗ್ರಾಮೀಣ ಪೊಲೀಸರು ಈ ಪ್ರಕರಣ ಸಂಬಂಧ ಆರಂಭದಲ್ಲಿ ಕೇಸು ದಾಖಲಿಸಿಕೊಂಡಿದ್ದರು. ಅನಂತರದಲ್ಲಿ ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ನ.15ರಂದು ರಾಷ್ಟ್ರೀಯ ತನಿಖಾ ಸಂಸ್ಥೆ ತನಿಖೆಯನ್ನು ಕೈಗೆತ್ತಿಕೊಂಡು, ಹೊಸದಾಗಿ ಕೇಸು ನೋಂದಣಿ ಮಾಡಿಕೊಂಡಿತ್ತು.
ಕೌಶಲಕ್ಕಾಗಿ ಕೋರ್ಸ್
ಈ ಪೈಕಿ ಅಹ್ಮದ್ ಮತ್ತು ಸಯ್ಯದ್ ಯಾಸಿನ್ ಹೆಸರನ್ನು ಮಾರ್ಚ್ ತಿಂಗಳಲ್ಲಿ ಸಲ್ಲಿಸಿದ್ದ ಚಾರ್ಜ್ಶೀಟ್ನಲ್ಲೇ ಉಲ್ಲೇಖೀಸಲಾಗಿತ್ತು. ಅವರ ವಿರುದ್ಧ ಈಗ ಇನ್ನೂ ಕೆಲವು ಆರೋಪಗಳನ್ನು ಹೊರಿಸಲಾಗಿದೆ. ಇವರಿಬ್ಬರೂ ರೀಶಾನ್ ತಾಜುದ್ದೀನ್ ಶೇಖ್, ಮಜಿನ್ ಅಬ್ದುಲ್ ರೆಹಮಾನ್ ಮತ್ತು ನದೀಮ್ ಅಹ್ಮದ್ ಕೆ.ಎ. ಅವರೊಂದಿಗೆ ಮೆಕ್ಯಾನಿಕಲ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡಿದ್ದರು. ಇವರೆಲ್ಲರಿಗೂ ಭಾರತದಲ್ಲಿ ಇಸ್ಲಾಮಿಕ್ ಸ್ಟೇಟ್ ಅಜೆಂಡಾವನ್ನು ಮುಂದಕ್ಕೆ ಕೊಂಡೊಯ್ಯಲು ಹಾಗೂ ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಅಗತ್ಯವಿರುವ ಕೌಶಲ್ಯಗಳನ್ನು ಹೊಂದಲು ರೊಬೊಟಿಕ್ಸ್ ಕೋರ್ಸ್ ಮಾಡುವಂತೆ ವಿದೇಶಿ ಮೂಲದ ಐಸಿಸ್ ಹ್ಯಾಂಡ್ಲರ್ ಸೂಚಿಸಿದ್ದ ಎಂದು ಚಾರ್ಜ್ಶೀಟ್ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
Bellary; ಕಳ್ಳರೊಂದಿಗೆ ಸೇರಿದ ಪೊಲೀಸನ ಕತೆ; ದರೋಡೆ ಪ್ರಕರಣದಲ್ಲಿ ಪೇದೆ ಸೇರಿ 6 ಮಂದಿ ಬಂಧನ
Firing; ಕಲಬುರಗಿಯಲ್ಲಿ ಗುಂಡಿನ ಸದ್ದು; ಕೊಲೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Belagavi; ದರ್ಬಾರ್ ಗಲ್ಲಿಯಲ್ಲಿ ಪ್ಯಾಲೆಸ್ತೀನ್ ಧ್ವಜದ ಮಾದರಿಯ ಪೆಂಡಾಲ್!
Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ
Desi Swara: ಅಮೆರಿಕ ಕನ್ನಡತಿ ಕಲಾಶ್ರೀ, ನೃತ್ಯಗುರು ಸುಪ್ರಿಯಾ ದೇಸಾಯಿಗೆ ಸಮ್ಮಾನ
Shiruru; ನಾಪತ್ತೆಯಾಗಿದ್ದ ಕೇರಳದ ಅರ್ಜುನನ ಲಾರಿ ಪತ್ತೆ; ಈಶ್ವರ್ ಮಲ್ಪೆ ತಂಡದ ಕಾರ್ಯಾಚರಣೆ
World Rivers Day: ಸೆ.22 ವಿಶ್ವ ನದಿಗಳ ದಿನ- ನಿತ್ಯ ಬದುಕಿನ ಜೀವನಾಡಿಯ ಮೂಲ “ನದಿ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.