Israel-Hamas War:ಹಮಾಸ್ ದಾಳಿಗೆ 1 ವರ್ಷ-ಇಸ್ರೇಲ್ ಮೇಲೆ ಹೆಜ್ಬುಲ್ಲಾ ದಾಳಿ, ಪ್ರತಿದಾಳಿ
ಇಸ್ರೇಲ್ ಕೂಡಾ ಗಾಜಾಪಟ್ಟಿ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ.
Team Udayavani, Oct 7, 2024, 12:14 PM IST
ಗಾಜಾ(ಇಸ್ರೇಲ್): ಇಸ್ರೇಲ್ ಮೇಲೆ ಹಮಾಸ್ ನಡೆಸಿದ್ದ ದಾಳಿಗೆ ಸೋಮವಾರ (ಅ.07) ಒಂದು ವರ್ಷವಾಗಿದ್ದು, ಉಭಯ ದೇಶಗಳ ನಡುವಿನ ಸಂಘರ್ಷ ಈಗ ತೀವ್ರ ಸ್ವರೂಪ ತಾಳಿದ್ದು, ಯುದ್ಧಕ್ಕೆ ನಾಂದಿ ಹಾಡಿದೆ.
ಇಸ್ರೇಲ್ ಸೇನೆ ಲೆಬನಾನ್ ನ ಹೆಜ್ಬುಲ್ಲಾ ಭಯೋತ್ಪಾದಕರನ್ನು ಗುರಿಯಾಗಿರಿಸಿಕೊಂಡು ದಾಳಿಯನ್ನು ಮುಂದುವರಿಸಿದೆ. ಬೈರುತ್ ನಲ್ಲಿರುವ ಹೆಜ್ಬುಲ್ಲಾ ಪ್ರದಾನ ಗುಪ್ತಚರ ಕೇಂದ್ರದ ಮೇಲೆ ಇಸ್ರೇಲ್ ಯುದ್ಧ ವಿಮಾನ ದಾಳಿ ನಡೆಸಿರುವುದಾಗಿ ವರದಿ ತಿಳಿಸಿದೆ.
ಇಸ್ರೇಲ್ ದಾಳಿಗೆ ಹೆಜ್ಬುಲ್ಲಾ ಪ್ರತಿದಾಳಿ:
ಇಸ್ರೇಲ್ ಕ್ಷಿಪಣಿ, ರಾಕೆಟ್ ದಾಳಿಗೆ ಪ್ರತಿಯಾಗಿ ಹೆಜ್ಬುಲ್ಲಾ ಭಯೋತ್ಪಾದಕರು ಇಸ್ರೇಲ್ ನ 3ನೇ ದೊಡ್ಡ ನಗರವಾದ ಹೈಫಾ ಮೇಳೆ ದಾಳಿ ನಡೆಸಿದ್ದು, ಹತ್ತು ಜನರು ಗಾಯಗೊಂಡಿರುವುದಾಗಿ ಇಸ್ರೇಲ್ ಮಾಧ್ಯಮ ವರದಿ ಮಾಡಿದೆ.
ಇಸ್ರೇಲ್ ಕೂಡಾ ಗಾಜಾಪಟ್ಟಿ ಮೇಲೆ ವೈಮಾನಿಕ ದಾಳಿ ನಡೆಸಿದ್ದು, 26 ಮಂದಿ ಸಾವನ್ನಪ್ಪಿದ್ದಾರೆ. ಹಮಾಸ್ ಉಗ್ರರ ಮೇಲಿನ ದಾಳಿಯನ್ನು ಇನ್ನಷ್ಟು ಬಿರುಸುಗೊಳಿಸುವುದಾಗಿ ಇಸ್ರೇಲ್ ಘೋಷಿಸಿದೆ.
2023ರ ಅಕ್ಟೋಬರ್ 7ರಂದು ಹಮಾಸ್ ಭಯೋತ್ಪಾದಕರ ಸಂಘಟನೆ ಇಸ್ರೇಲ್ ಮೇಲೆ ಸಾವಿರಾರು ರಾಕೆಟ್ ದಾಳಿ ನಡೆಸಿತ್ತು. ಇಸ್ರೇಲ್ ನಲ್ಲಿ ನಡೆಯುತ್ತಿದ್ದ ಮ್ಯೂಸಿಕ್ ಫೆಸ್ಟಿವಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಸುಮಾರು 1,200 ಜನರು ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದರು. ಅಲ್ಲದೇ 250ಕ್ಕೂ ಅಧಿಕ ಜನರನ್ನು ಒತ್ತೆಯಾಳನ್ನಾಗಿ ಇರಿಸಿಕೊಂಡಿದ್ದರು.
ಈ ದಾಳಿಯ ನಂತರ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು(Benjamin Netanyahu) ಗಾಜಾ ಮೇಲೆ ಯುದ್ಧ ಘೋಷಿಸಿದ್ದರು. ಇಸ್ರೇಲ್ ದಾಳಿಯಲ್ಲಿ ಅಂದಾಜು 42,000 ಜನರು ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ. ಬಳಿಕ ಲೆಬನಾನ್ ನಲ್ಲಿರುವ ಇರಾನ್ ಬೆಂಬಲಿತ ಹೆಜ್ಬುಲ್ಲಾ, ಇರಾಕ್, ಸಿರಿಯಾದಲ್ಲಿರುವ ಉಗ್ರರನ್ನು ಗುರಿಯಾಗಿರಿಸಿ ಇಸ್ರೇಲ್ ದಾಳಿಯನ್ನು ಮುಂದುವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explosion: ಕರಾಚಿ ಏರ್ ಪೋರ್ಟ್ ಬಳಿ ಭೀಕರ ಸ್ಫೋಟ: ಇಬ್ಬರು ಚೀನಾ ಪ್ರಜೆಗಳು ಮೃತ್ಯು
Lebanon ಪೇಜರ್ ಸ್ಫೋ*ಟಕ್ಕೆ ಮೊಸಾದ್ 2 ವರ್ಷದ ಯೋಜನೆ ಹೇಗಿತ್ತು?
Canada: ವೇಟರ್ ಕೆಲಸಕ್ಕೆ 3,000 ಭಾರತೀಯ ವಿದ್ಯಾರ್ಥಿಗಳ ಕ್ಯೂ!
Pakistan; ರಾಜಕೀಯ ಅಸ್ಥಿರತೆಯ ಬಿರುಗಾಳಿ: ಇಮ್ರಾನ್ ಪರ ಭಾರೀ ಪ್ರತಿಭಟನೆ,ಹಿಂಸೆ
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Karkala: ಮಕ್ಕಳ ಕೈಯ್ಯಲ್ಲಿ ಹೂವಿನಕೋಲು!; ನವರಾತ್ರಿ ವಿಶೇಷ ಆಚರಣೆ ಮುಂದುವರಿಸುವ ಮಕ್ಕಳು
Vijayapura: ಸಿದ್ದರಾಮಯ್ಯ ಜತೆ ಕಾಂಗ್ರೆಸ್ ಹೈಕಮಾಂಡ್ ಇದೆ, ವಿಜಯೇಂದ್ರ ಯಾರು?: ಸಚಿವ ಜಮೀರ್
Kuppepadav: ಅಶಕ್ತರ ನೆರವಿಗೆ ವೇಷ ಹಾಕಿದ ಯುವಕರು
Coal Mine: ಕಲ್ಲಿದ್ದಲು ಗಣಿಯಲ್ಲಿ ಭೀಕರ ಸ್ಫೋಟ.. 7 ಮಂದಿ ಮೃತ್ಯು, ಹಲವು ಕಾರ್ಮಿಕರಿಗೆ ಗಾಯ
Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.