ದಿನದಿಂದ ದಿನಕ್ಕೆ ಕಾಂಗ್ರೆಸ್‌ ದುರ್ಬಲವಾಗುತ್ತಿರುವುದು ನಿಜ : ಕಪಿಲ್‌ ಸಿಬಲ್‌ ಕಳವಳ


Team Udayavani, Feb 28, 2021, 6:40 AM IST

ದಿನದಿಂದ ದಿನಕ್ಕೆ ಕಾಂಗ್ರೆಸ್‌ ದುರ್ಬಲವಾಗುತ್ತಿರುವುದು ನಿಜ : ಕಪಿಲ್‌ ಸಿಬಲ್‌ ಕಳವಳ

ಜಮ್ಮು/ಹೊಸದಿಲ್ಲಿ : ಕಾಂಗ್ರೆಸ್‌ ಒಳಗಿನ ಆಂತರಿಕ ಬಿಕ್ಕಟ್ಟು ಮತ್ತಷ್ಟು ಉಲ್ಬಣಿಸಿದೆ. ಪಕ್ಷದ ಹಿರಿಯ ನಾಯಕ ಗುಲಾಂ ನಬಿ ಆಜಾದ್‌ ಅವರಿಗೆ ಗೌರವ ಸೂಚಿಸುವ ಸಂಬಂಧ ಜಮ್ಮುವಿನಲ್ಲಿ ಏರ್ಪಡಿಸಲಾಗಿದ್ದ ಜಿ-23 ಸಭೆಯಲ್ಲಿ ಕಾಂಗ್ರೆಸ್‌ಹಾಲಿ ಸ್ಥಿತಿ ಬಗ್ಗೆ ಹಿರಿಯ ನಾಯಕರೇ ಕಳವಳ ವ್ಯಕ್ತಪಡಿಸಿದ್ದಾರೆ. ಶಾಂತಿ ಸಮ್ಮೇಳನದ ಹೆಸರಿನಲ್ಲಿ ನಡೆದ ಈ ಸಮಾವೇಶದಲ್ಲಿ ಮಾತನಾಡಿದ ಕಪಿಲ್‌ ಸಿಬಲ್‌, ಸತ್ಯವೇನೆಂದರೆ ನಾವು ಇಂದು ಕಾಂಗ್ರೆಸ್‌ ಪಕ್ಷ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿರುವುದನ್ನು ನೋಡುತ್ತಿದ್ದೇವೆ ಎಂದು ಹೇಳಿದ್ದಾರೆ. ಈ ಮೂಲಕ ಮತ್ತೂಮ್ಮೆ ಪಕ್ಷದ ನಾಯಕರ ನಾಯಕತ್ವ ಶೈಲಿಯ ಬಗ್ಗೆ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಪಕ್ಷವು ದುರ್ಬಲವಾಗುತ್ತಿದೆ ಎಂಬುದು ಸತ್ಯ. ಇದರಿಂದಾಗಿಯೇ ನಾವು ಇಲ್ಲಿ ಸೇರಿದ್ದೇವೆ. ಹಿಂದೆಯೂ ನಾವು ಕಾಂಗ್ರೆಸ್‌ ಪಕ್ಷವನ್ನು ಬಲಪಡಿಸುವ ಸಲುವಾಗಿ ಒಂದಾಗಿದ್ದೆವು ಎಂದು ಕಪಿಲ್‌ ಸಿಬಲ್‌ ಹೇಳಿದರು.

ಮತ್ತೂಬ್ಬ ನಾಯಕ ಆನಂದ್‌ ಶರ್ಮ ಅವರು ಮಾತನಾಡಿ, ನಮ್ಮ ಧ್ವನಿ ಪಕ್ಷವನ್ನು ಗಟ್ಟಿ ಮಾಡುವುದಕ್ಕಾಗಿದೆ . ಈ ಹಿಂದೆಯೂ ನಾವು ಈ ಬಗ್ಗೆ ಮಾತನಾಡಿದ್ದೆವು. ಮುಂದಿನ ದಿನಗಳಲ್ಲಿ ಉತ್ತಮವಾದ ಘಳಿಗೆ ಕಾಣಲಿದ್ದೇವೆ ಎಂದರು.

ಮತ್ತೂಬ್ಬ ಕಾಂಗ್ರೆಸ್‌ ರಾಜಕಾರಣಿ ರಾಜ್‌ ಬಬ್ಬರ್‌ ಅವರು ಮಾತನಾಡಿ, ನಮ್ಮನ್ನು ಜಿ-23 ಎಂದು ಕರೆಯುತ್ತಾರೆ. ಆದರೆ ನಾವು ಗಾಂಧಿ 23. ಕಾಂಗ್ರೆಸ್‌ ಗಟ್ಟಿಗೊಳ್ಳಬೇಕು, ಇದೇ ಜಿ-23ಕ್ಕೆ ಬೇಕಾಗಿರುವುದು ಎಂದಿದ್ದಾರೆ.

ರಾಹುಲ್‌ಗೆ ಆಜಾದ್‌ ಟಾಂಗ್‌
ಉತ್ತರ ಭಾರತ ಮತ್ತು ದಕ್ಷಿಣ ಭಾರತದ ನಡುವೆ ಹೋಲಿಕೆ ಮಾಡಿ ಮಾತನಾಡಿದ್ದ ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಅವರಿಗೆ ಪರೋಕ್ಷವಾಗಿ ಟಾಂಗ್‌ ನೀಡಿದ ಗುಲಾಂ ನಬಿ ಆಜಾದ್‌, “ನೀವು ಜಮ್ಮು-ಕಾಶ್ಮೀರದವರಾಗಿರಿ ಅಥವಾ ಲಡಾಖ್‌ನವರಾಗಿರಿ; ನಾವು ಎಲ್ಲ ಧರ್ಮ, ಜನ ಮತ್ತು ಜಾತಿಗಳಿಗೆ ಗೌರವ ನೀಡಬೇಕು. ಇದೇ ನಮ್ಮ ಶಕ್ತಿ, ಇದನ್ನು ಮುಂದುವರಿಸುತ್ತೇವೆ ಎಂದಿದ್ದಾರೆ.

ನಾವು ಯಾರ ವಿರುದ್ಧವೂ ಅಲ್ಲ
ಜಿ -23 ಬಗ್ಗೆ ಉಲ್ಲೇಖೀಸಿದ ಆಜಾದ್‌, ಇದು ಮಾಧ್ಯಮಗಳು ಸೃಷ್ಟಿಸಿದ ಪದ. ನಾವು ಯಾರ ವಿರುದ್ಧವೂ ಅಲ್ಲ. ನಾವು ಪಕ್ಷವನ್ನು ಬಲಪಡಿಸುವ ಪ್ರಯತ್ನ ಮಾಡುತ್ತಿದ್ದೇವೆ, ಹಲವಾರು ಮಂದಿ ದೇಶವನ್ನು ವಿಭಜಿಸಲು ನೋಡುತ್ತಿದ್ದಾರೆ, ನಾವು ಅಭಿವೃದ್ಧಿಯ ಸಂಕಲ್ಪ ಮಾಡಿದ್ದೇವೆ ಎಂದರು. ಜತೆಗೆ, “ನಾನು ರಾಜ್ಯಸಭೆಯಿಂದ ನಿವೃತ್ತಿಯಾಗಿರಬಹುದು. ಆದರೆ ಸಕ್ರಿಯ ರಾಜಕಾರಣದಿಂದ ಅಲ್ಲ, ನನ್ನ ಹೋರಾಟ ಮುಂದೆಯೂ ಹಾಗೆಯೇ ಇರುತ್ತದೆ ಎಂದೂ ಘೋಷಿಸಿದರು.

ಆಜಾದ್‌ ಅನುಭವ ಬೇಕಿತ್ತು
ಗುಲಾಂ ನಬಿ ಆಜಾದ್‌ ಅವರನ್ನು ರಾಜ್ಯಸಭೆಯಲ್ಲಿ ಮುಂದುವರಿಸದೆ ಇರುವ ಪಕ್ಷದ ನಿರ್ಧಾರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಕಪಿಲ್‌ ಸಿಬಲ್‌, ಅನುಭವಿ ರಾಜಕಾರಣಿ ಆಜಾದ್‌ ರಾಜ್ಯಸಭೆಯಿಂದ ಹೊರಗೆ ಬಂದಿರುವುದು ಬೇಸರ ತಂದಿದೆ ಎಂದಿದ್ದಾರೆ.
ಆಜಾದ್‌ ಅವರಿಗೆ ದೇಶದ ಪ್ರತೀ ಜಿಲ್ಲೆಯ ಪರಿಚಯವಿದೆ. ಇಂಥವರನ್ನು ಮುಂದುವರಿಸಬೇಕಿತ್ತು ಎಂದಿದ್ದಾರೆ.

ಟಾಪ್ ನ್ಯೂಸ್

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.