![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 10, 2022, 10:00 PM IST
ಬೆಂಗಳೂರು: ತೆರಿಗೆ ವಂಚನೆ ಆರೋಪದಲ್ಲಿ ಖಾಸಗಿ ಕಾರ್ಪೊರೇಟ್ ಕಂಪನಿಗಳ ಮುಖ್ಯಸ್ಥರು, ವ್ಯವಸ್ಥಾಪಕರು, ನಿರ್ದೇಶಕರು ಹಾಗೂ ಕೆಲ ಉದ್ಯಮಿಗಳ ನಿವಾಸ, ಕಚೇರಿ ಮೇಲೆ ಶುಕ್ರವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ (ಐಟಿ) ದಾಳಿ ನಡೆಸಿ ಮಹತ್ವದ ದಾಖಲೆ ಕಲೆ ಹಾಕಿದೆ.
ಬೆಂಗಳೂರಿನ ಸಂಜಯನಗರದ ರಾಜ್ ವಿಲಾಸ್ ಪ್ಯಾಲೇಸ್, ಕೋಡಿಗೆಹಳ್ಳಿ ಬ್ರಿಗೆಡ್ ಓಪಸ್ ಕಂಪನಿ, ಹೆಬ್ಟಾಳ, ಬಿಡದಿ, ಚಿಕ್ಕಬಳ್ಳಾಪುರ, ರಾಮನಗರದ ವಿವಿಧ ಸ್ಥಳಗಳಲ್ಲಿರುವ ಕಾರ್ಪೊರೇಟ್ ಕಂಪನಿಯ ಉನ್ನತ ಹುದ್ದೆಯಲ್ಲಿರುವವರ ನಿವಾಸ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ರಾಜ್ಯಾದ್ಯಂತ 15ಕ್ಕೂ ಅಧಿಕ ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದ್ದು, ದಾಳಿಗೊಳಗಾದವರ ಕುರಿತು ಮಾಹಿತಿ ನೀಡಲು ಐಟಿ ಮೂಲಗಳು ನಿರಾಕರಿಸಿವೆ.
ದಾಳಿಗೊಳಗಾದವರು ಭಾರೀ ಪ್ರಮಾಣದ ತೆರಿಗೆ ವಂಚಿಸಿರುವುದು ತನಿಖೆಯಲ್ಲಿ ಕಂಡು ಬಂದಿತ್ತು. ಕಳೆದ ಕೆಲ ತಿಂಗಳಿನಿಂದ ಈ ಬಗ್ಗೆ ನಿಗಾ ಇಟ್ಟಿದ್ದ ಐಟಿ ಅಧಿಕಾರಿಗಳು, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಲೆ ಹಾಕಿದ್ದರು. ಆ ವೇಳೆ ಭಾರೀ ಪ್ರಮಾಣದ ತೆರಿಗೆ ವಂಚಿಸಿರುವುದು ಗೊತ್ತಾಗಿದೆ.
ಕಾರ್ಯಪ್ರವೃತ್ತರಾದ ಅಧಿಕಾರಿಗಳು ತಮ್ಮ ಕೈ ಸೇರಿದ ದಾಖಲೆಯ ಆಧಾರದ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆಸ್ತಿ ಪಾಸ್ತಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿದ್ದಾರೆ.
ದಾಳಿ ಬಳಿಕ ಮುಂದೇನು?: ದಾಳಿ ಮುಕ್ತಾಯಗೊಂಡ ಬಳಿಕ ಜಪ್ತಿ ಮಾಡಿರುವ ದಾಖಲೆ ಪರಿಶೀಲಿಸಲಾಗುವುದು. ನಂತರ ದಾಳಿಗೊಳಗಾದವರಿಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ಕೊಟ್ಟು ಸ್ಪಷ್ಟನೆ ಪಡೆಯಲಾಗುತ್ತದೆ. ವಿಚಾರಣೆಗೆ ಹಾಜರಾಗುವ ವೇಳೆ ದಾಳಿಗೊಳಗಾದವರು ಹೊಂದಿರುವ ಆಸ್ತಿ, ಉದ್ಯಮ, ಕಂಪನಿ, ಬ್ಯಾಂಕ್ ಬ್ಯಾಲೆನ್ಸ್ ವಿವರ ಸೇರಿ ಇನ್ನಿತರ ಕೆಲ ಮಾಹಿತಿಗಳಿಗೆ ಸಂಬಂಧಿಸಿದ ದಾಖಲೆ ಸಲ್ಲಿಸುವಂತೆ ಸೂಚಿಸಲಾಗುತ್ತದೆ ಎಂದು ಐಟಿ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.