![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 21, 2021, 9:26 AM IST
ನವದೆಹಲಿ:ಕೋವಿಡ್ ಸೋಂಕಿನ ಭೀತಿಯ ನಡುವೆಯೇ ಸೋಮವಾರ(ಜೂನ್ 21) ಜಗತ್ತಿನಾದ್ಯಂತ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇಂಡೋ-ಟಿಬೇಟಿಯನ್ ಗಡಿ ಭದ್ರತಾ ಪಡೆ(ಐಟಿಬಿಪಿ) ಯೋಧರು ಲಡಾಖ್ ನಲ್ಲಿ ಬರೋಬ್ಬರಿ ಹದಿನೆಂಟು ಸಾವಿರಕ್ಕೂ ಎತ್ತರದ ಪ್ರದೇಶದಲ್ಲಿ ಹಿಮಪಾತ ಹಾಗೂ ಮೈಕೊರೆಯುವ ಚಳಿಯ ನಡುವೆ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆ ಆಚರಿಸಿದ್ದಾರೆ.
ಇದನ್ನೂ ಓದಿ:ಲಷ್ಕರ್ ಸಂಘಟನೆಯ ಕಮಾಂಡರ್ ಸೇರಿದಂತೆ ಮೂವರು ಉಗ್ರರನ್ನು ಹತ್ಯೆ ಮಾಡಿದ ಸೇನಾ ಪಡೆ
ಗಡಿ ಭದ್ರತಾ ಪಡೆಯ “ಹಿಮವೀರರು” ಕೂಡಾ ಲಡಾಖ್ ನ ಪಾಂಗೋಂಗ್ ತ್ಸೊ ಸರೋವರ ಪ್ರದೇಶದಲ್ಲಿ ಯೋಗಾಭ್ಯಾಸ ಮಾಡುವ ಮೂಲಕ ಗಮನ ಸೆಳೆದಿರುವುದಾಗಿ ವರದಿ ತಿಳಿಸಿದೆ.
ಏಳನೇ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಐಟಿಬಿಪಿ ಪಡೆ ಈ ಬಾರಿ ಲಡಾಖ್ ನ 18 ಸಾವಿರ ಅಡಿ ಎತ್ತರದ ಪ್ರದೇಶದಲ್ಲಿ ನಡೆಸಿದೆ. ಹಿಂದಿನ ವರ್ಷಗಳಲ್ಲಿಯೂ ಐಟಿಬಿಪಿ ಯೋಧರು ಲಡಾಖ್ ನ ವಿವಿಧ ಎತ್ತರದ ಪ್ರದೇಶದಲ್ಲಿ ಯೋಗಾಭ್ಯಾಸ ನಡೆಸಿದ್ದರು.
#Himveers of #ITBP practicing #Yoga at the banks of Pangong Tso, Ladakh on #InternationalDayOfYoga.#InternationalYogaDay #YogaForWellness #YogaForHealth #अंतर्राष्ट्रीययोगदिवस @nwftr_itbp pic.twitter.com/gMdJvEH1IW
— ITBP (@ITBP_official) June 21, 2021
ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಐಟಿಬಿಪಿಯ ಕೆಲವು ಯೋಧರು ಹಿಮಾಚಲ್ ಪ್ರದೇಶದ 16 ಸಾವಿರ ಅಡಿ ಎತ್ತರದಲ್ಲಿ, ಲಡಾಖ್ ನ ಪಾಂಗೋಂಗ್ ತ್ಸೋ ಪ್ರದೇಶದ 14 ಸಾವಿರ ಅಡಿ ಎತ್ತರದ ಪ್ರದೇಶದಲ್ಲಿ ಯೋಗಪ್ರದರ್ಶನ ನೀಡಿದರು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.