![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Dec 15, 2021, 5:44 PM IST
ಮೈಸೂರು : ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಹೊರಬಿದ್ದ ಮರುದಿನವೇ ಜೆಡಿಎಸ್ ಶಾಸಕ ಸಾ ರಾ ಮಹೇಶ್ ಮೈಸೂರಿನಲ್ಲಿ ಬುಧವಾರ ದಿಢೀರ್ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ದಾರೆ.
ಮೈಸೂರಿನಲ್ಲಿ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಸ್ ಅಭ್ಯರ್ಥಿಗೆ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಮತಗಳು ಬಂದಿವೆ.ಈ ಮೂಲಕ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂಬುದನ್ನು ಜೆಡಿಎಸ್ ಕಾರ್ಯಕರ್ತರು ಸಾಬೀತು ಮಾಡಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದೆ, ಜಿಲ್ಲಾ ಉಸ್ತುವಾರಿ ಸಚಿವರು ಮೈಸೂರಿನಲ್ಲೇ ಇದ್ದುಕೊಂಡು ಪ್ರಚಾರ ನಡೆಸಿದ್ದರು.ಇದೆಲ್ಲದರ ನಡುವೆಯೂ ಜೆಡಿಸ್ ಅಭ್ಯರ್ಥಿ ಕಳೆದ ಬಾರಿಗಿಂತ ಹೆಚ್ಚಿನ ಮತ ಪಡೆದು ಆಯ್ಕೆಯಾಗಿದ್ದಾರೆ. ಜೆಡಿಸ್ ಪ್ರಬಲವಾಗಿದೆ ಎಂಬುದನ್ನು ಈ ಚುನಾವಣೆ ಸಾಬೀತು ಪಡಿಸಿದೆ ಎಂದರು.
ನನ್ನನ್ನು ಸೇರಿದಂತೆ ನಮಗೆ ಜೆಡಿಎಸ್ ಅನಿವಾರ್ಯವೇ ಹೊರತು, ಜೆಡಿಎಸ್ ಗೆ ನಾವು ಅನಿವಾರ್ಯವಲ್ಲ ಎಂಬುದನ್ನು ಈ ಚುನಾವಣೆ ಫಲಿತಾಂಶ ತೋರಿಸಿದೆ ಎಂದರು.
ಈಗಲಾದರೂ ಪಕ್ಷದಲ್ಲಿದ್ದುಕೊಂಡು ವಿರೋಧಿ ಕೆಲಸ ಮಾಡುತ್ತಿರುವವರು ಚಿಂತನೆ ಮಾಡಿ, ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ. ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ನಾಯಕರುಗಳು ಎಷ್ಟೇ ನೋವು ಕೊಟ್ಟರೂ ಅದನ್ನು ಕಾರ್ಯಕರ್ತರು ಸಹಿಸಿಕೊಂಡಿದ್ದಾರೆ. ಹಾಗಾಗಿ ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ನಾಯಕರು ಅರ್ಥ ಮಾಡಿಕೊಳ್ಳಿ.ನಾವು ನಿಮ್ಮನ್ನು ನಾಯಕರೆಂದು ಒಪ್ಪಿಕೊಂಡಿದ್ದೇವೆ. ನೀವು ಇತರರಿಗೆ ಮಾರ್ಗದರ್ಶನ ನೀಡಿ.ನೀವು ನಮ್ಮ ಪಕ್ಷದ ಚಿನ್ನೆ, ಕಾರ್ಯಕರ್ತರ ಶ್ರಮದಿಂದ ಗೆದ್ದಿದ್ದೀರಾ. ಹಾಗಾಗಿ ನೀವು ನಮ್ಮ ಪಕ್ಷದ ಪರವಾಗಿ ಕೆಲಸ ಮಾಡಿ.ಅವರ ಮನಸ್ಸು ಈಗಲಾದರೂ ಬದಲಾಗಬಹುದು ಎಂಬ ನಿರೀಕ್ಷೆಯಲ್ಲಿದ್ದೇನೆ ಎಂದು ಶಾಸಕ ಜಿ ಟಿ ದೇವೆಗೌಡರ ಹೆಸರು ಹೇಳದೇ ಟಾಂಗ್ ನೀಡಿದರು.
ಕುಂಕುಮ ಕೊಟ್ಟರು, ದುಡ್ಡು ಕೊಟ್ಟರು ಅಂತಾ ನಮ್ಮ ಶಾಸಕರೇ ಹೇಳಿದ್ದಾರೆ.ಹಾಗಾದರೆ ನೀವೇನೂ ಕಳ್ಳೆಪುರಿ ಕೊಟ್ರಾ? ಜೆಡಿಎಸ್ ಗೆ ಯಾರು ಅನಿವಾರ್ಯ ವಲ್ಲ. ಜೆಡಿಎಸ್ ನಮಗೆ ಅನಿವಾರ್ಯ. ನಮಗೆ ಈಗಲೂ ನಿಮ್ಮ ಮೇಲೆ ಗೌರವವಿದೆ. ಈಗಲೂ ನಮಗೆ ಅವರೇ ನಾಯಕರು. ಎಷ್ಟೆಲ್ಲಾ ನೋವು ಕೊಟ್ಟಿದ್ದಾರೆ. ಆದರೂ ಅವರನ್ನು ನಾಯಕರು ಅಂತಾ ಒಪ್ಪಿಕೊಂಡಿದ್ದೇವೆ. ಪಕ್ಷದ ಕಾರ್ಯಕರ್ತರ ದುಡಿಮೆಯಿಂದ ನೀವು ಶಾಸಕರಾಗಿರೋದು. ನಿಮ್ಮ ಅವಧಿ ಮುಗಿಯುವವರೆಗಾದರೂ ನೀವು ಪಕ್ಷದ ಪರವಾಗಿ ಇರಿ ಎಂದು ಜಿ ಟಿ ದೇವೇಗೌಡ ಹೆಸರು ಹೇಳದೆ ತಿರುಗೇಟು ಕೊಟ್ಟರು.
ಎರಡೂ ರಾಷ್ಟ್ರೀಯ ಪಕ್ಷಗಳು ಸೇರಿಕೊಂಡು ಜೆಡಿಎಸ್ ಮುಗಿಸುವ ಕೆಲಸ ಮಾಡುತ್ತಿವೆ. ಈಗಿನ ಪರಿಸ್ಥಿತಿಯಲ್ಲಿ ಇಬ್ಬರಿಗೂ ನಾವೇ ಅನಿವಾರ್ಯ ಅನ್ನುವುದು ಗೊತ್ತಾಗಿದೆ. ನಾವು ಯಾರನ್ನು ಬೆಂಬಲಿಸುತ್ತೇವೋ ಅವರಿಗೆ ಬಹುಮತ ಸಿಗಲಿದೆ. ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲೂ ಇದೆ ರೀತಿ ಆಗಲಿದೆ. ಆದರೆ ನಾವು ಯಾರ ಜೊತೆಯೂ ಹೋಗುವುದಿಲ್ಲ. ಇಬ್ಬರಿಂದಲೂ ಅಂತರ ಕಾಯ್ದುಕೊಳ್ಳುವ ಕೆಲಸ ಮಾಡುತ್ತೇವೆ ಎಂದರು.
ಹಿಂದೆ ನಡೆದ ಚುನಾವಣೆಗಳು, ಈಗ ನಡೆದ ಎಂಎಲ್ಸಿ ಚುನಾವಣೆಯಲ್ಲಿ ಪಕ್ಷದ ವಿರುದ್ಧ ಕೆಲಸ ಮಾಡಿದ್ದಾರೆ. ನಮ್ಮಲ್ಲಿ ಇದ್ದುಕೊಂಡು ನಮ್ಮ ವಿರುದ್ಧವೇ ಕೆಲಸ ಮಾಡಿದ್ದಾರೆ. ಇದನ್ನು ಪಕ್ಷ ಪರಿಗಣಿಸಿದೆ. ಈಗಾಗಲೇ ಪಕ್ಷದ ವರಿಷ್ಠರು ಒಂದು ತೀರ್ಮಾನಕ್ಕೆ ಬಂದಿದ್ದಾರೆ. ಆ ತೀರ್ಮಾನ ಏನು ಅನ್ನೋದು ಇನ್ನು ಕೆಲವೇ ದಿನಗಳಲ್ಲಿ ಗೊತ್ತಾಗಲಿದೆ.ಇದುವರೆಗೂ ಅವರನ್ನು ನಮ್ಮ ನಾಯಕರು ಅನ್ನುತ್ತಿದ್ದೆ.ಈಗ ಶಾಸಕರು ಅನ್ನುತ್ತೇನೆ. ಎಂದು ಶಾಸಕ ಜಿ.ಟಿ.ದೇವೇಗೌಡ ವಿರುದ್ಧ ಶಿಸ್ತುಕ್ರಮದ ಕುರಿತು ಸಾ ರಾ ಮಹೇಶ್. ಸುಳಿವು ನೀಡಿದರು.
ವಿಜೇತ ಅಭ್ಯರ್ಥಿ ಸಿ ಎನ್ ಮಂಜೇಗೌಡ ಪಕ್ಷದ ವರಿಷ್ಠರನ್ನು ಭೇಟಿಯಾಗಲಿದ್ದಾರೆ.ಚುನಾವಣೆಯ ವಿಚಾರಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ತಿಳಿಸಿದರು.
Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?
By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್ ಬಿಜೆಪಿ ತೆಕ್ಕೆಗೆ
Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್ ಶೂನ್ಯ ಸಂಪಾದನೆ!?
Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?
Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.