ಜೆಡಿಎಸ್ ಪಕ್ಷಕ್ಕೆ ಸಾವಿಲ್ಲ, ಫೀನಿಕ್ಸ್ ನಂತೆ ಮತ್ತೆ ಎದ್ದುಬರುತ್ತದೆ: ಶಾಸಕ ಕೆ.ಮಹದೇವ್

ಜೆಡಿಎಸ್ ಕಾರ್ಯಕರ್ತರು ಸಿಂಹದ ಮರಿಗಳು

Team Udayavani, Feb 25, 2023, 8:26 PM IST

1-fadsd-asd

ಪಿರಿಯಾಪಟ್ಟಣ : ಜೆಡಿಎಸ್ ಪಕ್ಷಕ್ಕೆ ಸಾವಿಲ್ಲ ಅದು ಫೀನಿಕ್ಸ್ ನಂತೆ ಎದ್ದುಬಂದು ರಾಜ್ಯದ ಅಧಿಕಾರದ ಗದ್ದುಗೆ ಏರಲಿದೆ ಎಂದು ಶಾಸಕ ಕೆ.ಮಹದೇವ್ ವಿಶ್ವಾಸ ವ್ಯಕ್ತಪಡಿಸಿದರು.

ತಾಲೂಕಿನ ಕಂಪಲಾಪುರ ಗ್ರಾಮದಲ್ಲಿ ಶನಿವಾರ ಹಮ್ಮಿಕೋಡಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ,ಕಾಂಗ್ರೆಸ್ ನವರಿಗೆ ದುರಾಸೆ ಹೆಚ್ಚು, ಇವರು ದೇಶ, ರಾಜ್ಯದಲ್ಲೇ ಮುಕ್ತವಾಗುತ್ತಿದ್ದಾರೆ ಇನ್ನು ಇಲ್ಲಿ ಉಳಿಯಲು ಸಾಧ್ಯವೇ, ಜೆಡಿಎಸ್ ಕಾರ್ಯಕರ್ತರು ಸಿಂಹದ ಮರಿಗಳು ಎದೆಗುಂದುವ ಅವಶ್ಯಕತೆ ಇಲ್ಲ, ನಾನು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ಮುಂದಿಟ್ಟುಕೊಂಡು ಮತಕೇಳಿ ಅದನ್ನು ಬಿಟ್ಟು ವಿರೋಧಿಗಳ ಟೀಕೆಗೆ , ಪ್ರಶ್ನೆಗಳಿಗೆ ಉತ್ತರ ಕೊಡುವ ತಾಕತ್ ಇಲ್ಲದಿದ್ದರೆ ಸೀರೆ ಉಟ್ಟು ಮನೆಯಲ್ಲಿಯೇ ಮಲಗುವಂತೆ ಸೂಚನೆ ನೀಡಿದ ಅವರು, ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಆದರೂ ನನ್ನ ಬಗ್ಗೆ ಮಾಜಿ ಶಾಸಕ ಕೆ.ವೆಂಕಟೇಶ್ ಹಾಗೂ ಅವರ ಕಾರ್ಯಕರ್ತರು ಅಪಪ್ರಚಾರ ಮಾಡುತ್ತಿದ್ದಾರೆ ಇವರಿಗೆ ನಮ್ಮ ಕಾರ್ಯಕರ್ತರು ಸೂಕ್ತ ಉತ್ತರ ನೀಡಲು ಮುಂದಾಗಬೇಕು ಎಂದರು.

ಈ ಹಿಂದೆ ಜೆಡಿಎಸ್ ನಲ್ಲಿದ್ದ ಕೆ.ವೆಂಕಟೇಶ್ ಅಧಿಕಾರಕ್ಕಾಗಿ ಹಣದ ಸೂಟ್ ಕೇಸ್ ಗೆ ಆಸೆಪಟ್ಟು 1989 ರಲ್ಲಿ ದೇವೇಗೌಡರ ಬೆನ್ನಿಗೆ ಚೂರಿ ಹಾಕಿ ರಾಮಕೃಷ್ಣ ಹೆಗಡೆ ಹಿಂದೆ ಓಡಿ ಹೋದರು ಆದರೂ ಅವರನ್ನು ಮತ್ತೆ ದೇವೇಗೌಡರ ಬಳಿಗೆ ಕರೆತಂದು ಟಿಕೆಟ್ ಕೊಡಿಸಿದೆವು ಆದರೆ 2004 ರಲ್ಲಿ ಅದೇ ಚಾಳಿ ಮುಂದುವರಿಸಿ ಜೆಡಿಎಸ್ ಪಕ್ಷಕ್ಕೆ ಮೋಸ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಇಂತವರ ನೀತಿಪಾಠ ನಮಗೆ ಬೇಡಾ ಎಂದು ಕಿಡಿ ಕಾರಿದ ಅವರು ಇವರು ಶಾಸಕರಾಗಿದ್ದಾಗ ಅಧಿಕಾರಿಗಳನ್ನು ಪ್ರತಿ ತಿಂಗಳು ಹಣಕ್ಕಾಗಿ ಪೀಡಿಸುತ್ತಿದ್ದರು. ಆದರೆ ನಾನು ನಿಷ್ಕಲ್ಮಶವಾಗಿ ಆಡಳಿತ ನಡೆಸಿದ್ದೇನೆ. ಈ ಬಗ್ಗೆ ದೇವಸ್ಥಾನದಲ್ಲಿಯೇ ಪ್ರಮಾಣಕ್ಕೆ ಮಾಡುತ್ತೇನೆ ಆದ್ದರಿಂದ ಕಾರ್ಯಕರ್ತರು ಯಾವುದೇ ಗೊಂದಲಗಳಿಗೆ ಒಳಗಾಗದೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಮತ ನೀಡುವಂತೆ ಮತದಾರರನ್ನು ಮನವೊಲಿಸಬೇಕು ಎಂದರು.

ಮೈಮುಲ್ ಅಧ್ಯಕ್ಷ ಪಿ.ಎಂ.ಪ್ರಸನ್ನ ಮಾತನಾಡಿ ಕೆ.ವೆಂಕಟೇಶ್ ಸೀಸನ್ ರಾಜಕಾರಣಿಯಾಗಿದ್ದಾರೆ. ಸಮಯಕ್ಕೆ ತಕ್ಕಂತೆ ರಾಜಕಾರಣ ಮಾಡುವ ಕುತಂತ್ರಿಯಾಗಿದ್ದಾರೆ. ಕಳೆದ ಐದು ವರ್ಷಗಳ ಕಾಲ ಮನೆಯಲ್ಲಿದ್ದು ಚುನಾವಣೆ ಸಮೀಪಿಸುತ್ತಿದ್ದಂತೆ ಸುಳ್ಳು ಅಪಪ್ರಚಾರ ಮಾಡುತ್ತಾ ತಿರುಗುತ್ತಿದ್ದಾರೆ. ಜೆಡಿಎಸ್ ಮುಕ್ತ ತಾಲ್ಲೂಕು ಮಾಡುವುದಾಗಿ ಕಾಂಗ್ರೆಸ್ ನವರು ಕನಸು ಕಾಣುತ್ತಿದ್ದಾರೆ. ಈ ಕನಸ್ಸು ನನಸಾಗುವುದಿಲ್ಲ. ಇದು ಮಹದೇವ್ ರವರ ಕೊನೆ ಚುನಾವಣೆಯಾಗಿದ್ದು, ಜೆಡಿಎಸ್ ಪಕ್ಷಕ್ಕೆ ಮತವನ್ನು ನೀಡುವುದರ ಮೂಲಕ ಕಾರ್ಯಕರ್ತರು ತಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕು ಎಂದರು.

ಸಮಾವೇಶದಲ್ಲಿ ಜಿಪಂ ಮಾಜಿ ಸದಸ್ಯ ಚಂದ್ರೇಶ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮಾತನಾಡಿದರು. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಕೆ.ಮಹೇಶ್, ಎಂಡಿಸಿಸಿ ಬ್ಯಾಂಕ್ ಜಿಲ್ಲಾ ನಿರ್ದೇಶಕ ಸಿ.ಎನ್.ರವಿ, ಮುಖಂಡರಾದ ಐಲಾಪುರ ರಾಮು, ದೊರೆಕೆರೆ ನಾಗೇಂದ್ರ, ಸುನೀತಾ, ಮಲ್ಲಿಕಾರ್ಜುನ, ರಘುನಾಥ್, ಗಗನ್, ಕುಮಾರ್, ಲಕ್ಷ್ಮಣ, ಜವರಪ್ಪ, ವಕೀಲ ನಾಗರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.