ಗಡಿ ರಸ್ತೆಗೆ ಝಾರ್ಖಂಡ್‌ ಕಾರ್ಮಿಕರು!

ಚೀನ ಜತೆಗಿನ ಗುದ್ದಾಟದ ನಡುವೆ ಸದೃಢ ರಸ್ತೆ ನಿರ್ಮಾಣ

Team Udayavani, Jun 9, 2020, 6:15 AM IST

ಗಡಿ ರಸ್ತೆಗೆ ಝಾರ್ಖಂಡ್‌ ಕಾರ್ಮಿಕರು!

ರಾಂಚಿ: ಚೀನವು ಶಾಂತಿ ಸಂಧಾನಕ್ಕೆ ಒಪ್ಪಿಕೊಂಡರೂ ಭಾರತ ಅದನ್ನು ಸಂಪೂರ್ಣವಾಗಿ ನಂಬುತ್ತಿಲ್ಲ. ಲಡಾಖನ್ನು ಬಲಿಷ್ಠಗೊಳಿಸುವ ಹೊಣೆಯನ್ನು ಝಾರ್ಖಂಡ್‌ನ‌ 8 ಸಾವಿರ ಕಾರ್ಮಿಕರಿಗೆ ವಹಿಸಿದೆ. ಈ ಕಟ್ಟಾಳುಗಳು ಅಲ್ಲಿ ಸದೃಢ ರಸ್ತೆಗಳನ್ನು ನಿರ್ಮಿಸಲಿದ್ದಾರೆ.

ಕಾರ್ಮಿಕರನ್ನು ಕಳುಹಿಸಿಕೊಡುವಂತೆ ಗಡಿ ರಸ್ತೆಗಳ ಸಂಸ್ಥೆ (ಬಿಆರ್‌ಒ) ಇತ್ತೀಚೆಗಷ್ಟೇ ಝಾರ್ಖಂಡ್‌ ಸರಕಾರ ವನ್ನು ಕೇಳಿಕೊಂಡಿತ್ತು. ಅಲ್ಲಿನ ಸಿಎಂ ಹೇಮಂತ್‌ ಸೊರೇನ್‌ ಇದಕ್ಕೆ ಸಮ್ಮತಿಸಿದ್ದಾರೆ. ಚೀನ ಗಡಿಯಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸಿ ಯಶಸ್ವಿಯಾಗಿದ್ದ ಬಿಆರ್‌ಒ ಈಗ “ಆಪರೇಷನ್‌ ವಿಜಯಕ್‌’ ಅಡಿ ಲಡಾಖ್‌ನಲ್ಲಿ ರಸ್ತೆಗಳನ್ನು ನಿರ್ಮಿಸಲಿದೆ.

11,800 ಕಾರ್ಮಿಕರು!
ಝಾರ್ಖಂಡ್‌ ಒಟ್ಟು 11,800 ಕಾರ್ಮಿಕರನ್ನು ಕಳುಹಿಸಿದೆ. ಇವರಲ್ಲಿ ಕೆಲವರು ಉತ್ತರಾಖಂಡ ಗಡಿಯ ಶಿವಾಲಿಕ್‌ ಯೋಜನೆ, ಹಿಮಾಚಲ ಪ್ರದೇಶ ಅಂಚಿನ ದೀಪಕ್‌ ಯೋಜನೆ ಮತ್ತು ಕಾಶ್ಮೀರದ ಬೀಕಾನ್‌ ರಸ್ತೆ ಯೋಜನೆಗಾಗಿ ಕೆಲಸ ಮಾಡಲಿದ್ದಾರೆ. 8 ಸಾವಿರಕ್ಕೂ ಅಧಿಕ ಮಂದಿ ಲಡಾಖ್‌ ರಸ್ತೆ ನಿರ್ಮಾಣದ ಅಖಾಡಕ್ಕೆ ಇಳಿಯಲಿದ್ದಾರೆ.

ಭದ್ರತೆ ನಿಮ್ಮ ಹೊಣೆ
ಝಾರ್ಖಂಡ್‌ನ‌ ಬುಡಕಟ್ಟು ಜನಾಂಗದ ಕೆಲಸಗಾರರು ಈ ಹಿಂದೆಯೂ ಭಾರತದ ಗಡಿ ಭಾಗದಲ್ಲಿ ರಸ್ತೆ ನಿರ್ಮಾಣದಲ್ಲಿ ಭಾಗವಹಿಸಿದ್ದರು. ದೇಶಕ್ಕಾಗಿ ಅತೀ ಎತ್ತರದ ಪ್ರದೇಶಗಳಲ್ಲಿ ಕೆಲಸ ಮಾಡುವ ಅವರಿಗೆ ಸೂಕ್ತ ರಕ್ಷಣೆ, ಆಶ್ರಯ, ಇನ್ನಿತರ ಮೂಲಸೌಕರ್ಯ ಒದಗಿಸುವುದು ಬಿಆರ್‌ಒ ಹೊಣೆ. ಜೀವವಿಮೆ, ವೈದ್ಯಕೀಯ ವೆಚ್ಚಗಳನ್ನೂ ಭರಿಸಬೇಕು ಎಂದು ಸೊರೇನ್‌ ಸೂಚಿಸಿದ್ದಾರೆ. ಎಲ್ಲ ಷರತ್ತುಗಳಿಗೂ ಒಪ್ಪಿರುವ ಬಿಆರ್‌ಒ, ಕೂಲಿಯನ್ನೂ ಶೇ.15-20ರಷ್ಟು ಏರಿಸಿದೆ. ಜೂ.10ರಿಂದ ರಸ್ತೆ ಕಾಮಗಾರಿ ಆರಂಭವಾಗಲಿದ್ದು, ಈಗಾಗಲೇ 11 ರೈಲು, ಟ್ರಕ್ಕುಗಳ ಮೂಲಕ ಕಾರ್ಮಿಕರು, ನಿಗದಿತ ಸ್ಥಳ ತಲುಪಿದ್ದಾರೆ.

ಮಿಲಿಟರಿ ತಂತ್ರಜ್ಞಾನಗಳ ಮೇಲೆ ಚೀನ ಕಣ್ಣು
ಮಿಲಿಟರಿ ತಂತ್ರಜ್ಞಾನದ ರಹಸ್ಯಗಳನ್ನು ಕದಿಯಲು ಚೀನ ಜಗತ್ತಿನಾದ್ಯಂತ ಸಂಶೋಧಕರನ್ನು ನೇಮಿಸುತ್ತಿದೆ ಎಂದು ತಿಳಿದುಬಂದಿದೆ. ಕಮ್ಯುನಿಸ್ಟ್‌ ಪಾರ್ಟಿ ಆಫ್ ಚೀನ (ಸಿಪಿಸಿ)ದ ಕೇಂದ್ರ ಸಮಿತಿಯು “ಯುನೈಟೆಡ್‌ ಫ್ರಂಟ್‌ ವರ್ಕ್‌’ ಇಲಾಖೆಗೆ ಈ ಹೊಣೆಯನ್ನು ವಹಿಸಿದೆ ಎನ್ನಲಾಗಿದೆ.ಅಮೆರಿಕದ ಲ್ಯಾಬ್‌ಗಳ ವೈದ್ಯಕೀಯ ರಹಸ್ಯ ಕದಿಯಲು ಚೀನ ಸಂಶೋಧಕರನ್ನು ನೇಮಿಸಿದ್ದ ಸಂಗತಿ ಕೆಲವು ತಿಂಗಳ ಹಿಂದಷ್ಟೇ ಬಯಲಾಗಿತ್ತು. ಇದೇ ಕಳ್ಳಬುದ್ಧಿಯನ್ನು ಮಿಲಿಟರಿ ಕ್ಷೇತ್ರಕ್ಕೂ ವಿಸ್ತರಿಸಲು ಅದು ಮುಂದಾಗಿದೆ.

ಬಿಕ್ಕಟ್ಟು ಶಮನಕ್ಕೆ ಚೀನ ಒಲವು
ಲಡಾಖ್‌ ಸಭೆಯ ಅನಂತರ ಇದೇ ಮೊದಲ ಬಾರಿಗೆ ಚೀನ ಪ್ರತಿಕ್ರಿಯಿಸಿದೆ. ಉಭಯ ರಾಷ್ಟ್ರಗಳ ನಡುವೆ ಉದ್ಭವಿಸಿರುವ ಗಡಿವಿವಾದ ಭವಿಷ್ಯದಲ್ಲಿ ಉಲ್ಬಣಗೊಳ್ಳುವುದಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಗಡಿಯಲ್ಲಿ ಶಾಂತಿ ಕಾಪಾಡಲು ಲಡಾಖ್‌ ಸಭೆ ತೀರ್ಮಾನಿಸಿದೆ. ಪ್ರಸ್ತುತ ಪೂರ್ವ ಲಡಾಖ್‌ನಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಗಡಿ ಬಿಕ್ಕಟ್ಟನ್ನು ದೀರ್ಘ‌ ಕಾಲದ ವರೆಗೆ ಮುಂದುವರಿಸದೆ, ಮಾತುಕತೆ ಮೂಲಕ ಶೀಘ್ರವೇ ಪರಿಹಾರ ಕಂಡುಕೊಳ್ಳಲು ಎರಡೂ ದೇಶಗಳು ಬಯಸುತ್ತಿವೆ ಎಂದು ಚೀನದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್ಯಿಂಗ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.