ದೇಶದಲ್ಲಿ ಜೂಟ್‌, ರಾಜ್ಯದಲ್ಲಿ ಲೂಟ್‌ ಸರ್ಕಾರ: ಜೈರಾಂ ಟೀಕೆ


Team Udayavani, May 7, 2023, 7:21 AM IST

jairam ramesh

ಬೆಳಗಾವಿ: ದೇಶದಲ್ಲಿ ಜೂಟ್‌ (ಸುಳ್ಳು ಆಶ್ವಾಸನೆ) ಸರ್ಕಾರ ಅಧಿಕಾರದಲ್ಲಿದ್ದರೆ, ರಾಜ್ಯದಲ್ಲಿ ಲೂಟ್‌(ಲೂಟಿ ಹೊಡೆಯುವ) ಸರ್ಕಾರವಿದೆ. ಇವೆರಡೂ ಡಬಲ್‌ ಬೋಗಸ್‌ ಸರ್ಕಾರಗಳು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ ಟೀಕಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಬಲ್‌ ಇಂಜಿನ್‌ ಸರ್ಕಾರ ಎಂದರೆ ಎರಡೂ ಸರ್ಕಾರಗಳು ಅಭಿವೃದ್ಧಿಯತ್ತ ಸಾಗುತ್ತಿವೆ ಎನ್ನುವುದಲ್ಲ. ನಾನು ದೆಹಲಿಯಲ್ಲಿ ಪ್ರಧಾನಿ ಇದ್ದೇನೆ. ಕರ್ನಾಟಕದ ಮುಖ್ಯಮಂತ್ರಿ ನನ್ನ ಕೈಗೊಂಬೆ ಎಂಬುದು ಅವರ ಭಾವನೆ ಎಂದು ವ್ಯಂಗ್ಯವಾಡಿದರು.
ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹಮಂತ್ರಿ ಇಲ್ಲಿಯೇ ಠಿಕಾಣಿ ಹೂಡಿದಂತೆ ಪ್ರಚಾರ ನಡೆಸುತ್ತಿದ್ದಾರೆ. ಇದು ಡೆಲ್ಲಿ ಇಂಜಿನ್‌ ಸರ್ಕಾರವಲ್ಲ, ಬೆಂಗಳೂರು ಇಂಜಿನ್‌ ಸರ್ಕಾರಕ್ಕಾಗಿ ನಡೆದಿರುವ ಚುನಾವಣೆ. ಈ ಚುನಾವಣೆ ಬಗ್ಗೆ ರಾಜ್ಯದ ಜನತೆಗೆ ಸ್ಪಷ್ಟ ಅರಿವಿದೆ. ಭ್ರಷ್ಟಾಚಾರದಿಂದ ರೋಸಿ ಹೋದ ಜನರು ಕಾಂಗ್ರೆಸ್‌ನ ಗ್ಯಾರಂಟಿಗಳ ಮೇಲೆ ಭರವಸೆ ಇಟ್ಟು ಈ ಬಾರಿ ಸಿಂಗಲ್‌ ಇಂಜಿನ್‌ ಸರ್ಕಾರಕ್ಕೆ ಮಣೆ ಹಾಕಲಿದ್ದಾರೆ ಎಂದರು.

ಈಗ ಬಿಜೆಪಿ ಬಜರಂಗದಳ ನಿಷೇಧ ಪ್ರಸ್ತಾಪ ವಿಷಯವನ್ನು ವಿವಾದ ಮಾಡಿ, ರಾಜಕಾರಣ ಮಾಡುತ್ತಿದೆ. ಆದರೆ ಗೋವಾದಲ್ಲಿ ಮನೋಹರ ಪರಿಕ್ಕರ್‌ ನೇತೃತ್ವದ ಸರ್ಕಾರ 2016ರಲ್ಲಿ ಶ್ರೀರಾಮಸೇನೆಯನ್ನು ನಿಷೆೇಧಿಸಿತ್ತು. ಆಗ ಕೇಂದ್ರದಲ್ಲಿದ್ದ ಮೋದಿ ಸರ್ಕಾರ ಇದನ್ನು ಏಕೆ ವಿರೋಧಿಸಿರಲಿಲ್ಲ ಎಂದು ಪ್ರಶ್ನಿಸಿದರು.
ಬಜರಂಗಬಲಿಯೇ ಬೇರೆ, ಬಜರಂಗ ದಳವೇ ಬೇರೆ. ಅದೇ ರೀತಿ ಜೈ ಶ್ರೀರಾಮ ಬೇರೆ, ಶ್ರೀರಾಮಸೇನೆಯೇ ಬೇರೆ. ನಾವೂ ಕೂಡ ಆಂಜನೇಯನ ಭಕ್ತರು. ಈಗ ನಾವು ನಿಷೆೇಧಿಸುತ್ತಿರುವುದು ಒಂದು ಸಂಘಟನೆಯನ್ನಷ್ಟೇ ಎಂದ ಅವರು, ಆಗ ಶ್ರೀರಾಮಸೇನೆ ನಿಷೇಧಿಸಿದರೂ ಗೋವಾ ಸರ್ಕಾರದ ವಿರುದ್ಧ ಚಕಾರವೆತ್ತದ ಬಿಜೆಪಿಗರು ಇಂದು ದುರುದ್ದೇಶಪೂರಕವಾಗಿ ಇದನ್ನು ವಿರೋಧಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ಹಿಂದೆ ಚಿಕ್ಕಮಗಳೂರಿನಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಂದ ಕರ್ನಾಟಕಕ್ಕೆ ಸಂಜೀವಿನಿ ಸಿಕ್ಕಿತ್ತು. ಈಗ ರಾಹುಲ್‌ ಗಾಂಧಿ ಅವರ ಭಾರತ ಜೋಡೊ ಯಾತ್ರೆಯಿಂದ ಕಾಂಗ್ರೆಸ್‌ಗೆ ಸಂಜೀವಿನಿ ಸಿಕ್ಕಿದ್ದು ಹೊಸ ಹುಮ್ಮಸ್ಸು ಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಪರ ಅಲೆ ಬೀಸುತ್ತಿದ್ದು, ಸ್ಪಷ‌r ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು

ಟಾಪ್ ನ್ಯೂಸ್

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್

Bellary; ಯಾರೇ ಬಂದರೂ ಸಂಡೂರಿನಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ: ಸಚಿವ ಸಂತೋಷ ಲಾಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

v

By Polls; ಕಳೆಗಟ್ಟಿದ ಚನ್ನಪಟ್ಟಣ; ಉಪಚುನಾವಣೆ ಅಭ್ಯರ್ಥಿ ಅಂತಿಮಗೊಳಿಸಿದ ಜೆಡಿಎಸ್

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

Nikhil

Chennapattana By Poll: ಕಣಕ್ಕೆ ನಿಖಿಲ್‌, ಜಯಮುತ್ತು? ಇನ್ನೂ ಗೊಂದಲದಲ್ಲಿ ಜೆಡಿಎಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

INDvsNZ: New Zealand caught in Washington’s spin web; All out for 259 run

INDvsNZ:  ವಾಷಿಂಗ್ಟನ್‌ ಸ್ಪಿನ್‌ ಜಾಲಕ್ಕೆ ಸಿಲುಕಿದ ಕಿವೀಸ್‌; 259 ರನ್‌ ಗೆ ಆಲೌಟ್

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Salaar 2: ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ -2ʼ ಶೂಟಿಂಗ್‌ ಆರಂಭ?

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.