ಕಣ-ಚಿತ್ರಣ: ಅಕ್ಕನ ಕ್ಷೇತ್ರದಲ್ಲಿ ಅಣ್ಣನ ರಾಜಕೀಯ ಚದುರಂಗ

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

Team Udayavani, Apr 29, 2023, 8:33 AM IST

LAKSH NAGE

ಬೆಳಗಾವಿ: ಪುರುಷ ಪ್ರಧಾನ ಕ್ಷೇತ್ರದಲ್ಲಿ ಮಹಿಳೆಯ ಕದನ. ಅದೂ ಅಂತಿಂತಹ ಸಮರ ಅಲ್ಲ. ಎಲ್ಲರೂ ಕುತೂಹಲದಿಂದ ನೋಡುವ ಸೆಣಸಾಟ. ಇಲ್ಲಿ ಎಲ್ಲರ ವೈಯಕ್ತಿಕ ಪ್ರತಿಷ್ಠೆ ಪಣಕ್ಕಿಡಲಾಗಿದೆ. ಇದು ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ 2023ರ ಚುನಾವಣೆಯ ವಿಶೇಷ.

ಇಲ್ಲಿ ಕೆಪಿಸಿಸಿ ರಾಜ್ಯ ವಕ್ತಾರರಾದ ಹಾಲಿ ಶಾಸಕಿ ಲಕ್ಷ್ಮೀ ಹೆಬ್ಟಾಳ್ಕರ್‌ 2ನೇ ಬಾರಿಗೆ ಅಖಾಡಕ್ಕೆ ಇಳಿದಿದ್ದಾರೆ. ಕಾಂಗ್ರೆಸ್‌ ಮತ್ತು ಬಿಜೆಪಿ ಪೈಪೋಟಿ ಒಂದು ಕಡೆಯಾದರೆ ಬಿಜೆಪಿ ನಾಯಕ ರಮೇಶ್‌ ಜಾರಕಿಹೊಳಿ ಅವರ ಬಹಿರಂಗ ಹಸ್ತಕ್ಷೇಪ ಕ್ಷೇತ್ರದ ರಾಜಕೀಯ ಚಿತ್ರಣವನ್ನೇ ಬದಲಾಯಿಸಿದೆ.

ಕಳೆದ ಚುನಾವಣೆಯಲ್ಲಿ ಹೆಬ್ಟಾಳ್ಕರ್‌ ಅವರ ಗೆಲುವಿಗೆ ಪರಿಶ್ರಮಪಟ್ಟಿದ್ದ ರಮೇಶ್‌ ಜಾರಕಿಹೊಳಿ ಈಗ ಖುದ್ದಾಗಿ ಹೆಬ್ಟಾಳ್ಕರ್‌ ವಿರುದ್ಧ ಜಿದ್ದಿಗೆ ಬಿದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ನಾಗೇಶ ಮುನ್ನೋಳಕರ ಅಕ್ಷರಶಃ ಮೂಕಪ್ರೇಕ್ಷಕರಂತೆ ಜಾರಕಿಹೊಳಿ ಸಲಹೆಗಳನ್ನು ಪಾಲಿಸುತ್ತಿದ್ದಾರೆ. ಇದು ಹೆಬ್ಟಾಳ್ಕರ್‌ ಮತ್ತು ರಮೇಶ್‌ ಜಾರಕಿಹೊಳಿ ನಡುವಿನ ಪ್ರತಿಷ್ಠೆಯ ಸಮರ ಎಂಬ ಭಾವನೆ ಎಲ್ಲರಲ್ಲಿ ಬಂದಿರುವುದರಿಂದ ಚುನಾವಣೆ ಬಹಳ ಕುತೂಹಲಕ್ಕೆ ಕಾರಣವಾಗಿದೆ.

ಅಭಿವೃದ್ಧಿ ವಿಷಯದ ಜತೆಗೆ ಈ ಕ್ಷೇತ್ರದಲ್ಲಿ ಗಿಫ್ಟ್ಗಳ ಭರಾಟೆಯೂ ಹೆಚ್ಚಾಗಿದೆ. ಇನ್ನು ವಿಧಾನಸಭೆ, ಲೋಕಸಭೆ ಚುನಾವಣೆ ಗಳೆರಡನ್ನೂ ಕಂಡಿರುವ ಲಕ್ಷ್ಮೀ ಹೆಬ್ಟಾಳ್ಕರ್‌ ರಾಜ ಕೀಯದಲ್ಲಿ ಬಹಳ ಪಳಗಿದ್ದಾರೆ. ಎಲ್ಲ ತಂತ್ರಗಾರಿಕೆ ಮತ್ತು ರಾಜಕೀಯ ಪಟ್ಟುಗಳು ಕರಗತವಾಗಿವೆ.

ಬಿಜೆಪಿ ಅಭ್ಯರ್ಥಿ ನಾಗೇಶ ಮುನ್ನೋಳಕರ ರಾಜಕೀಯವಾಗಿ ಪಳಗಿದವರಲ್ಲ. ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಾಗಿದ್ದ ನಾಗೇಶ ಅವರು ಪ್ರಭಾವಿ ನಾಯಕ ರಮೇಶ್‌ ಜಾರಕಿಹೊಳಿ ಆಪ್ತರು. ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ. ಬಿಜೆಪಿ ವಲಯದಲ್ಲಿ ಸಹ ಅಷ್ಟಾಗಿ ಚಿರಪರಿಚಿತರಲ್ಲ. ಆದರೆ ರಾಜ್ಯದಲ್ಲಿ ಸಂಚಲನ ಉಂಟುಮಾಡಿದ್ದ ಗುತ್ತಿಗೆದಾರ ಸಂತೋಷ ಪಾಟೀಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಸಂತೋಷ ಪಾಟೀಲ್‌ ಪರ ಹೇಳಿಕೆ ನೀಡುವ ಮೂಲಕ ನಾಗೇಶ ಸುದ್ದಿಯಾಗಿದ್ದರು.

ಎಂಇಎಸ್‌ ಅಭ್ಯರ್ಥಿ, ಗುತ್ತಿಗೆದಾರ ಆರ್‌.ಎಂ.ಚೌಗುಲಾ ಈ ಕ್ಷೇತ್ರದಲ್ಲಿ ಪವಾಡ ಮಾಡುವ ವಿಶ್ವಾಸದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಪೈಪೋಟಿ ಹಾಗೂ ಅಪಸ್ವರದ ಲಾಭ ತಮಗೆ ಆಗಲಿದೆ ಅಂದುಕೊಂಡಿದ್ದಾರೆ. ಜೆಡಿಎಸ್‌ ಅಭ್ಯರ್ಥಿ ಶಂಕರಗೌಡ ಪಾಟೀಲ ಆಟಕ್ಕುಂಟು ಲೆಕ್ಕಕ್ಕಿಲ್ಲ.

ಟರ್ನಿಂಗ್‌ ಪಾಯಿಂಟ್‌: ಬಿಜೆಪಿ ಟಿಕೆಟ್‌ ವಂಚಿತರು ಬಹಿರಂಗವಾಗಿ ತಮ್ಮ ಅಸಮಾಧಾನ ತೋಡಿಕೊಂಡಿಲ್ಲ. ಆದರೆ ಒಳಗೊಳಗೇ ಅದರ ನೋವು ಕಾಡುತ್ತಿದೆ. ಇದು ಪಕ್ಷದ ಅಭ್ಯರ್ಥಿ ನಾಗೇಶ ಮುನ್ನೋಳಕರಗೆ ದುಬಾರಿ ಯಾದರೂ ಅಚ್ಚರಿಯಿಲ್ಲ. ಬಿಜೆಪಿಯಲ್ಲಿನ ಅಸಮಾಧಾನ ತಮಗೆ ಟರ್ನಿಂಗ್‌ ಪಾಯಿಂಟ್‌ ಆಗಬಹುದು ಎಂಬ ನಿರೀಕ್ಷೆ ಕಾಂಗ್ರೆಸ್‌ ಮತ್ತು ಎಂಇಎಸ್‌ ಅಭ್ಯರ್ಥಿಗಳದ್ದಾಗಿದೆ.

~ ಕೇಶವ ಆದಿ

ಟಾಪ್ ನ್ಯೂಸ್

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

Election Commission: ಮುಂದಿನ ವಾರವೇ ದಿಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ?

ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

New York: ಅಮೆರಿಕದಲ್ಲಿ ಶೂಟೌಟ್‌: ಇಬ್ಬರ ಕೊಂದು ವಿದ್ಯಾರ್ಥಿನಿ ಆತ್ಮಹ*ತ್ಯೆ

ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ

Congress ಪ್ರಿಯಾಂಕಾ ವಾದ್ರಾಗೆ ಪ್ರೀತಿ ಜಿಂಟಾ ಟಾಂಗ್‌?: ನೆಟ್ಟಿಗರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

KABADDI-17

Pro Kabaddi: ಮೂರಕ್ಕೇರಿದ ಯುಪಿ ಯೋಧಾಸ್‌

Darren-Sammy

Head Coach: ವೆಸ್ಟ್‌ ಇಂಡೀಸ್‌ ಎಲ್ಲ ಮಾದರಿಗೂ ಡ್ಯಾರನ್‌ ಸಮ್ಮಿ ಕೋಚ್‌

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

Rajya Sabha: ಕಾಂಗ್ರೆಸ್‌ನ 1 ದೇಶ-2 ಸಂವಿಧಾನ ನೀತಿಗೆ ಅಂತ್ಯ ಹಾಡಿದ್ದೇ ಬಿಜೆಪಿ: ನಡ್ಡಾ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

1971 ಯುದ್ಧದ ಚಿತ್ರ ಮಾಣಿಕ್‌ ಷಾ ಕೇಂದ್ರದಲ್ಲಿ ಅಳವಡಿಕೆ: ಸೇನೆ ಹೇಳಿಕೆ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Supreme Court: ಆಡಳಿತ ವಿಳಂಬದಿಂದ ಅಕ್ರಮ ನಿರ್ಮಾಣ ಸಕ್ರಮ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.