ಕನ್ನಡ ಪತ್ರಿಕೋದ್ಯಮ: ಇಂದಿಗೆ 180 ವರ್ಷ


Team Udayavani, Jul 1, 2023, 7:39 AM IST

MANGALORE SAMACHARA

ಪತ್ರಿಕೋದ್ಯಮಕ್ಕೆ 1-7-2023ಕ್ಕೆ ಪೂರ್ತಿ 180 ವರ್ಷಗಳು. 1843ರ ಜುಲೈ 1ರಂದು ಮಂಗಳೂರಿನಲ್ಲಿ ಬಾಸೆಲ್‌ ಮಿಷನ್‌ನವರ ಮುದ್ರಣಾಲಯದಿಂದ ಕನ್ನಡದ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರ ಪ್ರಕಟವಾಯಿತು. ರೆವರೆಂಡ್‌ ಹರ್ಮನ್‌ ಮೋಗ್ಲಿಂಗ್‌ ಅವರು ಸಂಪಾದಕರಾಗಿದ್ದರು.

ಆಗಿನ ಬರಹದ ವ್ಯಾಕರಣ – ಪದ ಬಳಕೆಯ ಶೈಲಿಯಲ್ಲಿ ಈ ಪತ್ರಿಕೆ ಪಾಕ್ಷಿಕವಾಗಿ ಸುಮಾರು 8 ತಿಂಗಳ ಕಾಲ ಸತತವಾಗಿ ಪ್ರಕಟವಾಯಿತು. ಮೂಲತಃ ಜರ್ಮನಿಯವರಾದ
ರೆ| ಮೋಗ್ಲಿಂಗ್‌ ಅವರು 1836ರಲ್ಲಿ ಮಂಗಳೂರಿಗೆ ಬಂದರು. ಕನ್ನಡ ಭಾಷೆಯನ್ನು ಕಲಿತು, 1843ರಲ್ಲಿ ಮೊದಲ ಸಂಚಿಕೆ ಪ್ರಕಟಿಸಿದರು.

ಕನ್ನಡ ಪತ್ರಿಕೋದ್ಯಮದಲ್ಲಿ ಇದು ಪ್ರಥಮ ಪುಟ್ಟ ಹೆಜ್ಜೆ. ಎಲ್ಲ ಮಹಾ ಅಭಿಯಾನಗಳು ಪುಟ್ಟ ಹೆಜ್ಜೆಯೊಂದಿಗೆ ಆರಂಭವಾಗುತ್ತವೆ ಎಂಬ ಮಾತಿಗೆ ಅನುಗುಣವಾಗಿ 180 ವರ್ಷಗಳ ಹಿಂದೆ ಇಲ್ಲಿ ಆರಂಭವಾದ ಪತ್ರಿಕೋದ್ಯಮ ಈಗ ಆಧುನಿಕವಾದ ಮಾಹಿತಿ ತಂತ್ರಜ್ಞಾನದೊಂದಿಗೆ ವಿಸ್ತಾರವಾದ ರೂಪವನ್ನು ಪಡೆದುಕೊಂಡಿದೆ.

ಅಪೂರ್ವ ಸಾಧನೆ

ಈಗ ಮಂಗಳೂರು, ಉಡುಪಿ, ಕಾರವಾರ ಕೇಂದ್ರಗಳಾಗಿ ಕರಾವಳಿಯ ಜಿಲ್ಲೆಗಳು, ನೆರೆಯ ಕಾಸರಗೋಡು ಪತ್ರಿಕೋದ್ಯಮದ ಸಾಧನೆಯ ಶೃಂಗದಲ್ಲಿದೆ. ಅನೇಕ ಪತ್ರಿಕೆಗಳು, ಸ್ಯಾಟಲೈಟ್‌ ಚಾನೆಲ್‌ಗ‌ಳು, ದೇಶದಲ್ಲೇ ಗರಿಷ್ಠ ಎಂಬಂತೆ ಬಹುಭಾಷಾ ಪ್ರಾದೇಶಿಕ ಚಾನೆಲ್‌ಗ‌ಳು, ಆನ್‌ಲೈನ್‌ ಆವೃತ್ತಿಗಳು, ವೆಬ್‌ಸೈಟ್‌ಗಳು, ಸಂಜೆ ಪತ್ರಿಕೆಗಳು, ವೆಬ್‌ ಪತ್ರಿಕೆಗಳು, ಫೇಸ್‌ಬುಕ್‌- ವಾಟ್ಸ್‌ಆ್ಯಪ್‌ ಮಾಹಿತಿ- ಇಂಟರ್‌ನೆಟ್‌ ವಿನಿಮಯ ಗ್ರೂಪ್‌ಗ್ಳು, ನೇರ ಪ್ರಸಾರ ನೀಡುವ ವಾಹಿನಿಗಳು… ಹೀಗೆ ಮಾಧ್ಯಮದ ಎಲ್ಲ ಅವಕಾಶಗಳು ಇಲ್ಲಿ ಕಾರ್ಯರೂಪಕ್ಕೆ ಬಂದಿವೆ. ಅನೇಕ ಪತ್ರಕರ್ತರು ರಾಜ್ಯ- ದೇಶ – ಅಂತಾರಾಷ್ಟ್ರೀಯ ಮಾನ್ಯತೆಗಳಿಗೂ ಪಾತ್ರರಾಗಿದ್ದಾರೆ.

ಮಂಗಳೂರು ಆಕಾಶವಾಣಿ ಕೇಂದ್ರ, ದೂರದರ್ಶನ ಮರುಪ್ರಸಾರ ಕೇಂದ್ರ… ಹೀಗೆ 24×7 ಎಂಬಂತೆ ಸುದ್ದಿ, ಮಾಹಿತಿ, ಮನೋರಂಜನೆ.

ಉದ್ಯೋಗಾವಕಾಶ
ಈ 180 ವರ್ಷಗಳಲ್ಲಿ ಕನ್ನಡ ಪತ್ರಿಕೋದ್ಯಮ ಹಲವು ಸಾಧ್ಯತೆಗಳಿಗೆ ತನ್ನನ್ನು ತಾನು ತೆರೆದು ಕೊಂಡಿದೆ. ಕನ್ನಡ, ಆಂಗ್ಲ ಭಾಷೆಗಳ ಹೆಚ್ಚಿನ ಎಲ್ಲ ರಾಜ್ಯ- ರಾಷ್ಟ್ರೀಯ ಪತ್ರಿಕೆಗಳು ಮಂಗಳೂರಿನಲ್ಲಿ ಮುದ್ರಣವಾಗುತ್ತಿವೆ ಎಂಬುದು ಈ ಸಂದರ್ಭದಲ್ಲಿ ಉಲ್ಲೇಖನೀಯ.

ಮುದ್ರಣ, ಎಲೆಕ್ಟ್ರಾನಿಕ್‌ ಮಾಧ್ಯಮ ಸಹಿತ ಪತ್ರಿಕೋದ್ಯಮ ಈಗ ಅಪಾರ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುತ್ತಿದೆ. ವಿ.ವಿ. ಹಾಗೂ ಕೆಲವು ಕಾಲೇಜುಗಳಲ್ಲಿ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮದ ಪದವಿ, ಸ್ನಾತಕೋತ್ತರ, ಪಿಎಚ್‌.ಡಿ. ಅವಕಾಶಗಳಿವೆ.

ಮಂಗಳೂರು ದರ್ಶನದಿಂದ ಉಲ್ಲೇಖೀತ ಭಾಗವಿದು
ಆ ಕಾಲದಲ್ಲಿ ಅಂದರೆ- ಸುಮಾರು ಒಂದೂವರೆ ಶತಮಾನಗಳ ಹಿಂದೆ, ಸಂಪರ್ಕ ಸಾಧನಗಳು ಏನೇನೂ ಇಲ್ಲದಿದ್ದಾಗ ಮೋಗ್ಲಿಂಗ್‌ ತನ್ನ ಪತ್ರಿಕೆಗಳಲ್ಲಿ ಸ್ಥಳೀಯ ವಾರ್ತೆಗಳ ಜತೆಗೆ ದೇಶ ವಿದೇಶಗಳ ವಾರ್ತೆಯನ್ನು ಪ್ರಕಟಿಸು ತ್ತಿದ್ದರೆಂಬುದು ಅವರ ವಾರ್ತಾಪ್ರಜ್ಞೆಗೆ ಸಾಕ್ಷಿಯಾಗಿದೆ.

ಕಂನಡ ಸಮಾಚಾರ ಆಯಿತು!

ಮಂಗಳೂರು ಸಮಾಚಾರ ಪತ್ರಿಕೆ 8 ತಿಂಗಳ ಕಾಲ ಪಾಕ್ಷಿಕವಾಗಿ ಪ್ರಕಟವಾಯಿತು. ವೂರ ವರ್ತಮಾನಗಳು, ಸರಕಾರಿ ನಿರೂಪಗಳು/ ಕಾನೂನು, ಸುಬುದ್ಧಿಯನ್ನು ಹೇಳುವ ಸಾಮತಿಗಳು, ಹಾಡುಗಳು, ಕತೆಗಳು, ಸರ್ವರಾಜ್ಯ ವರ್ತಮಾನಗಳು, ವಾಚಕರ ವಾಣಿಗಳು ಅಂಕಣ ಗಳಾಗಿದ್ದವೆಂದು ಮಂಗಳೂರು ದರ್ಶನ ದಾಖಲಿಸಿದೆ. ಬಳಿಕ ಈ ಪತ್ರಿಕೆಯ ಹೆಸರನ್ನು ಕಂನಡ ಸಮಾಚಾರ ಎಂದು ಬದಲಿಸಿ ಬಳ್ಳಾರಿಯಿಂದ ಪ್ರಕಟಿಸಲು ಆರಂಭಿಸಿದರು. ಪತ್ರಿಕೆಯ ಸಂಪಾದಕ ರೆ| ಮೋಗ್ಲಿಂಗ್‌ (1811-1881) ಅವರು ಈ ಬಗ್ಗೆ ಹೀಗೆ ಹೇಳಿದ್ದಾರೆ.

ಕನ್ನಡ ಮಾತನಾಡುವ ಎಲ್ಲ ಜನರಲ್ಲೂ ಇದು ಪ್ರಸಾರಕ್ಕೆ ಬರಲಿ ಎಂಬ ಆಶಯದಿಂದ ಹೀಗೆ ಮಾಡಿದ್ದೇವೆ. ಇದರ ಮೊದಲ ಸಂಚಿಕೆ 1-3- 1844ರಂದು ಪ್ರಕಟವಾಯಿತು. ಪುಟ ಸಂಖ್ಯೆ 4ರಿಂದ 8ಕ್ಕೆ ಏರಿತು. ಬೆಲೆಯು ಹಿಂದಿನ ಒಂದು ದುಡ್ಡು (ಹಿಂದಿನ ಎರಡು ಕಾಸು) ಇದ್ದದ್ದು ಎರಡು ದುಡ್ಡಿಗೆ ಏರಿತು. ಈ ಪತ್ರಿಕೆ ದೀರ್ಘಾಯುವಾಗಲಿಲ್ಲ. ಆದರೆ ಕನ್ನಡ ಪತ್ರಿಕೋ ದ್ಯಮ ಮಾತ್ರ ದಿನದಿಂದ ದಿನಕ್ಕೆ ಉತ್ತುಂಗಕ್ಕೆ ಏರಿತು!

ಅಂದಹಾಗೆ..
180 ವರ್ಷಗಳ ಹಿಂದೆ ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರದಲ್ಲಿ ಸಂಪಾದಕ ಮೋಗ್ಲಿಂಗ್‌ ಅವರು ಪತ್ರಿಕೆಯ ಆಶಯವನ್ನು ಹೀಗೆ ವಿವರಿಸಿದ್ದಾರೆ. ಈ ದೇಶವೆಂಬ ಮನೆಯಲ್ಲಿ ವಾಸಿಸುವ ಜನರು ಇಂದಿನ ಪರಿಯಂತರ ಹೊರಗಿನ ದೇಶಸ್ಥರ ಸಮಾಚಾರ ಮಾರ್ಗ ಮರ್ಯಾದೆಗಳನ್ನು ತಿಳಿಯದೇ ಕಿಟಿಕಿಯಿಲ್ಲದ ಬಿಡಾರದಲ್ಲಿ ಉಳಕೊಳ್ಳುವವರ ಹಾಗೆಯಿರುತ್ತಾ ಬಂದರು. ಅದು ಕಾರಣ ಹೊರಗಿನ ಕಾರ್ಯಗಳನ್ನು ಕಾಣುವ ಹಾಗೆಯೂ ವೊಳಗೆ ಸ್ವಲ್ಪ ಬೆಳಕು ಬೀರುವ ಹಾಗೆಯೂ ನಾಲ್ಕೂ ದಿಕ್ಕಿಗೆ ಕಿಟಿಕಿಗಳನ್ನು ಮಾಡುವ ಈ ಸಮಾಚಾರ ಕಾಗದವನ್ನು ಪಕ್ಷವೊಂದು ಸಾರಿ ಶಿದ್ದ ಮಾಡಿ ಅದನ್ನು ಓದಬೇಕೆಂದಿರುವೆಲ್ಲರಿಗೆ ಕೊಟ್ಟರೆ ಕಿಟಿಕಿಗಳನ್ನು ನೋಡಿದ ಹಾಗಿರುವುದು.

ಮನೋಹರ ಪ್ರಸಾದ್‌

ಟಾಪ್ ನ್ಯೂಸ್

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

modi (4)

Congress-NC ಮೈತ್ರಿಗೆ ಪಾಕ್‌ ಬೆಂಬಲ, 370ನೇ ವಿಧಿ ಮರುಸ್ಥಾಪನೆ ಅಸಾಧ್ಯ: ಪ್ರಧಾನಿ: ಮೋದಿ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

Today PM ಮೋದಿಗೆ ಹುಟ್ಟುಹಬ್ಬದ ಸಂಭ್ರಮ; ಪ್ರಧಾನಿ ಮೋದಿ ಬದುಕು, ಸಾಧನೆಯ 74 ಹೆಜ್ಜೆಗಳು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

Karwar: ನೌಕಾನೆಲೆ ಸಿಬಂದಿಯಿಂದ ಮೀನುಗಾರರ ಬಲೆಗೆ ಕತ್ತರಿ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.