Karnataka: ಬಿಟ್‌ ಕಾಯಿನ್‌ ಪ್ರಕರಣ ತನಿಖೆಗೆ ಇಸ್ರೇಲ್‌ ನೆರವು?

ಮರು ತನಿಖೆಯಲ್ಲಿ ಸಾಕ್ಷ್ಯ ಕಲೆ ಹಾಕುವುದೇ ಸವಾಲು: ಕ್ರಿಪ್ಟೋ ಜಪ್ತಿಗೆ ದೇಶದಲ್ಲಿದೆ ತಂತ್ರಜ್ಞಾನದ ಕೊರತೆ

Team Udayavani, Jul 9, 2023, 7:43 AM IST

bit coin

ಬೆಂಗಳೂರು: ಬಿಟ್‌ ಕಾಯಿನ್‌ ಮರು ತನಿಖೆ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಸಿಐಡಿ ಅಧಿಕಾರಿಗಳು ಇಸ್ರೇಲ್‌ ದೇಶದ ತಂತ್ರಜ್ಞರ ನೆರವು ಕೋರುವ ಸಾಧ್ಯತೆಗಳು ಇವೆ.
ಬಿಟ್‌ ಕಾಯಿನ್‌ ಹಗರಣ ಸಾಕಷ್ಟು ಸದ್ದು ಮಾಡಿದ ಬಳಿಕ ಈಗ ಮರು ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳಿಗೆ ಸಾಕ್ಷ್ಯ ಕಲೆ ಹಾಕುವುದು ಸವಾಲಾಗಿದೆ. ಹೀಗಾಗಿ ಇಸ್ರೇಲ್‌ನ ತನಿಖಾ ಸಂಸ್ಥೆಯನ್ನು ಸಿಐಡಿ ಪೊಲೀಸರು ಸಂಪರ್ಕಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಉಗ್ರರಿಗೆ ಸಂದಾಯವಾಗಬೇಕಿದ್ದ ಸಾಕಷ್ಟು ಬಿಟ್‌ ಕಾಯಿನ್‌ಗಳನ್ನು ಇಸ್ರೇಲ್‌ ರಕ್ಷಣ ಇಲಾಖೆ ವಶಕ್ಕೆ ಪಡೆದಿತ್ತು. ಇಸ್ರೇಲ್‌ನ ನ್ಯಾಶನಲ್‌ ಬ್ಯೂರೋ ಫಾರ್‌ ಕೌಂಟರ್‌ ಟೆರರ್‌ ಫೈನಾನ್ಸ್‌ ತನಿಖಾ ಸಂಸ್ಥೆಯು ಹಮಾಸ್‌ ಉಗ್ರ ಸಂಘಟನೆ ಸೇರಿದ ಹಲವು ಕ್ರಿಪ್ಟೋ ವ್ಯಾಲೆಟ್‌ಗಳನ್ನು ವಶಕ್ಕೆ ಪಡೆದಿತ್ತು. ಇಸ್ರೇಲ್‌ ರಕ್ಷಣ ಇಲಾಖೆಯು ಬಿಟ್‌ ಕಾಯಿನ್‌ ಅವ್ಯವಹಾರದ ಬಗ್ಗೆ ದಿಲ್ಲಿ ಪೊಲೀಸರಿಗೂ ಕಳೆದ ವರ್ಷ ಮಾಹಿತಿ ನೀಡಿತ್ತು. ಕ್ರಿಪ್ಟೋ ವಾಲೆಟ್‌ ವಶಪಡಿಸಿಕೊಳ್ಳುವಲ್ಲಿ ಇಸ್ರೇಲ್‌ ಸಾಕಷ್ಟು ನೈಪುಣ್ಯ ಹೊಂದಿದೆ.

ತಂತ್ರಜ್ಞಾನದ ಕೊರತೆ
ಭಾರತದಲ್ಲಿ ಕ್ರಿಪ್ಟೋ ಕರೆನ್ಸಿ ಜಪ್ತಿ ಮಾಡಲು ಬೇಕಾದ ತಂತ್ರಜ್ಞಾನದ ಕೊರತೆ ಇದೆ. ಹಗರಣದ ತನಿಖೆ ನಡೆಸಿ ಸೂಕ್ತ ಸಾಕ್ಷ್ಯಗಳನ್ನು ಕೋರ್ಟ್‌ಗೆ ಸಲ್ಲಿಸುವುದು ಸುಲಭದ ಮಾತಲ್ಲ. ಕರ್ನಾಟಕ ಹೊರತುಪಡಿಸಿ ದೇಶದ ಬೇರೆ ರಾಜ್ಯಗಳಲ್ಲಿ ಕ್ರಿಪ್ಟೋ ಕರೆನ್ಸಿ ಹಗರಣದ ಪ್ರಕರಣಗಳು ನಡೆದಿರುವುದು ವಿರಳ. ಈ ಎಲ್ಲ ಕಾರಣಗಳಿಂದ ಕರ್ನಾಟಕ ಸಿಐಡಿ ಪೊಲೀಸರು ಇಸ್ರೇಲ್‌ ದೇಶದ ಸಹಾಯ ಕೇಳುವ ಸಾಧ್ಯತೆಯಿದೆ. ಪ್ರಕರಣದ ತನಿಖೆಗೆ ಬೇರೆ ತನಿಖಾ ಏಜೆನ್ಸಿಗಳ ಸಹಾಯ ಪಡೆಯುವುದಾಗಿ ಗೃಹ ಸಚಿವರೂ ಈ ಹಿಂದೆ ತಿಳಿಸಿದ್ದರು.

ಬೆಳಕಿಗೆ ಬಂದದ್ದು ಹೇಗೆ?
2021ರಲ್ಲಿ ರಾಜ್ಯದಲ್ಲಿ ಬಿಟ್‌ ಕಾಯಿನ್‌ ಹಗರಣ ಬೆಳಕಿಗೆ ಬಂದಿತ್ತು. ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಸಿಕ್ಕಿಬಿದ್ದಿದ್ದ ಶ್ರೀಕಿ ಅಲಿಯಾಸ್‌ ಶ್ರೀಕೃಷ್ಣನ ಬಳಿ 37ಕ್ಕೂ ಹೆಚ್ಚು ಬಿಟ್‌ಕಾಯಿನ್‌ ಜಪ್ತಿ ಮಾಡಲಾಗಿದೆ. ಬಿಟ್‌ಕಾಯಿನ್‌ ಹಗರಣದಲ್ಲಿ ಕೋಟ್ಯಂತರ ರೂ. ಲೂಟಿ ಹೊಡೆಯಲಾಗಿದೆ ಎಂದು ಕಾಂಗ್ರೆಸ್‌ ಈ ಹಿಂದೆ ಆರೋಪಿಸಿತ್ತು. ಈಗ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಅನಂತರ ಮರು ತನಿಖೆ ನಡೆಸಲು ವಿವಿಧ ತನಿಖಾ ಏಜೆನ್ಸಿಗಳ ಮೊರೆ ಹೋಗಲು ನಿರ್ಧರಿಸಿದೆ.

ಸಾಕ್ಷ್ಯ ಕಲೆ ಹಾಕುತ್ತಿರುವ ಎಫ್ಎಸ್‌ಎಲ್‌ ತಜ್ಞರು
ಬಿಟ್‌ ಕಾಯಿನ್‌ ಹಗರಣದಲ್ಲಿ ರಾಜ್ಯದಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್ಎಸ್‌ಎಲ್‌) ಸಿಬಂದಿ ಬಳಸಿಕೊಂಡು ಸಾಕ್ಷ್ಯ ಕಲೆ ಹಾಕಲಾಗುತ್ತಿದೆ. ಬಲವಾದ ಸಾಕ್ಷ್ಯಾಧಾರಗಳು ಸಿಗದಿದ್ದರೆ ವಿದೇಶಿ ತನಿಖಾ ಸಂಸ್ಥೆಗಳ ನೆರವು ಪಡೆಯುವ ಬಗ್ಗೆ ಚಿಂತಿಸಲಾಗಿದೆ ಎಂದು ಸಿಐಡಿ ಮೂಲಗಳು ದೃಢಪಡಿಸಿವೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.