Karnataka: ಬಿಟ್ ಕಾಯಿನ್ ಪ್ರಕರಣ ತನಿಖೆಗೆ ಇಸ್ರೇಲ್ ನೆರವು?
ಮರು ತನಿಖೆಯಲ್ಲಿ ಸಾಕ್ಷ್ಯ ಕಲೆ ಹಾಕುವುದೇ ಸವಾಲು: ಕ್ರಿಪ್ಟೋ ಜಪ್ತಿಗೆ ದೇಶದಲ್ಲಿದೆ ತಂತ್ರಜ್ಞಾನದ ಕೊರತೆ
Team Udayavani, Jul 9, 2023, 7:43 AM IST
ಬೆಂಗಳೂರು: ಬಿಟ್ ಕಾಯಿನ್ ಮರು ತನಿಖೆ ನಡೆಸಲು ಸಿದ್ಧತೆ ಮಾಡಿಕೊಂಡಿರುವ ಸಿಐಡಿ ಅಧಿಕಾರಿಗಳು ಇಸ್ರೇಲ್ ದೇಶದ ತಂತ್ರಜ್ಞರ ನೆರವು ಕೋರುವ ಸಾಧ್ಯತೆಗಳು ಇವೆ.
ಬಿಟ್ ಕಾಯಿನ್ ಹಗರಣ ಸಾಕಷ್ಟು ಸದ್ದು ಮಾಡಿದ ಬಳಿಕ ಈಗ ಮರು ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳಿಗೆ ಸಾಕ್ಷ್ಯ ಕಲೆ ಹಾಕುವುದು ಸವಾಲಾಗಿದೆ. ಹೀಗಾಗಿ ಇಸ್ರೇಲ್ನ ತನಿಖಾ ಸಂಸ್ಥೆಯನ್ನು ಸಿಐಡಿ ಪೊಲೀಸರು ಸಂಪರ್ಕಿಸುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಉಗ್ರರಿಗೆ ಸಂದಾಯವಾಗಬೇಕಿದ್ದ ಸಾಕಷ್ಟು ಬಿಟ್ ಕಾಯಿನ್ಗಳನ್ನು ಇಸ್ರೇಲ್ ರಕ್ಷಣ ಇಲಾಖೆ ವಶಕ್ಕೆ ಪಡೆದಿತ್ತು. ಇಸ್ರೇಲ್ನ ನ್ಯಾಶನಲ್ ಬ್ಯೂರೋ ಫಾರ್ ಕೌಂಟರ್ ಟೆರರ್ ಫೈನಾನ್ಸ್ ತನಿಖಾ ಸಂಸ್ಥೆಯು ಹಮಾಸ್ ಉಗ್ರ ಸಂಘಟನೆ ಸೇರಿದ ಹಲವು ಕ್ರಿಪ್ಟೋ ವ್ಯಾಲೆಟ್ಗಳನ್ನು ವಶಕ್ಕೆ ಪಡೆದಿತ್ತು. ಇಸ್ರೇಲ್ ರಕ್ಷಣ ಇಲಾಖೆಯು ಬಿಟ್ ಕಾಯಿನ್ ಅವ್ಯವಹಾರದ ಬಗ್ಗೆ ದಿಲ್ಲಿ ಪೊಲೀಸರಿಗೂ ಕಳೆದ ವರ್ಷ ಮಾಹಿತಿ ನೀಡಿತ್ತು. ಕ್ರಿಪ್ಟೋ ವಾಲೆಟ್ ವಶಪಡಿಸಿಕೊಳ್ಳುವಲ್ಲಿ ಇಸ್ರೇಲ್ ಸಾಕಷ್ಟು ನೈಪುಣ್ಯ ಹೊಂದಿದೆ.
ತಂತ್ರಜ್ಞಾನದ ಕೊರತೆ
ಭಾರತದಲ್ಲಿ ಕ್ರಿಪ್ಟೋ ಕರೆನ್ಸಿ ಜಪ್ತಿ ಮಾಡಲು ಬೇಕಾದ ತಂತ್ರಜ್ಞಾನದ ಕೊರತೆ ಇದೆ. ಹಗರಣದ ತನಿಖೆ ನಡೆಸಿ ಸೂಕ್ತ ಸಾಕ್ಷ್ಯಗಳನ್ನು ಕೋರ್ಟ್ಗೆ ಸಲ್ಲಿಸುವುದು ಸುಲಭದ ಮಾತಲ್ಲ. ಕರ್ನಾಟಕ ಹೊರತುಪಡಿಸಿ ದೇಶದ ಬೇರೆ ರಾಜ್ಯಗಳಲ್ಲಿ ಕ್ರಿಪ್ಟೋ ಕರೆನ್ಸಿ ಹಗರಣದ ಪ್ರಕರಣಗಳು ನಡೆದಿರುವುದು ವಿರಳ. ಈ ಎಲ್ಲ ಕಾರಣಗಳಿಂದ ಕರ್ನಾಟಕ ಸಿಐಡಿ ಪೊಲೀಸರು ಇಸ್ರೇಲ್ ದೇಶದ ಸಹಾಯ ಕೇಳುವ ಸಾಧ್ಯತೆಯಿದೆ. ಪ್ರಕರಣದ ತನಿಖೆಗೆ ಬೇರೆ ತನಿಖಾ ಏಜೆನ್ಸಿಗಳ ಸಹಾಯ ಪಡೆಯುವುದಾಗಿ ಗೃಹ ಸಚಿವರೂ ಈ ಹಿಂದೆ ತಿಳಿಸಿದ್ದರು.
ಬೆಳಕಿಗೆ ಬಂದದ್ದು ಹೇಗೆ?
2021ರಲ್ಲಿ ರಾಜ್ಯದಲ್ಲಿ ಬಿಟ್ ಕಾಯಿನ್ ಹಗರಣ ಬೆಳಕಿಗೆ ಬಂದಿತ್ತು. ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಸಿಕ್ಕಿಬಿದ್ದಿದ್ದ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನ ಬಳಿ 37ಕ್ಕೂ ಹೆಚ್ಚು ಬಿಟ್ಕಾಯಿನ್ ಜಪ್ತಿ ಮಾಡಲಾಗಿದೆ. ಬಿಟ್ಕಾಯಿನ್ ಹಗರಣದಲ್ಲಿ ಕೋಟ್ಯಂತರ ರೂ. ಲೂಟಿ ಹೊಡೆಯಲಾಗಿದೆ ಎಂದು ಕಾಂಗ್ರೆಸ್ ಈ ಹಿಂದೆ ಆರೋಪಿಸಿತ್ತು. ಈಗ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಅನಂತರ ಮರು ತನಿಖೆ ನಡೆಸಲು ವಿವಿಧ ತನಿಖಾ ಏಜೆನ್ಸಿಗಳ ಮೊರೆ ಹೋಗಲು ನಿರ್ಧರಿಸಿದೆ.
ಸಾಕ್ಷ್ಯ ಕಲೆ ಹಾಕುತ್ತಿರುವ ಎಫ್ಎಸ್ಎಲ್ ತಜ್ಞರು
ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯದಲ್ಲಿರುವ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್ಎಸ್ಎಲ್) ಸಿಬಂದಿ ಬಳಸಿಕೊಂಡು ಸಾಕ್ಷ್ಯ ಕಲೆ ಹಾಕಲಾಗುತ್ತಿದೆ. ಬಲವಾದ ಸಾಕ್ಷ್ಯಾಧಾರಗಳು ಸಿಗದಿದ್ದರೆ ವಿದೇಶಿ ತನಿಖಾ ಸಂಸ್ಥೆಗಳ ನೆರವು ಪಡೆಯುವ ಬಗ್ಗೆ ಚಿಂತಿಸಲಾಗಿದೆ ಎಂದು ಸಿಐಡಿ ಮೂಲಗಳು ದೃಢಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LadduCase; ಟಿಟಿಡಿಯಿಂದ ನಂದಿನಿ ತುಪ್ಪಕ್ಕೆ ಮತ್ತೆಬೇಡಿಕೆ: ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್
Kadur: ಅಪ್ರಾಪ್ತ ವಯಸ್ಕ ಬಾಲಕಿಗೆ ಸಲೂನ್ ನಲ್ಲಿ ಲೈಂಗಿಕ ಕಿರುಕುಳ ಆರೋಪ
ಹಿಂದೂ ಕಾರ್ಯಕ್ರಮಗಳಿಗೆ ಹಿಂದೂ ಕಾರ್ಯಕರ್ತರಿಂದಲೇ ಕತ್ತಿ ಹಿಡಿದು ಕಾವಲು: ಶ್ರೀರಾಮಸೇನೆ
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್
MUST WATCH
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಹೊಸ ಸೇರ್ಪಡೆ
Parvati Nair: ಮನೆ ಕೆಲಸದವನ ಮೇಲೆ ಹಲ್ಲೆ ಆರೋಪ; ನಟಿ ಪಾರ್ವತಿ ನಾಯರ್ ವಿರುದ್ಧ ಕೇಸ್
Paris; ಸಂಗೀತ ಕಾರ್ಯಕ್ರಮದಲ್ಲಿ ಭಾರತೀಯ ಗಾಯಕನ ಮೇಲೆ ಮೊಬೈಲ್ ಎಸೆತ!
Huvina Hadagali: ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ; ಪ್ರಕರಣ ದಾಖಲು
Tirupati laddu ಅಪವಿತ್ರ: ಎಸ್ ಐಟಿ ತನಿಖೆಗೆ ಆಗ್ರಹಿಸಿ ಸುಪ್ರೀಂನಲ್ಲಿ ಪಿಐಎಲ್ ಸಲ್ಲಿಕೆ
Kannada Sahitya Ranga: ಅಮೆರಿಕದಲ್ಲಿ ವಸಂತೋತ್ಸವ; ಕನ್ನಡ ಸಾಹಿತ್ಯ ರಂಗದ ಸಾರ್ಥಕ ಸೇವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.