ಸಿದ್ದುಗೆ ಎರಡರ ಇಕ್ಕಟ್ಟು: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲೇಬೇಕೆಂದು ಆಪ್ತರು ಪಟ್ಟು


Team Udayavani, Jan 14, 2023, 7:05 AM IST

ಸಿದ್ದುಗೆ ಎರಡರ ಇಕ್ಕಟ್ಟು: ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲೇಬೇಕೆಂದು ಆಪ್ತರು ಪಟ್ಟು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಚರ್ಚೆ ನಡೆದಿರುವ ಬೆನ್ನಲ್ಲೇ ಎರಡು ಕ್ಷೇತ್ರಗಳಲ್ಲಿ ಕಣಕ್ಕಿಳಿಯುವುದು ಸುರಕ್ಷಿತವೇ ಎಂಬ ಚಿಂತನೆಯೂ ಚಾಲ್ತಿ ಪಡೆದಿದೆ.

ಕೋಲಾರದೊಂದಿಗೆ ಬಾದಾಮಿ ಅಥವಾ ವರುಣಾದಿಂದ ಸ್ಪರ್ಧಿಸುವುದು ಸೂಕ್ತ ಎಂದು ಸಿದ್ದು ಆಪ್ತರು ಒತ್ತಡ ಹಾಕುತ್ತಿದ್ದು, ಇದೀಗ “ಚೆಂಡು’ ಹೈಕಮಾಂಡ್‌ ಅಂಗಳ ತಲುಪುವ ಲಕ್ಷಣಗಳಿವೆ. ಕೋಲಾರದಲ್ಲಿ ಮಾತ್ರ ಸ್ಪರ್ಧಿಸಿ ಅಪಾಯವನ್ನು ಮೈಮೇಲೆ ಎಳೆದು ಕೊಳ್ಳು ವುದು ಬೇಡ ಎಂಬುದು ಆಪ್ತರ ಸಲಹೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಒಬ್ಬರಿಗೆ ಒಂದೇ ಕ್ಷೇತ್ರ ಎಂಬ ಸಂದೇಶ ರವಾನಿ ಸಿದ್ದಾರೆ. ಹಾಗಾಗಿ ಹೈಕಮಾಂಡ್‌ ಅಂತಿಮ ತೀರ್ಮಾನ ಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಸಿದ್ದ ಆಪ್ತರು ವರಿಷ್ಠರ ಮೇಲೂ ಒತ್ತಡ ಹೇರ ತೊಡಗಿದ್ದಾರೆ ಎನ್ನಲಾಗಿದೆ. ಆದರೆ ಎರಡು ಕ್ಷೇತ್ರದ ಸ್ಪರ್ಧೆಯಿಂದ ಬೇರೆಯೇ ಸಂದೇಶ ರವಾನೆಯಾಗುತ್ತದೆ ಎನ್ನುತ್ತಿದ್ದಾರೆ ಸಿದ್ದು.

ಸದ್ಯದಲ್ಲೇ ಮಾಜಿ ಸಚಿವ ಜಮೀರ್‌ ಅಹಮದ್‌ ಸೇರಿ ಸಿದ್ದರಾಮಯ್ಯ ಆಪ್ತರು ದಿಲ್ಲಿಗೆ ತೆರಳಿ ವರಿಷ್ಠರಲ್ಲಿ 2 ಕ್ಷೇತ್ರದಿಂದ ಸ್ಪರ್ಧಿ ಸಲು ಅವಕಾಶ ಕೋರುವ ಸಾಧ್ಯತೆ ಇದೆ.

ಆತಂಕ ಏಕೆ?
ಸಿದ್ದರಾಮಯ್ಯ ಆವರನ್ನು ಸೋಲಿಸಲು ಜೆಡಿಎಸ್‌-ಬಿಜೆಪಿ ಒಂದಾಗಿ ಕೋಲಾರ ಕ್ಷೇತ್ರದಲ್ಲೇ ಕಟ್ಟಿಹಾಕಲು ಕಾರ್ಯ ತಂತ್ರ ರೂಪಿಸಲಾಗುತ್ತಿದೆ ಎಂಬ ಆತಂಕ ಅವರ ಬೆಂಬಲಿಗರದ್ದು.

ಸಿದ್ದುವಿನ ಕೋಲಾರ ಸ್ಪರ್ಧೆ ಬಗ್ಗೆ ಡಿ.ಕೆ.ಶಿವಕುಮಾರ್‌ ಇದುವರೆಗೂ ಯಾವ ಪ್ರತಿಕ್ರಿಯೆ ಯನ್ನೂ ನೀಡಿಲ್ಲ. ಹಿರಿಯ ಕಾಂಗ್ರೆಸ್‌ ಮುಖಂಡರೂ ಮೌನ ವಹಿಸಿದ್ದಾರೆ. ವೇದಿಕೆಯಲ್ಲಿ ತಮ್ಮ ಸ್ಪರ್ಧೆಯನ್ನು ಸಿದ್ದು ಘೋಷಿಸಿದಾಗ ಕೇಂದ್ರದ ಮಾಜಿ ಸಚಿವ ಕೆ.ಎಚ್‌.ಮುನಿಯಪ್ಪ, ಹೈಕಮಾಂಡ್‌ ಒಪ್ಪಿದರೆ ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇನೆ ಎಂದಿದ್ದರು. ಹೀಗಾಗಿ, ಹೈಕಮಾಂಡ್‌ ನಿಲುವು ಬೇರೆ ಇರಬಹುದೇ ಎಂಬ ಮಾತು ಕೇಳಿಬರುತ್ತಿದೆ.

ಕೋಲಾರ ಜಿಲ್ಲಾ ಕಾಂಗ್ರೆಸ್‌ನಲ್ಲೂ ದಿನಕ್ಕೊಂದು ಮಾತು, ಹೇಳಿಕೆ ಕೊಡಲಾಗುತ್ತಿದೆ. ಸಿದ್ದು ಸ್ಪರ್ಧಿಸಲಿ ಎಂಬ ಆಗ್ರಹದಷ್ಟೇ “ಬೇಡ’ ಎಂಬ ವಿರೋಧವೂ ಇದೆ. ಇವೆಲ್ಲವೂ ಸಿದ್ದು ಆಪ್ತರನ್ನು ಕಂಗೆಡೆಸಿದೆ.

ಗೊಂದಲ, ಆತಂಕ
ಬಾದಾಮಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಲ್ಲಿನ ಆಕಾಂಕ್ಷಿ ಮಾಜಿ ಸಚಿವ ಚಿಮ್ಮನಕಟ್ಟಿ ವೇದಿಕೆಯಲ್ಲೇ ಅತೃಪ್ತಿ ಹೊರಹಾಕಿದಾಗ ಆಗಲೇ ಇಲ್ಲಿಂದ ಸ್ಪರ್ಧಿಸುವುದಿಲ್ಲ ಎಂದು ಆಪ್ತರ ಮುಂದೆ ಹೇಳಿದ್ದರು. ಬಳಿಕ ಕ್ಷೇತ್ರದ ತಲಾಷೆ ನಡೆದು ಕೋಲಾರ ಆಯ್ಕೆ ಮಾಡಲಾಗಿತ್ತು.

ಸಿದ್ದರಾಮಯ್ಯ ಅವರಿಗಾಗಿ ಕ್ಷೇತ್ರ ಬಿಟ್ಟುಕೊಟ್ಟ ಶ್ರೀನಿವಾಸಗೌಡರು ಮುಂದೆ ತಾನು ಪರಿಷತ್‌ ಸದಸ್ಯನಾಗಿ ಸಚಿವನಾಗುವೆ ಎಂದು ಹೇಳಿರುವ ಮಾತು ವೈರಲ್‌ ಆಗಿದ್ದು, ಸಿದ್ದರಾಮಯ್ಯ ಅವರಿಗೆ ಪ್ರಾರಂಭಿಕ ಹಂತದಲ್ಲೇ ಮುಜುಗರ ಉಂಟಾದಂತಾಗಿದೆ. ಇದಲ್ಲದೆ, ಸಿದ್ದರಾಮಯ್ಯ ವಿರೋಧಿಗಳೆಲ್ಲಾ ಕೋಲಾರದತ್ತ ಮುಖ ಮಾಡಿರುವುದೂ ಸಿದ್ದು ಆಪ್ತರನ್ನು ಚಿಂತೆಗೀಡು ಮಾಡಿದೆ. ಹಿಂದಿನ ಬಾರಿ ಬಾದಾಮಿ ಹಾಗೂ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಿ ಬಾದಾಮಿಯಲ್ಲಿ ಮಾತ್ರ ಗೆದ್ದಿದ್ದರು.

-ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.