
ಕೇರಳ ಚುನಾವಣೆ : ಕಾಂಗ್ರೆಸ್ ಕಾರ್ಯಾಧ್ಯಕ್ಷ ಕೆ.ಸುಧಾಕರನ್ ರಾಜೀನಾಮೆ ಬೆದರಿಕೆ
Team Udayavani, Mar 16, 2021, 6:48 PM IST

ಕಾಸರಗೋಡು : ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಕೆ.ಸುಧಾಕರನ್ ರಾಜೀನಾಮೆ ನೀಡುವ ಬೆದರಿಕೆ ನೀಡಿದ್ದಾರೆ.
ಅಭ್ಯರ್ಥಿಗಳ ಆಯ್ಕೆಯ ವಿಷಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ತಲೆದೋರಿದೆ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಐಕ್ಯರಂಗ ಅಧಿಕಾರಕ್ಕೆ ಬರಬಹುದೆಂಬ ತನ್ನ ನಿರೀಕ್ಷೆ ಹುಸಿಯಾಗಿದೆಯೆಂದೂ, ತಾನು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ಘಟಕ ಪಕ್ಷಗಳ ಆಜ್ಞೆಯನ್ನು ಪಾಲಿಸುತ್ತಿದೆ. ಅದರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಕಾಂಗ್ರೆಸ್ ಹೇಳಿದಂತೆ ಘಟಕ ಪಕ್ಷಗಳು ಅನುಸರಿಸಬೇಕಿತ್ತು. ಆದರೆ ಇಲ್ಲಿ ತದ್ವಿರುದ್ಧವಾಗಿದೆ. ರಾಜ್ಯದ ಕಾಂಗ್ರೆಸ್ ನೇತಾರರಾದ ಉಮ್ಮನ್ ಚಾಂಡಿ, ರಮೇಶ್ ಚೆನ್ನಿತ್ತಲ, ಕೆ.ಸಿ.ವೇಣುಗೋಪಾಲ್ ಹೈಕಮಾಂಡ್ಗೆ ಸುಳ್ಳು ವರದಿ ನೀಡಿದ್ದಾರೆ. ಆ ಮೂಲಕ ತಮ್ಮ ಬೆಂಬಲಿಗರಿಗೆ ಮಾತ್ರ ಅಭ್ಯರ್ಥಿಯಾಗಲು ಅವಕಾಶ ನೀಡಿದ್ದಾರೆ. ಗೆಲುವು ಸಾಧ್ಯತೆಯಿರುವ ಹಲವು ಕಡೆಗಳಲ್ಲಿ ಉತ್ತಮ ಅಭ್ಯರ್ಥಿಗಳಿದ್ದರೂ ಅಂತವರಿಗೆ ಮನ್ನಣೆ ನೀಡಿಲ್ಲ ಎಂದು ಕೆ.ಸುಧಾಕರನ್ ಹೇಳಿದ್ದಾರೆ.
ಇದನ್ನೂ ಓದಿ :ಕೇರಳ ಚುನಾವಣಾ ಅಖಾಡ: ಪಿಣರಾಯಿ ವಿರುದ್ಧ ವಾಳಯಾರ್ ಹೆಣ್ಮಕ್ಕಳ ತಾಯಿ ಸ್ಪರ್ಧೆ
ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ಹುದ್ದೆಯಲ್ಲಿ ಇನ್ನೂ ಮುಂದುವರಿಯುವುದು ಸರಿಯಲ್ಲ. ಆದರೆ ಚುನಾವಣೆಯ ವೇಳೆ ತಾನು ರಾಜೀನಾಮೆ ನೀಡಿ ಪಕ್ಷಕ್ಕೆ ಮುಜುಗರ ತರಲಾರೆ. ಮುಂದಿನ ದಿನಗಳಲ್ಲಿ ಖಂಡನೆ ವ್ಯಕ್ತಪಡಿಸುವೆ ಎಂದೂ ಕೆ.ಸುಧಾಕರನ್ ಹೇಳಿದ್ದಾರೆ. ಹಿರಿಯ ಕಾಂಗ್ರೆಸ್ ಮುಖಂಡ ಕೆ.ಸುಧಾಕರನ್ ಅವರ ಹೇಳಿಕೆಯಿಂದ ಕಾಂಗ್ರೆಸ್ ಪಕ್ಷದಲ್ಲಿ ತಳಮಳಕ್ಕೆ ಕಾರಣವಾಗಿದೆ.
ಸ್ಪರ್ಧಿಸಲು ಅವಕಾಶ ನೀಡಿಲ್ಲವೆಂದು ಆರೋಪಿಸಿ ಮಹಿಳಾ ಕಾಂಗ್ರೆಸ್ ರಾಜ್ಯ ಅಧ್ಯಕ್ಷೆ ಲತಿಕಾ ಸುಭಾಷ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ ಇವರ ಬೆಂಬಲಿಗರಾದ ಹಲವರು ಪಕ್ಷ ತ್ಯಜಿಸಿದ್ದಾರೆ. ಈ ರೀತಿಯಲ್ಲಿ ಪ್ರತಿದಿನ ರಾಜ್ಯ ಕಾಂಗ್ರೆಸ್ನಲ್ಲಿ ಸೃಷ್ಟಿಯಾಗುತ್ತಿರುವ ಭಿನ್ನಾಭಿಪ್ರಾಯ ಪಕ್ಷದ ನಾಯಕತ್ವಕ್ಕೆ ತೀವ್ರ ತಿರುಗೇಟು ಉಂಟಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.