ನಿರ್ದಿಷ್ಟ ಪಾತ್ರದ ಕನಸು ನನ್ನಲ್ಲಿಲ್ಲ: ಸುದೀಪ್‌


Team Udayavani, Feb 12, 2021, 7:20 AM IST

ನಿರ್ದಿಷ್ಟ ಪಾತ್ರದ ಕನಸು ನನ್ನಲ್ಲಿಲ್ಲ: ಸುದೀಪ್‌

ಬೆಂಗಳೂರು: “ಇಂಥದ್ದೇ ಪಾತ್ರ ಮಾಡಬೇಕು ಎಂದು ಕನಸು ಕಾಣುವವ ನಾನಲ್ಲ. ನನಗಾಗಿ ಕತೆ ಬರೆದವರನ್ನು ಗೌರವಿಸುವ ವ್ಯಕ್ತಿತ್ವ ನನ್ನದು. ಈಗ ನಾನು ಏನು ಮಾಡುತ್ತೇನೆಯೋ ಅದನ್ನು ಶ್ರದ್ಧೆಯಿಂದ ಮಾಡುತ್ತೇನೆ…’ ಇದು ನಟ ಕಿಚ್ಚ ಸುದೀಪ್‌ ಅವರ ಮನದಾಳದ ಮಾತುಗಳು.

ಚಿತ್ರ ರಂಗಕ್ಕೆ ಬಂದು 25 ವರ್ಷಗಳಾಗಿದ್ದು, ಈ ಹಿನ್ನೆಲೆಯಲ್ಲಿ ಉದಯವಾಣಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾದರು. ಬಳಿಕ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ನನ್ನ ಕೆರಿಯರ್‌ನ 25 ವರ್ಷವನ್ನು ಗುರುತಿಸಿ ಸಮ್ಮಾನಿಸಿದ್ದಕ್ಕೆ ಧನ್ಯವಾದಗಳು. ಒಬ್ಬ ಕಲಾವಿದ ಸಾಧನೆ ಮಾಡಿದಾಗ ಆತನನ್ನು ಗುರುತಿಸಿ ಬೆನ್ನು ತಟ್ಟಿದರೆ ಆತ ಮತ್ತಷ್ಟು ಸಾಧನೆ ಮಾಡಬಲ್ಲ. ಕಲಾವಿದರು ಬರಬಹುದು, ಹೋಗಬಹುದು. ಆದರೆ, ಪತ್ರಿಕೆ ನಿರಂತರ. ಉದಯವಾಣಿ ಆರಂಭದಿಂದಲೂ ಚಿತ್ರರಂಗಕ್ಕೆ ಪ್ರೋತ್ಸಾಹ ನೀಡುತ್ತಲೇ ಬಂದಿದೆ. ಈ ಕೆಲಸವನ್ನು ಮುಂದುವರಿಸಿಕೊಂಡು ಹೋಗಿ. ಪತ್ರಿಕೆ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ’ ಎಂದು ಹಾರೈಸಿದರು.

ತಮ್ಮ ಸಿನಿಪಯಣದ ಬಗ್ಗೆ ಮಾತನಾಡಿದ ಸುದೀಪ್‌, ಸಿನೆಮಾವೇ ನನ್ನ ಜೀವನದ ಒಂದು ಭಾಗವಷ್ಟೇ. ಆ ಕೆಲಸವನ್ನು ತುಂಬಾ ಪ್ರೀತಿಯಿಂದ ಮಾಡುತ್ತಿದ್ದೇನೆ. ನಾನು ಜೀವನದಲ್ಲಿ ಯಾವುದನ್ನು ಆಸೆಪಟ್ಟುಕೊಂಡು ಹೋದವನಲ್ಲ. ಆ ಕ್ಷಣಕ್ಕೆ ನನ್ನ ಕೈಯಲ್ಲಿ ಏನಿದೆಯೋ ಅದನ್ನು ಅನುಭವಿಸಿದ್ದೇನೆ. ಮುಂದೆ ಆ ಪಾತ್ರ ಮಾಡಬೇಕು, ಈ ಪಾತ್ರ ಮಾಡಬೇಕು ಎಂದು ಕನಸು ಕಾಣುವವ ನಾನಲ್ಲ. ನನ್ನ ಜೀವನದಲ್ಲಿ ಯಾರು ಕೆಲಸ ಕೊಡುತ್ತಾರೋ ಅವರಷ್ಟೇ ನನಗೆ ಮುಖ್ಯ. ನಾನು “ಶಾಂತಿ ನಿವಾಸ’, “ಮುಸ್ಸಂಜೆ ಮಾತು’ನಂತಹ ಫ್ಯಾಮಿಲಿ ಓರಿಯೆಂಟೆಡ್‌ ಸಿನೆಮಾಗಳನ್ನೇ ಮಾಡುತ್ತಾ ಬಂದೆ. ಆದರೆ, ಚಿತ್ರರಂಗ ನನಗೆ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಕೂಡ ಮುಖ್ಯ ಎಂಬುದನ್ನು ಸಾಕಷ್ಟು ಘಟನೆಗಳ ಮೂಲಕ ಮನವರಿಕೆ ಮಾಡಿಕೊಟ್ಟಿತು. ಅಂದಿನಿಂದ ನನ್ನ ಸಿನೆಮಾ ಆಯ್ಕೆ ಕೂಡ ಬದಲಾಯಿತು’ ಎಂದ‌ರು.

ಇದೇ ಸಂದರ್ಭದಲ್ಲಿ ತನ್ನ ಫಿಟ್‌ನೆಸ್‌ ಬಗ್ಗೆ ಕೇಳಿದ ಪ್ರಶ್ನೆಗೂ ಅವರು ಮುಕ್ತವಾಗಿ ಉತ್ತರಿಸಿದರು.
ಬಳಿಕ ಉದಯವಾಣಿ ಸಿಬಂದಿ ವರ್ಗದವರು ಹಲವಾರು ಪ್ರಶ್ನೆಗಳನ್ನು ಕೇಳಿದ್ದು, ಅವೆಲ್ಲವು ಗಳಿಗೂ ಸುದೀಪ್‌ ಅವರು ತಮ್ಮದೇ ಧಾಟಿಯಲ್ಲಿ ಉತ್ತರಿಸಿದರು.

ದಿನವೂ ಒಂದೂವರೆ ಗಂಟೆ ಕಾಲ ಕಠಿನ ವರ್ಕ್‌ ಔಟ್‌ ಮಾಡುತ್ತೇನೆ. ಇತ್ತೀಚೆಗೆ ಎರಡು ತಿಂಗಳಿಂದ ವರ್ಕ್ ಔಟ್‌ ಸಮಯ  ಸ್ವಲ್ಪ ಕಡಿಮೆಯಾಗಿದೆ.
– ಸುದೀಪ್‌, ಖ್ಯಾತ ನಟ

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.