![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, May 31, 2023, 7:51 AM IST
ಹೊಸದಿಲ್ಲಿ: “ನಾನು ಆಕೆಯನ್ನು ಕೊಂದು ಹಾಕಿದ್ದಕ್ಕೆ ಯಾವುದೇ ಪಶ್ಚಾತ್ತಾಪವಿಲ್ಲ. ಏಕೆಂದರೆ ಅವಳು ನನ್ನನ್ನು ದೂರ ಮಾಡಿದ್ದಳು” ಹೀಗೆಂದು ಹೊಸದಿಲ್ಲಿಯಲ್ಲಿ ರವಿವಾರ ಬೆಳಕಿಗೆ ಬಂದ ಬಾಲಕಿಯ ಕೊಲೆ ಮಾಡಿದ ಸಾಹಿಲ್ ತಿಳಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಮೃತ ಬಾಲಕಿ ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಳು. ಆಕೆಯ ಜತೆ ಮಾತನಾಡಲು ಪ್ರಯತ್ನ ಮಾಡಿದಲ್ಲಿ ಕುಟುಂಬ ಸದಸ್ಯರಿಗೆ ಮತ್ತು ಪೊಲೀಸರಿಗೆ ತಿಳಿಸುವುದಾಗಿ ಬೆದರಿಸಿದ್ದಳು. ಆಕೆಯ ಹಳೆಯ ಬಾಯ್ ಫ್ರೆಂಡ್ ಜತೆಗೆ ಮತ್ತೆ ಸಂಪರ್ಕದಲ್ಲಿದ್ದಳೆಂಬ ಗುಮಾನಿಯೂ ಇತ್ತು. ಇದಕ್ಕಾಗಿ ಆಕೆಯನ್ನು ಕೊಂದೆ ಎಂದು ವಿಚಾರಣೆ ವೇಳೆ ಸಾಹಿಲ್ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಆಕೆಯನ್ನು ಕೊಲ್ಲಲು 15 ದಿನಗಳ ಹಿಂದೆ ಯೋಚಿಸಿದ್ದೆ. ಅದಕ್ಕಾಗಿ ಹರಿದ್ವಾರದಿಂದ ಚಾಕು ಖರೀದಿಸಿದ್ದೆ ಎಂದು ಆತ ತನಿಖೆಯ ವೇಳೆ ಹೇಳಿದ್ದಾನೆ. ಈ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಮಹಡಿ ಮೇಲೆ ಶವ ಪತ್ತೆ!
ಹೊಸದಿಲ್ಲಿಯ ಮಂಜು ಕಾ ತಿಲ್ಲಾ ನಗರದಲ್ಲಿ ಅಪಾರ್ಟ್ ಮೆಂಟ್ನ ಫ್ಲ್ಯಾಟ್ ಒಂದರ ಮಹಡಿಯಲ್ಲಿ 35 ವರ್ಷದ ಮಹಿಳೆಯೊಬ್ಬರ ಶವ ಮಂಗಳವಾರ ಪತ್ತೆಯಾಗಿದೆ. ಮೃತ ಮಹಿಳೆಯನ್ನ ರಾಣಿ ಎಂದು ಗುರುತಿಸಲಾಗಿದ್ದು, ಆಕೆಯ ಜತೆಗೆ ಫ್ಲ್ಯಾಟ್ ಹಂಚಿಕೊಂಡಿದ್ದ ಸ್ವಪ್ನಾ ಎಂಬಾಕೆಯೇ ಗೆಳತಿಯನ್ನು ಹತ್ಯೆಗೈದಿದ್ದಾಳೆ. ಕುಡಿದ ಮತ್ತಿನಲ್ಲಿ ರಾಣಿಯ ತಂದೆ ಕುರಿತು ಸ್ವಪ್ನಾ ಟೀಕೆ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ಗಲಾಟೆ ಏರ್ಪಟ್ಟಿದ್ದು ಬಳಿಕ ಚಾಕುವಿನಿಂದ ರಾಣಿಯನ್ನು ಇರಿದು ಹತ್ಯೆ ಮಾಡಿದ್ದು, ಆಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.