ನಕ್ಸಲಿಸಂ ತೊರೆದು ಪೊಲೀಸ್‌ ಆದವರ ಹತ್ಯೆ!

-ದಂತೇವಾಡದಲ್ಲಿ ನಕ್ಸಲರಿಂದ ಹತರಾದವರ ಕುರಿತು ಕುತೂಹಲಕಾರಿ ಸಂಗತಿ ಬೆಳಕಿಗೆ

Team Udayavani, Apr 29, 2023, 8:25 AM IST

chattis attack

ರಾಯ್ಪುರ: ಛತ್ತೀಸ್‌ಗಢದ ದಂತೇವಾಡದಲ್ಲಿ ಏ.26ರಂದು ನಡೆದ ನಕ್ಸಲ್‌ ದಾಳಿಯಲ್ಲಿ ಮೃತಪಟ್ಟ 10 ಪೊಲೀಸರ ಪೈಕಿ ಐವರು, ಒಂದು ಕಾಲದಲ್ಲಿ ಸಕ್ರಿಯ ನಕ್ಸಲರಾಗಿದ್ದರು! ಬಳಿಕ ಮನ ಪರಿವರ್ತನೆಗೊಂಡು, ದೇಶಸೇವೆಗಾಗಿ ಪೊಲೀಸ್‌ ಇಲಾಖೆ ಸೇರ್ಪಡೆಗೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ತಾರ್‌ ರೇಂಜ್‌ನ ಐಜಿಪಿ ಸುಂದರ್‌ ರಾಜ್‌ ಈ ಕುರಿತು ಮಾಹಿತಿ ನೀಡಿದ್ದು, ರಾಜ್ಯ ಪೊಲೀಸ್‌ ತುಕಡಿಯ ಭಾಗವಾಗಿರುವ ಜಿಲ್ಲಾ ಮೀಸಲು ರಕ್ಷಣಾ ಪಡೆ (ಡಿಆರ್‌ಜಿ)ಯನ್ನು “ಮಣ್ಣಿನ ಮಕ್ಕಳ ಪಡೆ’ ಎಂದೇ ಕರೆಯಲಾಗುತ್ತದೆ. ದೇಶಸೇವೆಗೆ ಹಾತೊರೆಯುತ್ತಿರುವ ಸ್ಥಳೀಯ ಯುವಕರು, ನಕ್ಸಲ್‌ವಾದ ತೊರೆದು, ಸೇವೆಗೆ ಮುಂದಾಗುವ ಯುವಕರನ್ನು ಈ ಪಡೆಗೆ ನೇಮಿಸಿಕೊಳ್ಳಲಾಗುತ್ತದೆ.

ಈ ರೀತಿ ನೇಮಕಗೊಂಡು, ಒಂದು ಕಾಲದಲ್ಲಿ ನಕ್ಸಲರೇ ಆಗಿದ್ದು, ಇಂದು ನಕ್ಸಲರ ವಿರುದ್ಧ ಹೋರಾಟದಲ್ಲೇ ಮಡಿದವರು ಮುಖ್ಯ ಪೇದೆಗಳಾದ ಜೋಗಾ ಸೋಡಿ, ಮುನ್ನಾ ಕಾಡ್ತಿ, ಹರಿರಾಮ್‌ ಮಾಂಡವಿ, ಜೋಗಾ ಕವಾಸಿ ಹಾಗೂ ಗೋಪ್ನಿಯಾ ಸೈನಿಕ್‌ ಎಂದು ಸುಂದರ್‌ ರಾಜ್‌ ತಿಳಿಸಿದ್ದಾರೆ.

ಕೆಲವರ್ಷಗಳ ಹಿಂದಷ್ಟೇ ನಕ್ಸಲ್‌ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಇವರು ವಿವಿಧ ಕಾರ್ಯಾಚರಣೆ ವೇಳೆ ಪೊಲೀಸರಿಗೆ ಶರಣಾಗಿದ್ದರು. ಬಳಿಕ 2017ರಲ್ಲಿ ಜೋಡಾ ಮತ್ತು ಕಾಡ್ತಿ ಇಲಾಖೆಗೆ ಸೇರ್ಪಡೆಗೊಂಡರು. ಅದೇ ರೀತಿ ಹರಿರಾಮ್‌ ಮತ್ತು ಗೋಪ್ನಿಯಾ 2020 ಹಾಗೂ 2022ರಲ್ಲಿ ಸೇರ್ಪಡೆಗೊಂಡಿದ್ದರು. ಕವಾಸಿ ಕೇವಲ ಒಂದು ತಿಂಗಳ ಹಿಂದಷ್ಟೇ ಡಿಆರ್‌ಜಿಗೆ ಸೇರ್ಪಡೆಗೊಂಡಿದ್ದರು ಎಂದಿದ್ದಾರೆ.

2 ತಿಂಗಳ ಹಿಂದೆಯೇ ಬಾಂಬ್‌ ಹೂತಿಡಲಾಗಿತ್ತು
10 ಮಂದಿ ಪೊಲೀಸರ ಸಾವಿಗೆ ಕಾರಣವಾದ 40 ರಿಂದ 50 ಕೆಜಿ ತೂಕದ ಐಇಡಿಗಳನ್ನು, 2 ತಿಂಗಳ ಹಿಂದೆಯೇ ಹೂತಿಡಲಾಗಿತ್ತು ಎಂಬ ಸಂಗತಿ ಪ್ರಕರಣದ ಪ್ರಾಥಮಿಕ ತನಿಖಾ ವರದಿಯಲ್ಲಿ ತಿಳಿದುಬಂದಿದೆ. ಸ್ಫೋಟಕಗಳ ವೈರ್‌ಗಳ ಮೇಲೆಯೇ ಸಸ್ಯಗಳು ಬೆಳೆದುಕೊಂಡಿವೆ. ಘಟನೆಗೂ ಒಂದು ದಿನ ಮುಂಚೆ ಅದೇ ಪ್ರದೇಶದಲ್ಲಿ ಡಿಮೈನಿಂಗ್‌ ನಡೆಸಿದಾಗಲೂ ಸ್ಫೋಟಕಗಳು ಪತ್ತೆಯಾಗಿಲ್ಲ. ಇದು ಹೇಗೆ ಸಾಧ್ಯವಾಯಿತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಐಜಿಪಿ ಸುಂದರ್‌ರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.