ಮತ್ತೆ ಮುನ್ನೆಲೆಗೆ ಬಂದ ಕಿಷ್ಕಿಂಧಾ ಅಂಜನಾದ್ರಿಯ‌ ಪೂಜಾ ವಿವಾದ

ತೀರ್ಥಪ್ರಸಾದ ವಿತರಣೆಗೆ ಖಾಸಗಿ ವ್ಯಕ್ತಿಯ ನಿಯೋಜನೆಗೆ ತಹಸೀಲ್ದಾರ್, ಅಧಿಕಾರಿಗಳ ಆಕ್ಷೇಪ

Team Udayavani, Mar 10, 2023, 4:25 PM IST

anjanadri

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂಧಾ ಅಂಜನಾದ್ರಿಯ‌ ಪೂಜಾ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಪೂಜಾ ತೀರ್ಥಪ್ರಸಾದ ವಿತರಣೆಗೆ ಖಾಸಗಿ ವ್ಯಕ್ತಿಯೊರ್ವರನ್ನು ನಿಯೋಜಿಸಿದ ಕುರಿತು ತಹಸೀಲ್ದಾರ್ ಹಾಗೂ ದೇವಾಲಯದ ಅಧಿಕಾರಿಗಳು ಆಕ್ಷೇಪಿಸಿ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ಶುಕ್ರವಾರ ಜರುಗಿದೆ.

೨೦೧೭ ರಲ್ಲಿ ಅಂಜನಾದ್ರಿ ಪೂಜೆ ಮತ್ತು ಮಾಲೀಕತ್ವದ ವಿಷಯದಲ್ಲಿ ಆನೆಗೊಂದಿ ರಾಜವಂಶದ ನೇತೃತ್ವದ ಟ್ರಸ್ಟ್ ಹಾಗೂ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ವಾದ-ವಿವಾದ ಜರುಗಿ ಅಂಜನಾದ್ರಿ ಹಾಗೂ ಸುತ್ತಲಿನ‌ ಪ್ರದೇಶದಲ್ಲಿ ಅಶಾಂತಿ ವಾತಾವರಣದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ವರದಿ ಹಿನ್ನೆಲೆಯಲ್ಲಿ ಅಂದಿನ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಜಿಲ್ಲಾಡಳಿತ ವಶಕ್ಕೆ ಕಿಷ್ಕಿಂಧಾ ಅಂಜನಾದ್ರಿ ದೇಗುಲವನ್ನು ಪಡೆದು ಸರಕಾರಕ್ಕೆ ವರದಿ ಸಲ್ಲಿಸಿದ್ದರು. ನಂತರ ರಾಜ್ಯ ಸರಕಾರ ಅಂಜನಾದ್ರಿ ದೇಗುಲವನ್ನು ಧಾರ್ಮಿಕ ಮತ್ತು ಮುಜರಾಯಿ ಇಲಾಖೆಗೆ ವಹಿಸಿ ಗೆಜೆಟ್ ನಲ್ಲಿ‌ ಪ್ರಕಟಿಸಿತ್ತು. ಇದುವರೆಗೂ ಸುಮಾರು ೫ ಕೋಟಿಗೂ ಹೆಚ್ಚು ಆದಾಯ ಸರಕಾರಕ್ಕೆ ಬಂದಿದ್ದು ಕಿಷ್ಕಿಂಧಾ ಅಂಜನಾದ್ರಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರ ನೀಲ ನಕ್ಷೆ, ಯೋಜನೆ ರೂಪಿಸಿ 120 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ.

ಈ ಮಧ್ಯೆ ದೇವಾಲಯವನ್ನು ಸರಕಾರದ ವಶಕ್ಕೆ ಪಡೆದಿರುವ ಕ್ರಮ ಪ್ರಶ್ನಿಸಿ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ಧಾರವಾಡ ಹೈಕೋರ್ಟ್ ನಲ್ಲಿ ಪ್ರಶ್ನಿಸಿ ಪೂಜೆ ಮಾಡುವ ಅವಕಾಶ ಪಡೆದಿದ್ದರು. ಶುಕ್ರವಾರ ಮಹಾಂತ ವಿದ್ಯಾದಾಸ ಬಾಬಾ ಅವರು ಆಪ್ತನೊರ್ವನನ್ನು ತೀರ್ಥ ಪ್ರಸಾದ ವಿತರಣೆ ಮಾಡಲು ದೇಗುಲದ ಗರ್ಭಗುಡಿಯಲ್ಲಿ ಕುಳ್ಳಿರಿಸಿದ್ದಾರೆ. ದೇವಾಲಯದಲ್ಲಿ ಸರಕಾರದಿಂದ ಪೂಜೆ ಮತ್ತು ಧಾರ್ಮಿಕ‌ ಕಾರ್ಯ ಮಾಡಲು ಈಗಾಗಲೇ ಸಿಬ್ಬಂದಿ ವರ್ಗದವರಿದ್ದು ಅನ್ಯರು ತೀರ್ಥ ಪ್ರಸಾದ ವಿತರಣೆ ಮತ್ತು ಭಕ್ತರಿಂದ ಕಾಣಿಕೆ ಪಡೆಯಲು ಅವಕಾಶವಿಲ್ಲ ಎಂದು ಹೆಸರೇಳಲು ಇಚ್ಛಿಸದ ಸಿಬ್ಬಂದಿಯೊರ್ವ ತಿಳಿಸಿದ್ದಾರೆ.

ಖಾಸಗಿಯವರಿಗೆ ಅವಕಾಶವಿಲ್ಲ

ಅಂಜನಾದ್ರಿ ದೇಗುಲದಲ್ಲಿ ಪೂಜೆಗೆ ವಿದ್ಯಾದಾಸ ಬಾಬಾ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಶುಕ್ರವಾರ ಗರ್ಭಗುಡಿಯ ಮುಂದೆ ಖಾಸಗಿ ವ್ಯಕ್ತಿಯನ್ನು ವಿದ್ಯಾ ದಾಸ ಬಾಬಾ ಕುಳ್ಳಿರಿಸಿದ್ದು ಇದಕ್ಕೆ ಸಿಬ್ಬಂದಿ ವರ್ಗ ಆಕ್ಷೇಪಿಸಿದರೂ ನಿರ್ಲಕ್ಷ್ಯ ಮಾಡಲಾಗಿದೆ.ಈ ಕುರಿತು ಜಿಲ್ಲಾಧಿಕಾರಿ ಗಳ ಗಮನಕ್ಕೆ ತರಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆ ಗೆ ದೂರು ಸಹ ನೀಡಲಾಗಿದೆ ಎಂದು ತಹಸೀಲ್ದಾರ್ ಮಂಜುನಾಥ ಸ್ವಾಮಿ ತಿಳಿಸಿದ್ದಾರೆ.

ನೇಮಕದ ಅಧಿಕಾರವಿದೆ

ಅಂಜನಾದ್ರಿ ದೇಗುಲವನ್ನು ಕೆಲವರು ಷಡ್ಯಂತ್ರ ನಡೆಸಿ ಸರಕಾರದ ವಶಕ್ಕೆ ಹೋಗುವಂತೆ ಮಾಡಲಾಗಿದೆ. ಇದನ್ನು ಪ್ರಶ್ನಿಸಿ ಧಾರವಾಡ ಹೈಕೋರ್ಟ್ ನಲ್ಲಿ ಪ್ರಶ್ನಿಸಲಾಗಿದೆ.ಸದ್ಯ ತಮಗೆ ದೇಗುಲದಲ್ಲಿ ಪೂಜೆ ಧಾರ್ಮಿಕ ಕಾರ್ಯ ಮಾಡಲು ಕೋರ್ಟ್ ಅವಕಾಶ ನೀಡಿದೆ. ಪೂಜೆ ಕಾರ್ಯದಲ್ಲಿ ನೆರವಾಗಲು ಮತ್ತು ತೀರ್ಥಪ್ರಸಾದ ವಿತರಣೆ ಮಾಡಲು ನಾನು ಸಹಾಯಕನನ್ನು ನಿಯೋಜನೆ ಮಾಡಿದ್ದು ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು ಇದನ್ನು ನ್ಯಾಯಾಲಯದ ಗಮನಕ್ಕೆ ತರಲಾಗುತ್ತದೆ ಎಂದು ಅರ್ಚಕ ಮಹಾಂತ ವಿದ್ಯಾದಾಸ ಬಾಬಾ ತಿಳಿಸಿದ್ದಾರೆ.

~ ಕೆ.ನಿಂಗಜ್ಜ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!

2-gangavathi

Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

Kushtagi; ಶಿಕ್ಷಕರ ಶ್ರಮ-ಹಳ್ಳಿಯ ಸರ್ಕಾರಿ ಶಾಲೆಗೆ ʼಹೈಟೆಕ್‌ʼ ಸ್ಪರ್ಶ

5

Gangavathi: ಐತಿಹಾಸಿಕ ಪಂಪಾ ಸರೋವರಕ್ಕೆ ಬೇಕಿದೆ ಮೂಲಸೌಕರ್ಯ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.