ಸ್ಥಗಿತಗೊಂಡ ಸಪ್ತಪದಿ ಕಾರ್ಯಕ್ರಮ ಶೀಘ್ರ ಪ್ರಾರಂಭ, ದೇವಾಲಯದ ಅರ್ಚಕರಿಗೆ ವಿಮೆ ಸೌಲಭ್ಯ :ಕೋಟ


Team Udayavani, Nov 26, 2020, 5:39 PM IST

ಸಪ್ತಪದಿ ಕಾರ್ಯಕ್ರಮ ಶೀಘ್ರ ಪ್ರಾರಂಭ, ದೇವಾಲಯದ ಅರ್ಚಕರಿಗೆ ವಿಮೆ ಸೌಲಭ್ಯ :ಕೋಟ

ಹನೂರು (ಚಾಮರಾಜನಗರ): ಕೋವಿಡ್ ಹಿನ್ನೆಲೆ ಸ್ಥಗಿತಗೊಂಡಿರುವ ಸಪ್ತಪದಿ ಕಾರ್ಯಕ್ರಮವನ್ನು ಶೀಘ್ರ ಪ್ರಾರಂಭಿಸಿ ಬಡವರ್ಗದ ಜನರಿಗೆ ದೇವಾಲಯದ ಮೂಲಕ ಮದುವೆ ಏರ್ಪಡಿಸಲಾಗುವುದು ಮತ್ತು 34 ಸಾವಿರ ದೇವಾಲಯಗಳ ಅರ್ಚಕರಿಗೆ ಆರೋಗ್ಯ ವಿಮೆ ಮತ್ತು ಜೀವವಿಮೆ ಒದಗಿಸುವ ಯೋಜನೆಯನ್ನು ಶೀಘ್ರ ಪ್ರಾರಂಭಿಸಲು ಕ್ರಮವಹಿಸಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಏರ್ಪಡಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟವು ಧಾರ್ಮಿಕ ಪುಣ್ಯಕ್ಷೇತ್ರವಾಗಿದ್ದು ಈ ಕ್ಷೇತ್ರವನ್ನು ಪ್ರಾಧಿಕಾರ ರಚನೆ ಮಾಡುವ ಮೂಲಕ ಅಭಿವೃದ್ಧಿಪಡಿಸಬೇಕು ಎಂಬುವ ಚಿಂತನೆ ಬಂದಿದ್ದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ. ಅವರ ಅಧಿಕಾರಾವಧಿಯಲ್ಲಿ ಮಠ-ಮಾನ್ಯಗಳಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದ್ದು ಕಳೆದ ಬಜೆಟ್‍ನಲ್ಲಿ ನಾಡಿನ 39 ಮಠಗಳಿಗೆ ಘೋಷಣೆ ಮಾಡಿದ್ದ ಅನುದಾನ ನೀಡಿದ್ದರು. ಮಠ-ಮಾನ್ಯಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು ಎಂಬುವ ಉದ್ದೇಶದಿಂದ ಕೇಳಿದ್ದಕ್ಕಿಂತ ಹೆಚ್ಚಿನ ಅನುದಾನ ನೀಡಿದ್ದರು. ಅಂತೆಯೇ ಶ್ರೀ ಕ್ಷೇತ್ರಗಳ ಅಭಿವೃದ್ಧಿಗೂ ಹೆಚ್ಚನ ಒತ್ತು ನೀಡಿದ್ದು ಮಲೆ ಮಹದೇಶ್ವರ ಕ್ಷೇತ್ರವು ಇದೇ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಾ ಸಾಗಿದರೆ ಮುಂದಿನ 4-5 ವರ್ಷಗಳಲ್ಲಿ ಕರ್ನಾಟಕ ರಾಜ್ಯದ ಅತ್ಯಂತ ಶ್ರೇಷ್ಠ ಧಾರ್ಮಿಕ ಪುಣ್ಯಕ್ಷೇತ್ರವಾಗಲಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಕ್ರಮ : ಸಿಎಂ

ಮೀನುಗಾರಿಕೆ ಸಮಸ್ಯೆ ಬಗೆಹರಿಸುವೆ: ಚಾಮರಾಜನಗರ ಜಿಲ್ಲೆಯಲ್ಲಿ ಮೀನುಗಾರಿಕೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಸಂಬಂಧ ತಮ್ಮ ಗಮನಕ್ಕೆ ಬಂದಿದ್ದು ಈ ಸಮಸ್ಯೆಗಳನ್ನು ನಿವಾರಿಸಿ ಮೀನುಗಾರಿಕೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮುಂದಿನ 2-3 ವಾರಗಳಲ್ಲಿ ಜಿಲ್ಲೆಗೆ ಮತ್ತೊಮ್ಮೆ ಬಂದು ಸಭೆ ನಡೆಸಲಾಗುವುದು . ಈ ವೇಳೆ ಜಿಲ್ಲೆಯ ಶಾಸಕರು ಮತ್ತು ಸಂಬಂಧಪಟ್ಟವರ ಸಭೆ ಕರೆದು ಚರ್ಚೆ ನಡೆಸಿ ಮೀನುಗಾರಿಕೆಯ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.