ಅಯೋಧ್ಯೆ ಆಯ್ತು, ಈಗ ಕೃಷ್ಣ ಜನ್ಮಭೂಮಿ ಕಟಕಟೆಗೆ


Team Udayavani, Sep 27, 2020, 7:20 AM IST

ಅಯೋಧ್ಯೆ ಆಯ್ತು, ಈಗ ಕೃಷ್ಣ ಜನ್ಮಭೂಮಿ ಕಟಕಟೆಗೆ

ಲಕ್ನೋ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣ ಸುಖಾಂತ್ಯ ಕಂಡ ಬಳಿಕ ಈಗ ಕೃಷ್ಣ ಜನ್ಮಭೂಮಿ ವಿಚಾರ ಕೋರ್ಟ್‌ ಮೆಟ್ಟಿಲೇರಿದೆ. ಶ್ರೀಕೃಷ್ಣ ಹುಟ್ಟಿದ ಸ್ಥಳವನ್ನು ಸಂಪೂರ್ಣವಾಗಿ ವಾಪಸು ಪಡೆಯುವ ಸಂಬಂಧ ಮಥುರಾ ಕೋರ್ಟ್‌ನಲ್ಲಿ ಸಿವಿಲ್‌ ದಾವೆ ಹೂಡಲಾಗಿದೆ.

“ಭಗವಾನ್‌ ಶ್ರೀಕೃಷ್ಣ ವಿರಾಜಮಾನ್‌’ ಪರವಾಗಿ ವಕೀಲರಾದ ಹರಿಶಂಕರ್‌ ಮತ್ತು ವಿಷ್ಣು ಜೈನ್‌, ಮಥುರಾ ಕೋರ್ಟ್‌ನಲ್ಲಿ ಸಿವಿಲ್‌ ದಾವೆ ಹೂಡಿದ್ದಾರೆ. “ಈ ಪ್ರದೇಶದ ಪ್ರತಿ ಇಂಚು ಭೂಮಿಯೂ ಶ್ರೀಕೃಷ್ಣನ ಭಕ್ತರಿಗೆ ಮತ್ತು ಹಿಂದೂ ಸಮುದಾಯದ ಪಾಲಿಗೆ ಪವಿತ್ರವಾಗಿದೆ’ ಎಂದು ಅರ್ಜಿಯಲ್ಲಿ ಉಲ್ಲೇಖೀಸಲಾಗಿದೆ.

ಏನಿದೆ ಅಲ್ಲಿ?: ಪ್ರಸ್ತುತ ಶ್ರೀಕೃಷ್ಣ ಜನ್ಮಭೂಮಿಯ 13.37 ಎಕರೆ ಜಾಗದ ಮೇಲಿನ ಹಕ್ಕನ್ನು ಮರಳಿ ಪಡೆಯುವ ಸಂಬಂಧ ಈ ದಾವೆ ಹೂಡಲಾಗಿದೆ. ಇಲ್ಲಿನ ಪುರಾತನ ದೇಗುಲದ ಪಾರ್ಶ್ವದಲ್ಲಿ ಕಟ್ಟಲಾಗಿರುವ ಶಾಹಿ ಈದ್ಗಾ ಮಸೀದಿಯನ್ನು ತೆರೆವು ಮಾಡಬೇಕೆಂಬ ಬೇಡಿಕೆಯನ್ನೂ ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಚರಿತ್ರೆಗೆ ತಳುಕು: ಈ ವಿವಾದಿತ ಮಸೀದಿಯನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಸುನ್ನಿ ಕೇಂದ್ರ ವಕ್ಫ್ ಮಂಡಳಿಯ ಸೂಚನೆ ಮೇರೆಗೆ ಮಸೀದಿ ಸಮಿತಿ ಇಲ್ಲಿ ಕಟ್ಟಡ ನಿರ್ಮಿಸಿದೆ ಎನ್ನುವುದು ಅರ್ಜಿದಾರರ ವಾದ. “ಈ ಸಂಗತಿ ಸಂಪೂರ್ಣವಾಗಿ ಚರಿತ್ರೆಗೆ ತಳುಕು ಹಾಕಿಕೊಂಡಿದೆ. ಔರಂಗಜೇಬ್‌ 1658-1707ರವರೆಗೆ ದೇಶವನ್ನು ಆಳಿದ್ದ. ಈ ಸಮಯದಲ್ಲಿ ತನ್ನ ಕಟ್ಟಾನುಯಾಯಿಗಳಿಗೆ ಅಪಾರ ಸಂಖ್ಯೆಯಲ್ಲಿದ್ದ ಹಿಂದೂ ದೇಗುಲಗಳನ್ನು ನಾಶಪಡಿಸಲು ಆದೇಶಿಸಿದ್ದ. 1669-70ರ ಅವಧಿ ಯಲ್ಲಿ ಮಥುರಾದ ಕಾಟ್ರಾ ಕೇಶವ್‌ ದೇವ್‌ನಲ್ಲಿನ ಶ್ರೀಕೃಷ್ಣ ಜನ್ಮಸ್ಥಳದ ಮಂದಿರವನ್ನು ಕೆಡವಲೂ ಸೂಚಿಸಿದ್ದ’ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

“ಔರಂಗಜೇಬನ ಸೇನೆಯು ಕೇಶವ್‌ ದೇವ್‌ ಮಂದಿರದ ಅರ್ಧಭಾಗವನ್ನು ಉರುಳಿಸಿತ್ತು. ಮಂದಿರದ ಪಕ್ಕದಲ್ಲಿಯೇ ಅಕ್ರಮವಾಗಿ ಈದ್ಗಾ ಮಸೀದಿ ಹೆಸರಿನಲ್ಲಿ ಕಟ್ಟಡ ನಿರ್ಮಿಸಲಾಗಿತ್ತು’ ಎಂದು ಹೇಳಿದ್ದಾರೆ.

ತೀವ್ರ ಆಕ್ಷೇಪ: ಸುಪ್ರೀಂ ಕೋರ್ಟ್‌ ಅಯೋಧ್ಯೆ ತೀರ್ಪಿನ ವೇಳೆಯೇ, “ರಾಮಮಂದಿರದ ಹೊರತಾಗಿ ಮಥುರಾ, ಕಾಶಿ ಅಥವಾ ದೇಶದ ಇನ್ನಾವುದೇ ಭಾಗದಲ್ಲಿ ಅಯೋಧ್ಯೆ ಮಾದರಿಯ ವಿವಾದ ಸೃಷ್ಟಿ ಸಬಾರದು’ ಎಂದು ಸ್ಪಷ್ಟವಾಗಿ ಹೇಳಿತ್ತು. ಆದರೂ ಮಥುರಾದಲ್ಲಿ ವಿವಾದ ಸೃಷ್ಟಿಸಲು ಸಿವಿಲ್‌ ದಾವೆ ಹೂಡಿರುವುದು ಅಸಂಬದ್ಧವಾಗಿ ತೋರುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ ಹಾಜಿ ಮೆಹಬೂಬ್‌ ಆಕ್ಷೇಪ ತೆಗೆದಿದ್ದಾರೆ.

ಟಾಪ್ ನ್ಯೂಸ್

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

naksal (2)

31 Naxal ಎನ್‌ಕೌಂಟರ್‌ಗೆ 1,500 ಮಂದಿ 25 ಕಿ.ಮೀ. ಟ್ರೆಕ್‌!

1-ahmad

Maharashtra; ಅಹ್ಮದ್‌ನಗರ ಇನ್ನು ಮುಂದೆ ‘ಅಹಿಲ್ಯಾನಗರ’

Yasin Malik

Yasin Malik; ಶಸ್ತ್ರಾಸ್ತ್ರ ತ್ಯಜಿಸಿದ್ದೇನೆ, ನಾನೀಗ ಗಾಂಧಿವಾದಿ..

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.