ನಾನು ಪೋಸ್ಟ್‌ಮನ್‌ ಅಲ್ಲ, ಯಾವುದೇ ತಪ್ಪು ಮಾಡಿಲ್ಲ: ಸಚಿವ ಈಶ್ವರಪ್ಪ


Team Udayavani, Apr 3, 2021, 7:30 AM IST

ನಾನು ಪೋಸ್ಟ್‌ಮನ್‌ ಅಲ್ಲ, ಯಾವುದೇ ತಪ್ಪು ಮಾಡಿಲ್ಲ: ಸಚಿವ ಈಶ್ವರಪ್ಪ

ಬೆಂಗಳೂರು/ ಮೈಸೂರು/ ವಿಜಯಪುರ: “ನಾನು ನನ್ನ ಇಲಾಖೆಯ ಪೋಸ್ಟ್‌ಮನ್‌ ಅಲ್ಲ. ಯಾವುದೇ ತಪ್ಪು ಮಾಡಿಲ್ಲ. ಸಂಪುಟದಿಂದ ಕೈ ಬಿಟ್ಟರೂ ತಲೆ ಕೆಡಿಸಿಕೊಳ್ಳುವುದಿಲ್ಲ. ರಾಜೀನಾಮೆಗೆ ಆಗ್ರಹಿಸಿದರೆ ಜಗ್ಗುವುದಿಲ್ಲ.’
– ಸಿಎಂ ಬಿಎಸ್‌ವೈ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದಿರುವುದನ್ನು ಸಚಿವ ಈಶ್ವರಪ್ಪ ಹೀಗೆ ಮೈಸೂರಿನಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಸಚಿವರು ಇರುವುದು ಪೋಸ್ಟ್‌ಮನ್‌ ಕೆಲಸ ಮಾಡಲು ಅಲ್ಲ. ಎಲ್ಲ ಸಚಿವರಿಗೂ ಅವರದ್ದೇ ಆದ ಜವಾಬ್ದಾರಿ ಇರುತ್ತದೆ. ನಮ್ಮ ಇಲಾಖೆಗೆ ಬಂದ ಅನುದಾನ ನಮಗೆ ಗೊತ್ತಿಲ್ಲದೆ ಬಿಡುಗಡೆ ಆಗುವುದು ನಿಯಮಕ್ಕೆ ವಿರುದ್ಧ. ಈ ಪದ್ಧತಿ ಮುಂದುವರಿಯಬಾರದು ಎಂಬ ಕಾರಣಕ್ಕೆ ಈ ತೀರ್ಮಾನಕ್ಕೆ ಬಂದೆ. ಇದು ಯಡಿಯೂರಪ್ಪ – ಈಶ್ವರಪ್ಪ ನಡುವಣ ಪ್ರಕರಣ ಅಲ್ಲ. ನಿಯಮ ಉಲ್ಲಂಘನೆಯಾಗಬಾರದು ಎಂಬುದು ನನ್ನ ಉದ್ದೇಶ. ಸಮಸ್ಯೆ ಬಗೆಹರಿಸಿಕೊಂಡು ಸರಕಾರ ಮುನ್ನಡೆಸುತ್ತೇವೆ. ಸಿಎಂ ಬಿಎಸ್‌ವೈ ಮೇಲೆ ನನಗೆ ನೂರಕ್ಕೆ ನೂರು ವಿಶ್ವಾಸವಿದೆ. ನಾನು ಬಂಡಾಯಗಾರ ಅಲ್ಲ. ಬಿಜೆಪಿಗೆ ನಿಷ್ಠನಾಗಿ ಕೆಲಸ ಮಾಡುವಾತ ಎಂದು ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ನಡುವೆ ಈಶ್ವರಪ್ಪ ಅವರ ನಡೆಯನ್ನು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಾಗತಿಸಿದ್ದಾರೆ. ಮೇ 2ರೊಳಗೆ ಸಿಎಂ ಬದಲಾವಣೆಯಾಗದಿದ್ದರೆ ಇನ್ನಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

ಸಿಎಂ ವಿರುದ್ಧ ದೂರು ನೀಡಿಲ್ಲ
ಮೈಸೂರಿನಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಇಲಾಖೆಗೆ ನಿಗದಿಯಾದ ಅನುದಾನವನ್ನು ಕಾನೂನು ಮತ್ತು ನಿಯಮ ಮೀರಿ ವರ್ಗಾಯಿಸದಂತೆ ಕೋರಿದ್ದೇನೆಯೇ ವಿನಾ ಸಿಎಂ ವಿರುದ್ಧ ದೂರು ನೀಡಿಲ್ಲ. ಕಾನೂನು ಮತ್ತು ನಿಯಮದಂತೆ ಕಾರ್ಯನಿರ್ವಹಿಸಲು ಸಿಎಂಗೆ ಸೂಚಿಸಿ ಎಂದಷ್ಟೇ ಪಕ್ಷದ ವರಿಷ್ಠರಲ್ಲಿ ಕೋರಿದ್ದೇನೆ ಎಂದರು.

ನನ್ನ ಗಮನಕ್ಕೆ ಬಾರದೆ ಅನುದಾನ ಬಿಡುಗಡೆ ಮಾಡಲು ಸಿಎಂ ಆದೇಶಿಸಿದ್ದರು. ಇದರ ಆಧಾರದಲ್ಲಿ ಪ್ರಧಾನ ಕಾರ್ಯದರ್ಶಿ ಹಣ ಬಿಡುಗಡೆಗೊಳಿಸಲು ಆದೇಶ ನೀಡಿದ್ದರು. ಈ ಬಗ್ಗೆ ಸಿಎಂಗೆ ಪತ್ರ ಬರೆದೆ, ಉತ್ತರ ಬರಲಿಲ್ಲ. ಬಳಿಕ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಈಗ ಪ್ರಧಾನ ಕಾರ್ಯದರ್ಶಿಗಳ ಆದೇಶಕ್ಕೆ ನಾನು ತಡೆ ನೀಡಿದ್ದೇನೆ ಎಂದು ಸಮರ್ಥಿಸಿ ಕೊಂಡರು.

ಈಶ್ವರಪ್ಪ ಯಾವ ವಿಚಾರವಾಗಿ ಪತ್ರ ಬರೆದಿದ್ದಾರೆ ಎಂಬುದು ಗೊತ್ತಿಲ್ಲ. ನಾನು ಅವರೊಂದಿಗೆ ಚರ್ಚೆ ಮಾಡಿಲ್ಲ. ಆದರೆ ನಾವು ಒಂದು ಸರಕಾರವಾಗಿ ಒಗ್ಗಟ್ಟಿನಿಂದ, ಒಮ್ಮತದಿಂದ ಕೆಲಸ ಮಾಡಬೇಕು. ಸಿಎಂ ನಿರ್ದೇಶನ ಪಾಲಿಸಬೇಕು. ಅವರ ಪರಮಾಧಿಕಾರ ಪ್ರಶ್ನಿಸುವುದು ಸಾಧುವೂ ಅಲ್ಲ, ಸೌಜನ್ಯವೂ ಅಲ್ಲ.
-ಗೋವಿಂದ ಕಾರಜೋಳ, ಡಿಸಿಎಂ

ಸಿಎಂ ಬಿಎಸ್‌ವೈ ವಿರುದ್ಧ ಸಚಿವ
ಈಶ್ವರಪ್ಪ ಪತ್ರ ಬರೆದಿರುವುದು ಮತ್ತು ಅದನ್ನು ರಾಜ್ಯಪಾಲರಿಗೆ ಕಳುಹಿಸಿರುವುದು ಒಳ್ಳೆಯ ಬೆಳವಣಿಗೆಯಲ್ಲ. ನಾವೆಲ್ಲರೂ ಸಿಎಂ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದೇವೆ. ಈಶ್ವರಪ್ಪ ಪತ್ರ ಬರೆದಿರುವುದು ಬೇಸರದ ಸಂಗತಿ. ಸಮಸ್ಯೆಗಳನ್ನು ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು.
-ಜಗದೀಶ್‌ ಶೆಟ್ಟರ್‌, ಕೈಗಾರಿಕಾ ಸಚಿವ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.