Kundapura; ಬೇಡಿ ಸಂಗ್ರಹಿಸಿದ 1.16 ಲಕ್ಷ ರೂ. ದೇಗುಲಕ್ಕೆ ದಾನ

ಕಂಚುಗೋಡಿನ ಅಶ್ವತ್ಥಮ್ಮನ ಮಹಾಕಾರ್ಯ ; ದೇವರು ಕೊಟ್ಟ ಹಣ ದೇವರಿಗೇ ಅರ್ಪಣೆ

Team Udayavani, Sep 4, 2024, 7:15 AM IST

Kundapura; ಬೇಡಿ ಸಂಗ್ರಹಿಸಿದ 1.16 ಲಕ್ಷ ರೂ. ದೇಗುಲಕ್ಕೆ ದಾನ

ಕುಂದಾಪುರ: ಉಳ್ಳವರು ತಮ್ಮಲ್ಲಿರುವ ಹಣವನ್ನು ದೇಗುಲಗಳ ಅಭಿವೃದ್ಧಿಗೆ, ನಿಧಿಗೆ ಕೊಡುವುದು ಸಾಮಾನ್ಯ ಸಂಗತಿ. ಆದರೆ ಭಿಕ್ಷೆ ಬೇಡಿ ಬಂದ ಹಣದಲ್ಲಿ ಉಳಿತಾಯ ಮಾಡಿ ದೇವಸ್ಥಾನಕ್ಕೆ ದೇಣಿಗೆ ನೀಡುವವರು ಅಪರೂಪ. ಇಂಥಹ ಆಪರೂಪದ ದಾನ ವನ್ನು ಆಗಾಗ ಮಾಡುತ್ತ ಬೆರಗು ಮೂಡಿಸುವವರು ಗಂಗೊಳ್ಳಿ ಕಂಚುಗೋಡು ನಿವಾಸಿ ಅಶ್ವತ್ಥಮ್ಮ. ಕುಂದಾಪುರದ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಭಿಕ್ಷೆ ಬೇಡಿ ಸಂಗ್ರಹಿಸಿದ 1.16 ಲಕ್ಷ ರೂ.ಗಳನ್ನು ಅಶ್ವತ್ಥಮ್ಮ ದಾನವಾಗಿ ನೀಡಿದ್ದಾರೆ.

ಶಬರಿಮಲೆಯ ಪರಮ ಭಕ್ತೆ ಆಗಿರುವ ಈ ಅಜ್ಜಿ ಈ ರೀತಿ ದಾನ ನೀಡುತ್ತಿರುವ 7ನೇ ದೇವಸ್ಥಾನ ಇದು. ತನ್ನೂರು ಕಂಚುಗೋಡಿನ ದೇಗುಲಕ್ಕೆ ನೀಡಿದ 1.5 ಲಕ್ಷ ರೂ. ದೇಣಿಗೆ ಯೊಂದಿಗೆ ಅಜ್ಜಿಯ ದಾನದ ಅಧ್ಯಾಯ ಆರಂಭಗೊಂಡಿತು. ಬಳಿಕ ಆನೆಗುಡ್ಡೆ ಕುಂಭಾಶಿ ದೇವಸ್ಥಾನ, ಮಂಗಳಾದೇವಿ, ಬಪ್ಪನಾಡು, ಪೊಳಲಿ ದೇವಸ್ಥಾನಗಳಿಗೆ ತಲಾ 1.5 ಲಕ್ಷ ರೂ., ಬ್ರಹ್ಮಾವರ ತಾಲೂಕಿನ ಸಾಲಿ ಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನಕ್ಕೆ 1 ಲಕ್ಷ ರೂ.ಗಳನ್ನು ಭೋಜನ ನಿಧಿಗೆ ಸಮರ್ಪಿಸಿದ್ದಾರೆ. ಅನ್ನದಾನವೇ ಶ್ರೇಷ್ಠ ದಾನ ಎಂಬುದು ಅವರ ನಂಬಿಕೆ.

ಶಬರಿಮಲೆಯ ಭಕ್ತೆ
ಅಶ್ವತ್ಥಮ್ಮ ತನ್ನ ಪತಿ ಹಾಗೂ ಪುತ್ರ ತೀರಿಕೊಂಡ ಅನಂತರ ಭಿಕ್ಷೆ ಬೇಡುವ ಕಾಯಕ ಆರಂಭಿಸಿದರು. ಶಬರಿ ಮಲೆಯ ಭಕ್ತೆಯಾಗಿ ವರುಷವೂ ವ್ರತಧಾರಿಯಾಗಿ ಮಲೆಗೆ ಭೇಟಿ ನೀಡುತ್ತಾರೆ.

ಅಲ್ಲಿನ ಪಂಪಾ ಕ್ಷೇತ್ರದಲ್ಲಿ ಅನ್ನದಾನಕ್ಕಾಗಿ 1 ಲಕ್ಷ ರೂ., ಪಂದಳ ಕ್ಷೇತ್ರಕ್ಕೆ ಅನ್ನದಾನಕ್ಕಾಗಿ 30 ಸಾವಿರ ರೂ.ಗಳನ್ನು ಕೊಟ್ಟಿದ್ದಾರೆ. ಇಲ್ಲಿಯವರೆಗೆ ಎಷ್ಟು ಕೊಟ್ಟಿರಬಹುದು ಎಂಬ ಪ್ರಶ್ನೆಗೆ, ಆ ಲೆಕ್ಕದ್ದೇನೋ ಗೊತ್ತಿಲ್ಲ, ಅಷ್ಟಕ್ಕೂ ನಾನು ಕೊಟ್ಟದ್ದಲ್ಲ; ಸ್ವಾಮಿ ಪಡೆದದ್ದು. ಅವನಿಂದ ಪಡೆದದ್ದು ಅವನಿಗೇ ಅರ್ಪಣೆ ಎನ್ನುತ್ತಾರೆ. ಇದರ ಜತೆ ಕೋವಿಡ್‌ ಸಮಯದಲ್ಲಿ ದೇಶ ಸಂಕಟದಲ್ಲಿದ್ದಾಗ ಕೊರೊನಾದಿಂದ ದೇಶ ಮುಕ್ತವಾಗಲಿ, ಶಬರಿಮಲೆಗೆ ಕವಿದಿರುವ ಕತ್ತಲು ದೂರವಾಗಲಿ ಎಂದು ಹರಕೆಯನ್ನೂ ಹೊತ್ತಿದ್ದರು.

ಉಳಿದದ್ದು ದೇವರಿಗೆ
ದುಡ್ಡಿರುವವರೂ ಎಷ್ಟು ಮಂದಿ ಹೀಗೆ ಕೊಟ್ಟಾರು? ಆದರೆ ಅಶ್ವತ್ಥಮ್ಮ ತಮ್ಮ ಇಳಿ ವಯಸ್ಸಿನಲ್ಲೂ ಕರಾವಳಿಯ ನಾನಾ ದೇವಸ್ಥಾನಗಳ ಆವರಣಗಳಲ್ಲಿ ಮತ್ತು ಸಾಸ್ತಾನ ಟೋಲ್‌ಗೇಟ್‌ನಲ್ಲಿ ಜನರ ಮುಂದೆ ಕೈ ಚಾಚಿ ಭಿಕ್ಷೆ ಬೇಡುತ್ತಾರೆ. ಹೀಗೆ ಸಂಗ್ರಹವಾದ ಹಣದಲ್ಲಿ ತನ್ನ ವೈಯಕ್ತಿಕ ಖರ್ಚಿಗೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು ಉಳಿದದ್ದನ್ನು ದಾನ ಮಾಡುತ್ತಿದ್ದಾರೆ. ಭಿಕ್ಷೆ ಬೇಡಿದ ಹಣವನ್ನು ದೇವರಿಗೆ ಸಮರ್ಪಿಸುವ ಈಕೆಯ ಹೃದಯ ವೈಶಾಲ್ಯಕ್ಕೆ ಜನರೂ ಬೆರಗಾಗಿದ್ದಾರೆ.
ಸಮ್ಮಾನ: ಕೊಡುಗೆ ನೀಡಿದ ಅಶ್ವತ್ಥಮ್ಮ ಅವರನ್ನು ದೇವಾಲಯದ ಆಡಳಿತ ಸಮಿತಿಯ ಗೋಕುಲ್‌ ಶೇಟ್‌ ಸಮ್ಮಾನಿಸಿದರು. ಹೊಟೇಲ್‌ ಉದ್ಯಮಿ ವಿಜಯ್‌ ಉಪಸ್ಥಿತರಿದ್ದರು.

ಎಲ್ಲಿಗೆ ಎಷ್ಟು ಕೊಟ್ಟಿದ್ದೇನೆ ಎನ್ನುವುದು ಮುಖ್ಯವೇ ಅಲ್ಲ. ನಾನು ಅದರ ಲೆಕ್ಕವೂ ಇಟ್ಟಿಲ್ಲ. ಒಂದಷ್ಟು ಮೊತ್ತ ಸಂಗ್ರಹವಾದಾಗ ನನ್ನ ಖರ್ಚಿಗೆ ಚೂರು ಇಟ್ಟು ಕೊಂಡು ಉಳಿಕೆ ಮೊತ್ತವನ್ನು ದೇವಾಲಯಗಳಿಗೆ ನೀಡುತ್ತಿದ್ದೇನೆ. ಇದು ನನ್ನ ಸೇವೆಯಷ್ಟೇ.
-ಅಶ್ವತ್ಥಮ್ಮ, ಕಂಚುಗೋಡು

ಟಾಪ್ ನ್ಯೂಸ್

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.