ಕುಷ್ಟಗಿ: ಪೊಲೀಸ್ ಠಾಣೆ ಹಿಂಭಾಗದ ಮಾಜಿ ಸೈನಿಕನ ಮನೆಯಲ್ಲೇ ಕಳವು
Team Udayavani, Feb 3, 2023, 8:10 PM IST
ಕುಷ್ಟಗಿ: ಕುಷ್ಟಗಿ ಪಟ್ಟಣದ ಹೊರವಲಯದ ಲಿಯೋ ಕಾಲೋನಿ ವ್ಯಾಪ್ತಿಯ ಪೊಲೀಸ್ ಠಾಣೆಯ ಹಿಂಭಾಗದ ಮಾಜಿ ಸೈನಿಕರೊಬ್ಬರ ಮನೆಯಲ್ಲಿ ಕಳವಾಗಿದೆ.
ಮಾಜಿ ಸೈನಿಕ, ಮಡಿವಾಳ ಸಮಾಜದ ಅಧ್ಯಕ್ಷ ಸುಭಾಶ್ಚಂದ್ರ ಮಡಿವಾಳ ಅವರು ತಮ್ಮ ಕುಟುಂಬದೊಂದಿಗೆ ಹನುಮಸಾಗರದಲ್ಲಿ ಆಯೋಜಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಆಚರಣೆಗೆ ಶುಕ್ರವಾರ ಬೆಳಗ್ಗೆ ಹೋಗಿದ್ದರು. ಸಂಜೆ 5 ಕ್ಕೆ ಮನೆಗೆ ವಾಪಸ್ಸಾದಾಗ ಮನೆಯಲ್ಲಿ ಕಳ್ಳತನವಾಗಿರುವುದು ಗೊತ್ತಾಗಿದೆ. ಕೂಡಲೇ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಮನೆಯನ್ನು ಪರಿಶೀಲಿಸಿ ಶ್ವಾನ ದಳ ಕರೆಸಲು ಕ್ರಮ ಕೈಗೊಂಡಿದ್ದಾರೆ.
ಮಧ್ಯಾಹ್ನದ ಸಮಯದಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಕಳ್ಳರು ಮನೆಯ ಬೀಗ ಮುರಿದು ಕಪಾಟಿನಲ್ಲಿದ್ದ 12 ತೊಲ ಬಂಗಾರ, ಒಂದೂವರೆ ಲಕ್ಷ ರೂ. ದೋಚಿದ್ದಾರೆ. ಬೆಳ್ಳಿಯ ದೇವರ ಮೂರ್ತಿಗಳನ್ನು ದಾರಿಯಲ್ಲಿ ಎಸೆದಿದ್ದಾರೆ.
ಈ ಪ್ರಕರಣ ಲಿಯೋ ಕಾಲೋನಿ, ಕೃಷ್ಣಗಿರಿ ಕಾಲೋನಿ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು
ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ
Dinesh GunduRao:ಶಾಸಕ ರಾಯರೆಡ್ಡಿ ಸಿಎಂ ಪಕ್ಕ ಇರುವುದರಿಂದ ಹೆಚ್ಚು ಅಭಿವೃದ್ದಿ ನಡೆಯುತ್ತವೆ
Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ
ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.