ಬೆಂಗಳೂರು ವಿವಿ: ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್; ರವಿಕುಮಾರ್ ಖಂಡನೆ

ಪೊಲೀಸರು ಮನಸೋ ಇಚ್ಛೆ ಬಂದಂತೆ, ಅತ್ಯಂತ ಕ್ರೌರ್ಯವಾಗಿ ಲಾಠಿಚಾರ್ಜ್ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇನೆ

Team Udayavani, Jan 31, 2022, 6:24 PM IST

1-assad

ಬೆಂಗಳೂರು: ಪ್ರತಿಭಟನಾ ನಿರತ ಎಬಿವಿಪಿ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿಚಾರ್ಜ್ ಮಾಡಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ್ ಹೇಳಿದ್ದಾರೆ.

ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯವು ಸಾವಿರಾರು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಿಸದಿರುವ ಹಾಗೂ ಇತರೆ ಶೈಕ್ಷಣಿಕ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಇಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶಾಂತಿಯುತ ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ಪೊಲೀಸರು ಮನಸೋ ಇಚ್ಛೆ ಬಂದಂತೆ, ಅತ್ಯಂತ ಕ್ರೌರ್ಯವಾಗಿ ನೂರಾರು ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಮಾಡಿರುವುದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

ಕುಲಪತಿಗಳ ಜೊತೆ ವಿದ್ಯಾರ್ಥಿಗಳ ಬೇಡಿಕೆಗಳ ಈಡೇರಿಕೆ ಕುರಿತು ಮಾತುಕತೆ ನಡೆಸಬಹುದಿತ್ತು, ಅಲ್ಲದೇ ಪರಿಸ್ಥಿತಿ ತುಂಬಾ ಕೈ ಮೀರಿದ್ದರೇ ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಬಂಧಿಸಬಹುದಿತ್ತು, ಆದರೆ ಪೊಲೀಸರು ಏಕಾಏಕಿ ಲಾಠಿಚಾರ್ಜ್ ಮಾಡಿ ಹಲವಾರು ವಿದ್ಯಾರ್ಥಿಗಳ ತಲೆ ಒಡೆಯುವ ಹಾಗೂ ಕೈಕಾಲುಗಳಿಗೆ ಗಾಯಗಳಾಗುವ ರೀತಿಯಲ್ಲಿ ಅಮಾನವೀಯವಾಗಿ ಪೊಲೀಸರು ಹಲ್ಲೆ ಮಾಡಿರುವುದು ಸರಿಯಲ್ಲ ಎಂದಿದ್ದಾರೆ.

ಮಾನ್ಯ ಗೃಹ ಸಚಿವರು ಕೂಡಲೇ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಾಗೂ ಶೀಘ್ರವಾಗಿ ಪರೀಕ್ಷಾ ಫಲಿತಾಂಶ ಬಿಡುಗಡೆಗೆ ಮಾನ್ಯ ಉನ್ನತ ಶಿಕ್ಷಣ ಸಚಿವರು, ಕುಲಪತಿಗಳು ಗಮನಹರಿಸಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಟಾಪ್ ನ್ಯೂಸ್

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

ಕಾಳಿಂಗ ನಾವಡ ಪ್ರಶಸ್ತಿಗೆ ಕೋಟ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Belli

Movie Release: ಮಕ್ಕಳ ಚಲನಚಿತ್ರ “ದಿ ಜರ್ನಿ ಆಫ್‌ ಬೆಳ್ಳಿ’ ತೆರೆಗೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.