ಗೋವಾ : ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರ್ಪಡೆಯಾದ ಲಿಯಾಂಡರ್ ಪೇಸ್


Team Udayavani, Oct 29, 2021, 5:29 PM IST

7444

ಪಣಜಿ : ಹಿರಿಯ ಟೆನಿಸ್ ಆಟಗಾರ, ಲಿಯಾಂಡರ್ ಪೇಸ್ ಅವರು ಶುಕ್ರವಾರ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಸಮ್ಮುಖದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ಸೇರ್ಪಡೆಗೊಂಡಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, “ಲಿಯಾಂಡರ್ ಪೇಸ್ ಟಿಎಂಸಿಗೆ ಸೇರ್ಪಡೆಯಾಗಿದ್ದಾರೆ ಎಂದು ತಿಳಿಸಲು ನನಗೆ ತುಂಬಾ ಸಂತೋಷವಾಗಿದೆ. ಅವರು ನನ್ನ ಕಿರಿಯ ಸಹೋದರ. ನಾನು ಯುವಜನ ಸಚಿವೆಯಾದಾಗಿನಿಂದ ಅವರನ್ನು ಬಲ್ಲೆ ಮತ್ತು ಅವರು ತುಂಬಾ ಚಿಕ್ಕವರಾಗಿದ್ದರು” ಎಂದು ಹೇಳಿದರು.

ಮತ್ತೊಬ್ಬ ನಟಿ ಮತ್ತು ಸಾಮಾಜಿಕ ಕಾರ್ಯಕರ್ತೆ , ನಫೀಸಾ ಅಲಿ ಕೂಡ ಲಿಯಾಂಡರ್ ಪೇಸ್‌ ಸೇರ್ಪಡೆಯಾಗುವ ಕೆಲವೇ ಗಂಟೆಗಳ ಮೊದಲು  ಟಿಎಂಸಿಗೆ ಸೇರಿದರು.

2022 ರಲ್ಲಿ ಗೋವಾ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರು ಗುರುವಾರ ಗೋವಾಕ್ಕೆ ಆಗಮಿಸಿದ್ದು, ಬಿಜೆಪಿ ಆಡಳಿತವಿರುವ ರಾಜ್ಯದಲ್ಲಿ ರಾಜಕೀಯ ಪ್ರವೇಶಕ್ಕೆ ಸಿದ್ಧತೆಗಳನ್ನು ಮಾಡುತ್ತಿದ್ದಾರೆ.

ಮೂರು ದಿನಗಳ ಭೇಟಿಗಾಗಿ ಗೋವಾಕ್ಕೆ ಆಗಮಿಸಿರುವ ಮಮತಾ ಬ್ಯಾನರ್ಜಿ ಅವರು ಚುನಾವಣೆ ಗೆಲ್ಲಲು ಎಲ್ಲಾ ರಣ ತಂತ್ರಗಳನ್ನು ಮಾಡುತ್ತಿದ್ದಾರೆ.

ಗೋವಾದ ಬಿಜೆಪಿ ಕಾರ್ಯಕರ್ತರು ಆಕೆಯನ್ನು ಹಿಂದೂ ವಿರೋಧಿ ಎಂದು ಕರೆದಿದ್ದು, ತಿರುಗೇಟು ನೀಡಿರುವ ತೃಣಮೂಲ ಕಾಂಗ್ರೆಸ್ ಪಕ್ಷದ ಮೊದಲಕ್ಷರವಾದ ‘ಟಿಎಂಸಿ’ ಎಂದರೆ ದೇವಸ್ಥಾನ, ಮಸೀದಿ ಮತ್ತು ಚರ್ಚ್ ಎಂದಿದೆ.

ನಾನು ಹಿಂದೂ ಎಂಬ ಅಭಿಮಾನವಿದೆ

ಗೋವಾದ ಪಣಜಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ”ನಾನು ಇಲ್ಲಿ ನಿಮ್ಮ ಅಧಿಕಾರ ಕಸಿದುಕೊಳ್ಳಲು ಬಂದಿಲ್ಲ, ನಿಮಗೆ ಸಹಾಯ ಮಾಡಲು ಬಂದಿದ್ದೇನೆ. ಗೋವಾದ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಲು ಸಂಪೂರ್ಣ ಸುರಕ್ಷೆ ನೀಡಬೇಕಿದೆ. ನಾವು ಅಭಿಮಾನದಿಂದ ಬದುಕಬೇಕು. ನನ್ನ ಧರ್ಮದ ಚಾರಿತ್ರ್ಯ ಪ್ರಮಾಣಪತ್ರ ನೀಡಲು ಬಿಜೆಪಿ ಯಾರು? ನಾನು ಹಿಂದೂ ಎಂಬ ಅಭಿಮಾನವಿದೆ” ಎಂದರು.

”ನಾನು ಧರ್ಮನಿರಪೇಕ್ಷತೆಯ ಮೇಲೆ ವಿಶ್ವಾಸವಿಡುತ್ತೇನೆ. ನನ್ನ ಏಕಾತ್ಮತೆಯ ಮೇಲೆ ವಿಶ್ವಾಸವಿದೆ. ಭಾರತವು ನನ್ನ ಮಾತೃಭೂಮಿ ಎಂಬ ವಿಸ್ವಾಸವೂ ನನಗಿದೆ, ಗೋವಾ ಕೂಡ ನನ್ನ ಮಾತೃಭೂಮಿಯೇ ಆಗಿದೆ” ಎಂದರು.

”ನಾವು ಪ್ರಜಾಪ್ರಭುತ್ವದ ಪದ್ಧತಿಯಲ್ಲಿಯೇ ಚುನಾವಣೆ ಎದುರಿಸುತ್ತೇವೆ, ಆದರೆ ಬಿಜೆಪಿಯು ಚುನಾವಣೆಯ ಸಂದರ್ಭದಲ್ಲಿ ದಂಗೆ ಎಬ್ಬಿಸಲು ನೋಡುತ್ತಿದೆ. ಗೋವಾದ ಯುವಕರಿಗೆ ನಾವು ಮುಂಬರುವ ದಿನಗಳಲ್ಲಿ ಹೊಸ ಅವಕಾಶವನ್ನು ಸೃಷ್ಠಿಸಿಕೊಡಲಿದ್ದೇವೆ” ಎಂದು ಮಮತಾ ಬ್ಯಾನರ್ಜಿ ನುಡಿದರು.

ಟಾಪ್ ನ್ಯೂಸ್

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.