![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Aug 10, 2020, 11:17 PM IST
ಬೈರೂತ್: ಬೈರೂತ್ ಬಂದರು ಪ್ರದೇಶದಲ್ಲಿ ಸಂಭವಿಸಿದ ಭಾರೀ ಪ್ರಮಾನದ ಸ್ಫೋಟದ ಹಿನ್ನೆಲೆಯಲ್ಲಿ ದಶಕಗಳ ಕಾಲದ ಅದಕ್ಷ ಆಡಳಿತ ಎಂಬ ಆರೋಪದ ನಿಟ್ಟಿನಲ್ಲಿ ಲೆಬನಾನ್ ಪ್ರಧಾನಿ ಹಸನ್ ದಿಯಾಬ್ ಸೋಮವಾರ ಅಧಿಕಾರದ ಗದ್ದುಗೆಯಿಂದ ಕೆಳಗಿಳಿದಿರುವುದಾಗಿ ವರದಿ ತಿಳಿಸಿದ್ದಾರೆ.
ಇಂದು ನಾವು ಜನರೆಡೆಗೆ ಲಕ್ಷ್ಯ ಕೊಡುತ್ತಿದ್ದೇವೆ. ಈ ದುರಂತಕ್ಕೆ ಯಾರು ಹೊಣೆಗಾರರು ಎಂಬ ಬೇಡಿಕೆಗೆ ಹೊಣೆ ಹೊರಬೇಕಾಗಿದೆ ಎಂದು ಟೆಲಿವಿಷನ್ ಉದ್ದೇಶಿಸಿ ಮಾತನಾಡುತ್ತ ದಿಯಾ ತಿಳಿಸಿದ್ದಾರೆ.
ಕಳೆದ ಮೂರು ದಶಕಗಳ ಭ್ರಷ್ಟ ರಾಜಕೀಯ ಆಡಳಿತದಿಂದಾಗಿ ಆಗಸ್ಟ್ 4ರಂದು ಸ್ಫೋಟ ಸಂಭವಿಸಲು ಕಾರಣವಾಗಿದೆ ಎಂದು ಆರೋಪಿಸಿರುವುದಾಗಿ ವರದಿ ತಿಳಿಸಿದೆ. ಈ ನಿಟ್ಟಿನಲ್ಲಿ ನಾನು ನನ್ನ ಸರ್ಕಾರಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಘೋಷಿಸಿದ್ದರು.
ಲೆಬನಾನ್ ನಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ 160ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದರು. 6000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ 20 ಮಂದಿ ನಾಪತ್ತೆಯಾಗಿದ್ದರು ಎಂದು ವರದಿ ತಿಳಿಸಿತ್ತು.
ಸ್ಫೋಟ ಸಂಭವಿಸಿದ ಗ್ರೌಂಡ್ ಜೀರೋ ಪ್ರದೇಶದಲ್ಲಿ ಶ್ವಾನದಳ ತಂಡ ಮತ್ತು ಅತ್ಯಾಧುನಿಕ ತಂತ್ರಜ್ಞರ ತಂಡ ಶೋಧ ಕಾರ್ಯ ನಡೆಸುತ್ತಿದೆ. ಶವ ಹಾಗೂ ಇತರರಿಗಾಗಿ ಈ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿ ತಿಳಿಸಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
You seem to have an Ad Blocker on.
To continue reading, please turn it off or whitelist Udayavani.