ಮಳೆ ಎದುರಿಸಲು ಸಮರ್ಥವಾಗಿ ಸಿದ್ಧವಾಗಲಿ ಆಡಳಿತ


Team Udayavani, May 22, 2023, 6:09 AM IST

rain 2

ರಾಜ್ಯದಲ್ಲಿ ಹೊಸ ಸರಕಾರ ಅಸ್ತಿತ್ವಕ್ಕೆ ಬಂದ ಮರುದಿನವೇ ಶಕ್ತಿಸೌಧದ ಹೊಸ್ತಿಲಲ್ಲೇ ಮಳೆಯ ಅಬ್ಬರಕ್ಕೆ ಮೊದಲ ಸಾವು ಸಂಭವಿಸಿದೆ. ಹೈದರಾಬಾದ್‌ ಮೂಲದ ಆರು ಜನರ ಕುಟುಂಬ ಬೆಂಗಳೂರಿಗೆ ಬಂದ ವೇಳೆ ಮಳೆನೀರು ತುಂಬಿಕೊಂಡಿದ್ದ ಕೆ.ಆರ್‌. ವೃತ್ತದಲ್ಲಿನ ಅಂಡರ್‌ಪಾಸ್‌ ಮೂಲಕ ಹಾದುಹೋಗುವಾಗ ಆ ಕುಟುಂಬದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಸರಕಾರ “ಹನಿಮೂನ್‌ ಮೂಡ್‌’ಗೆ ಜಾರುವ ಮುನ್ನವೇ ಈ ಘಟನೆ ನಡೆದಿದೆ. ಇದರೊಂದಿಗೆ ಸವಾಲಿನ ದಿನಗಳ ಸೂಚನೆ ಸಿಕ್ಕಿದೆ.

ಮುಂಗಾರು ಇನ್ನೂ ಆರಂಭಗೊಂಡಿಲ್ಲ. ಮಳೆಗಾಲದ ಅವಾಂತರಗಳನ್ನು ಎದುರಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಷ್ಟರಮಟ್ಟಿಗೆ ಸಜ್ಜುಗೊಂಡಿದೆ ಎಂಬುದನ್ನು ಈ ಘಟನೆ ಬಯಲುಗೊಳಿಸಿದೆ. ಅಷ್ಟೇ ಅಲ್ಲ, ಸರಕಾರವು ಅಧಿಕಾರಿಗಳಿಗೆ ಚಾಟಿ ಬೀಸದಿದ್ದರೆ ಮುಂದಿನ ದಿನಗಳು ಇನ್ನೂ ಭಯಾನಕ ಆಗಿರಲಿವೆ ಎಂಬ ಎಚ್ಚರಿಕೆಯನ್ನೂ ವರುಣ ನೀಡಿದಂತಿದೆ.

ಹಾಗೆ ನೋಡಿದರೆ ಸರಕಾರದ ಯೋಜನೆ ಪ್ರಕಾರ ಅಂಡರ್‌ಪಾಸ್‌ಗಳು ಮತ್ತು ಎತ್ತರಿಸಿದ ಮಾರ್ಗಗಳ ನಿರ್ಮಾಣದ ಉದ್ದೇಶ ಸುಗಮ ಸಂಚಾರ ಕಲ್ಪಿಸುವುದಾಗಿದೆ. ಆದರೆ ಆ ಅಂಡರ್‌ಪಾಸ್‌ಗಳೇ ಸಾವಿಗೆ ರಹದಾರಿಗಳಾಗುತ್ತಿರುವುದು ವಿಪರ್ಯಾಸ. ಘಟನೆ ನಡೆದ ಸ್ಥಳ ನಗರದ ಹೃದಯಭಾಗ. ವಿಧಾನಸೌಧ, ಬಹುಮಹಡಿ ಕಟ್ಟಡ, ಹೈಕೋರ್ಟ್‌ ಪಕ್ಕದಲ್ಲೇ ಎನ್ನುವುದು ಗಮನಿಸಬೇಕಾದ ಅಂಶ. ಇನ್ನೂ ವಿಚಿತ್ರವೆಂದರೆ ಕೇವಲ 30 ಮಿ.ಮೀ. ಮಳೆಯಾಗಿದೆ. ಅಷ್ಟಕ್ಕೇ ಇಷ್ಟು ದೊಡ್ಡ ಅವಾಂತರವಾಗಿದೆ. ನೂರಾರು ಮಿಲಿಮೀಟರ್‌ ಸುರಿದರೆ ಗತಿ ಏನು ಎಂಬ ಪ್ರಶ್ನೆಯನ್ನೂ ಈ ಘಟನೆ ಎತ್ತಿದೆ.

ಕೆ.ಆರ್‌. ವೃತ್ತದಲ್ಲಿನ ಪ್ರಕರಣ ಮಾತ್ರವಲ್ಲ; ನಗರದ ಪ್ರಮುಖ ರಸ್ತೆಗಳು, ಜಂಕ್ಷನ್‌ಗಳು, ಅಂಡರ್‌ಪಾಸ್‌ಗಳಲ್ಲಿ ಕೂಡ ಸ್ಥಿತಿ ಭಿನ್ನವಾಗಿರಲಿಲ್ಲ. ಅವೆಲ್ಲವೂ ಬಹುತೇಕ ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ವಿಜಯನಗರದ ಶೋಭಾ ಆಸ್ಪತ್ರೆ ಬಳಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್‌ ಎದುರೇ ಮರವೊಂದು ನೆಲಕಚ್ಚಿದೆ. ಕೂದಲೆಳೆಯಲ್ಲಿ ಅನಾಹುತ ತಪ್ಪಿದೆ. ಹಲವು ಕಾರುಗಳ ಮೇಲೆಯೇ ಮರಗಳು ಬಿದ್ದಿವೆ. ಬೀಳಬಹುದಾದ ಮರಗಳನ್ನು ಗುರುತಿಸಿ ಕಡಿತ ಅಥವಾ ತೆರವು ಕಾರ್ಯ ಮಾಡಬೇಕಾದ ಸಂಬಂಧಪಟ್ಟ ಅಧಿಕಾರಿಗಳು ಏನು ಮಾಡುತ್ತಿದ್ದರು ಎಂಬ ಪ್ರಶ್ನೆಯನ್ನೂ ಎತ್ತುತ್ತದೆ. ಸಿಬಂದಿ ಚುನಾವಣೆ ಕರ್ತವ್ಯದಲ್ಲಿ “ಬ್ಯುಸಿ’ ಆಗಿದ್ದರು ಎಂಬ ಸಿದ್ಧ ಸಬೂಬನ್ನು ಸ್ಥಳೀಯ ಸಂಸ್ಥೆಗಳು ನೀಡಬಹುದು. ಆದರೆ ಹೀಗೆ ನಗರದಲ್ಲಿ ಮಳೆಗೆ ಜನರು ಸಾವನ್ನಪ್ಪು ತ್ತಿರುವುದು ಇದೇ ಮೊದಲಲ್ಲ; ಇದು ಪ್ರತೀ ವರ್ಷದ ಗೋಳು ಆಗಿದೆ. ಒಮ್ಮೊಮ್ಮೆ ಮಳೆಗೆ ರಸ್ತೆ ಗುಂಡಿಬಿದ್ದು, ಮತ್ತೂಮ್ಮೆ ವಾಹನದಲ್ಲಿ ಹೊರಟಾಗ ಮರಬಿದ್ದು, ಇನ್ನೊಮ್ಮೆ ರಾಜಕಾಲುವೆಯಲ್ಲಿ ಕೊಚ್ಚಿಹೋಗುವುದು ಸಾಮಾನ್ಯವಾಗಿದೆ.

ಪ್ರತೀ ಘಟನೆಯಲ್ಲೂ ರಾಜಕಾಲುವೆ ಒತ್ತುವರಿ ತೆರವು ಸದ್ದಾಗುತ್ತದೆ. ಅನಂತರ ಮಿಂಚಿನಂತೆ ಮಾಯವಾಗುತ್ತದೆ. ಈ ಹಿಂದೆ ರಾಜಕಾಲುವೆ ಎರಡೂ ಕಡೆಗಳಲ್ಲಿನ ತಡೆಗೋಡೆಗಳನ್ನು ಎತ್ತರಿಸಲು ಸಾವಿರಾರು ಕೋಟಿ ಸುರಿಯಲಾಗಿದೆ. ಪರಿ ಣಾಮ ಮಾತ್ರ ಗೊತ್ತಿಲ್ಲ. ಹೊಸ ಸರಕಾರ ಚಾಟಿ ಬೀಸುವ ಮೂಲಕ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಬೇಕಿದೆ. ಆಗಾಗ್ಗೆ ಉಂಟಾಗುವ ಇಂಥ ಭಾರೀ ಮಳೆ, ಪ್ರವಾ ಹಕ್ಕೆ ಸರ್ವ ರೀತಿಯಲ್ಲೂ ಆಡಳಿತ ಸಿದ್ಧವಾಗಬೇಕಾಗಿದೆ.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.