ಮನೆಗೆ ಮರಳುವ ಆಸೆಗೆ ಕೊರೊನಾ ತಣ್ಣೀರು! ನಿರಾಶ್ರಿತರ ಕೇಂದ್ರಗಳಲ್ಲಿ ನೂರಾರು ಮಂದಿ ಬಾಕಿ


Team Udayavani, Nov 16, 2020, 10:52 AM IST

ಮನೆಗೆ ಮರಳುವ ಆಸೆಗೆ ಕೊರೊನಾ ತಣ್ಣೀರು! ನಿರಾಶ್ರಿತರ ಕೇಂದ್ರಗಳಲ್ಲಿ ನೂರಾರು ಮಂದಿ ಬಾಕಿ

ಮಂಗಳೂರು: ಹಲವು ವರ್ಷಗಳ ಕಾಲ ಮನೆಯವರಿಂದ ದೂರವಿದ್ದು ದಿಕ್ಕು ದೆಸೆ ಇಲ್ಲದೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಪಡೆದು ಮನೆಗೆ ಮರಳಲು ಅಣಿಯಾಗಿರುವ ನೂರಾರು ಮಂದಿಯ ಆಸೆಗೆ ಕೊರೊನಾ ತಣ್ಣೀರೆರಚಿದೆ.

ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಘೋಷಣೆಯಾದ ಕೂಡಲೇ ಎಲ್ಲ ನಿರಾಶ್ರಿತರ ಕೇಂದ್ರಗಳನ್ನು ಮುಚ್ಚಿ ಕೇಂದ್ರಗಳಿಗೆ ಸೇರ್ಪಡೆ, ಕೇಂದ್ರಗಳಿಂದ ಬಿಡುಗಡೆಯನ್ನು ಸಂಪೂರ್ಣವಾಗಿ ತಡೆಹಿಡಿಯಲಾಗಿದೆ. ಪರಿಣಾಮವಾಗಿ ನೂರಾರು ಮಂದಿ ಇಂತಹ ಕೇಂದ್ರಗಳಲ್ಲೇ ಉಳಿದುಕೊಳ್ಳುವುದು ಅನಿವಾರ್ಯವಾಗಿದೆ.

14 ಕೇಂದ್ರಗಳಲ್ಲಿ ಬಾಕಿ
ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕೇಂದ್ರ ಪರಿಹಾರ ಸಮಿತಿಯ ಆಶ್ರಯದಲ್ಲಿ 14 ನಿರಾಶ್ರಿತರ ಕೇಂದ್ರಗಳಿದ್ದು 2,700ಕ್ಕೂ ಅಧಿಕ ಮಂದಿ ಆಶ್ರಯ ಪಡೆದುಕೊಂಡಿದ್ದಾರೆ. ಅವರಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡು ಇಲಾಖೆ
ಯಿಂದ ರಕ್ಷಿಸಲ್ಪಟ್ಟು ಅನಂತರ ಮನೆ ವಿಳಾಸ ಪತ್ತೆಯಾಗಿ ಮನೆಗೆ ತೆರಳಲು ಸಿದ್ಧವಾಗಿರುವವರು ಶೇ. 50ಕ್ಕೂ ಅಧಿಕ ಮಂದಿ. ವಿಳಾಸ ಇಲ್ಲದವರ ವಿಳಾಸ ಪತ್ತೆಹಚ್ಚಿ ಮನೆಯವರನ್ನು ಸಂಪರ್ಕಿಸಲಾಗಿದ್ದು ಮನೆಯವರು ಕೂಡ ವರ್ಷಗಟ್ಟಲೆ ತಮ್ಮಿಂದ ದೂರವಾಗಿರುವ ಬಂಧುಗಳನ್ನು ಬರಮಾಡಿಕೊಳ್ಳುವ ತವಕದಲ್ಲಿದ್ದಾರೆ. ಅವರಲ್ಲಿ ಹೊರ ರಾಜ್ಯದವರೂ ಇದ್ದಾರೆ. ಆದರೆ ಕೊರೊನಾ ಇದಕ್ಕೆ ತಡೆಯಾಗಿದೆ.

ನ್ಯಾಯಾಲಯ ಅನುಮತಿ
ಎಪ್ರಿಲ್‌ ಅನಂತರ ನಿರಾಶ್ರಿತರ ಕೇಂದ್ರಗಳಿಂದ ಯಾರನ್ನೂ ಮನೆಗೆ ಕಳುಹಿಸಿಲ್ಲ. ಸಾಮಾನ್ಯವಾಗಿ ಒಂದು ವರ್ಷ ಅಥವಾ ಮೂರು ವರ್ಷಗಳ ಅವಧಿಯವರೆಗೆ ಇಂತಹ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಒದಗಿಸಲಾಗುತ್ತದೆ. ಈಗಾಗಲೇ ನಿಗದಿತ ಅವಧಿ ಮುಗಿದವರು ಅನೇಕ ಮಂದಿ ಇದ್ದಾರೆ. ಅಂತಹ ನಿರಾಶ್ರಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಕೊರೊನಾ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಅನುಮತಿ ಪಡೆದು ಅವರ ಆಶ್ರಯದ ಅವಧಿ ವಿಸ್ತರಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ಬದುಕಿನತ್ತ ಹೆಜ್ಜೆ
ಸಾಮಾನ್ಯವಾಗಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿರುವವರಿಗೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ಒದಗಿಸಲಾಗುತ್ತದೆ. ಭಿಕ್ಷಾಟನೆ ನಿಷೇಧ ಕಾಯಿದೆಯಡಿ ಅವರನ್ನು ವಶಕ್ಕೆ ಪಡೆದು ಇಲಾಖೆಯ ಸುಪರ್ದಿಯಲ್ಲಿಡಲಾಗುತ್ತದೆ. ಅವರಿಗೆ ಕೌನ್ಸೆಲಿಂಗ್‌ ಸೇರಿದಂತೆ ಚಿಕಿತ್ಸೆಯನ್ನು ಕೂಡ ನೀಡಲಾಗುತ್ತದೆ. ಅವರ ಮನೆಯ ವಿಳಾಸವಿದ್ದರೆ ಅದನ್ನು ಪತ್ತೆಹಚ್ಚಿ ಮನೆಯವರನ್ನು ಸಂಪರ್ಕಿಸಿ ಮನೆಗೆ ಕಳುಹಿಸಿಕೊಡಲಾಗುತ್ತದೆ. ನಿರಾಶ್ರಿತರ ಕೇಂದ್ರಗಳಿಂದ ತೆರಳಿದವರ ಪೈಕಿ ಭಿಕ್ಷಾಟನೆ ಬಿಟ್ಟು ಹೊಸ ಬದುಕು ಕಟ್ಟಿಕೊಂಡಿರುವವರೇ ಹೆಚ್ಚು ಎನ್ನುತ್ತಾರೆ ನಿರಾಶ್ರಿತ ಕೇಂದ್ರಗಳ ನಿರ್ವಾಹಕರು.

ಸದ್ಯ ಬಿಡುಗಡೆ ಇಲ್ಲ
ನಿರಾಶ್ರಿತರ ಕೇಂದ್ರಗಳಲ್ಲಿ ಇರುವವರ ಆರೋಗ್ಯ ಇತರರಿಗಿಂತ ಸೂಕ್ಷ್ಮ. ಕೇಂದ್ರದ ಒಬ್ಬರಿಗೆ ಸೋಂಕು ಬಂದರೆ ಉಳಿದವರಿಗೆ ಬೇಗನೆ ಹರಡುವ ಸಾಧ್ಯತೆ ಅಧಿಕ. ಕೇಂದ್ರಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಿರುವುದರಿಂದ ಯಾವುದೇ ಕೇಂದ್ರದಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ. ಈಗ ಅವರನ್ನು ಮನೆಗೆ ಕಳುಹಿಸಿದರೆ ಅವರಿಗೆ ಮಾತ್ರವಲ್ಲದೆ ಮನೆಯವರಿಗೂ ಅಪಾಯ. ಹಾಗಾಗಿ ಸದ್ಯಕ್ಕೆ ಬಿಡುಗಡೆ ಇಲ್ಲ.
– ಯು. ಚಂದ್ರ ನಾಯಕ್‌, ಕಾರ್ಯದರ್ಶಿ ಕೇಂದ್ರ ಪರಿಹಾರ ಸಮಿತಿ, ಬೆಂಗಳೂರು

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.