Lokasabha: ಕಾಂಗ್ರೆಸ್‌ಗೆ 100ಕ್ಕೆ 99 ಸಿಕ್ಕಿದ್ದಲ್ಲ- ಪ್ರಧಾನಿ ಮೋದಿ ವಾಗ್ದಾಳಿ

ಎನ್‌ಡಿಎ ಸರ್ಕಾರ “ಸಂತುಷ್ಟೀಕರಣʼ ನೀತಿ ಹೊಂದಿದೆ, ತುಷ್ಟೀಕರಣ ಅಳವಡಿಸಿಲ್ಲ

Team Udayavani, Jul 2, 2024, 7:45 PM IST

Modi-Lokasabha

ನವದೆಹಲಿ: ಕೇಂದ್ರದ  ಎನ್‌ಡಿಎ ಸರ್ಕಾರವು ‘ಸಂತುಷ್ಟೀಕರಣʼ ನೀತಿಯನ್ನು ಅನುಸರಿದೆ ಹೊರತು ‘ತುಷ್ಟೀಕರಣʼವನ್ನು ಅನುಸರಿಸಿಲ್ಲ ಎಂದು ವಿಪಕ್ಷ ಇಂಡಿಯಾ ಕೂಟ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದರು.

ಮೂರನೇ ಬಾರಿಗೆ ಪ್ರಧಾನಮಂತ್ರಿಯಾದ ಬಳಿಕ ೧೮ನೇ ಲೋಕಸಭೆಯ ಮೊದಲ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣಕ್ಕೆ ವಂದನಾ ನಿರ್ಣಯ ಸಲ್ಲಿಸಿ ಮಾತನಾಡುವ ವೇಳೆ ವಿಪಕ್ಷ ಇಂಡಿಯಾ ಕೂಟದ ಸದಸ್ಯರು ಘೋಷಣೆಗಳ ಕೂಗುತ್ತ ಅಡ್ಡಿಪಡಿಸುತ್ತಿದ್ದರೂ ಭಾಷಣ ಮುಂದುವರಿಸಿದ ಪ್ರಧಾನಿ ಮೋದಿ ಪ್ರತಿಪಕ್ಷಗಳು ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

“ತುಷ್ಟೀಕರಣ ರಾಜಕಾರಣವನ್ನು ದೇಶ ಬಹುಕಾಲ ನೋಡಿದೆ. ನಾವು ತುಷ್ಟಿಕರಣವನ್ನಲ್ಲ ’ಸಂತುಷ್ಟಿಕರಣʼ ವನ್ನು ಅನುಸರಿಸಿದ್ದೇವೆ. ಎಲ್ಲರಿಗೂ ನ್ಯಾಯ ಎಂಬುದು ನಮ್ಮ ಧ್ಯೇಯ. “ಇದು ಕಾಂಗ್ರೆಸ್‌ನ ಇತಿಹಾಸದಲ್ಲಿ ಮೂರನೇ ಅತಿ ದೊಡ್ಡ ಸೋಲು. ಕಾಂಗ್ರೆಸ್ ತನ್ನ ಸೋಲನ್ನು ಒಪ್ಪಿಕೊಂಡು ಜನರ ಆದೇಶವನ್ನು ಗೌರವಿಸಿದ್ದರೆ ಅದು ಉತ್ತಮವಾಗಿರುತ್ತಿತ್ತು. ಆದರೆ, ಅವರು ಕೆಲವು ‘ಶೀರ್ಷಾಸನ ಮಾಡುವಲ್ಲಿ ನಿರತರಾಗಿದ್ದಾರೆ. ಕಾಂಗ್ರೆಸ್​ನವರೇ ನಮ್ಮನ್ನು ಸೋಲಿಸಿದ್ದಾರೆ ಎಂದು ಭಾರತದ ನಾಗರಿಕರ ಮನಸ್ಸಿನಲ್ಲಿ ಅಭಿಪ್ರಾಯ ಮೂಡಿಸುವ ಹೇಳಿಕೆಗಳ ನೀಡುತ್ತಾ ಓಡಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ.

ಕಾಂಗ್ರೆಸ್‌ ೧೦೦ಕ್ಕೆ ೯೯ ಪಡೆದಿದ್ದಲ್ಲ, ರಾಹುಲ್‌ ಮಗು ಎಂದ ಮೋದಿ:

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿರನ್ನು “ಮಗು” ಎಂದು ಬಣ್ಣಿಸಿದ್ದಾರೆ. ರಾಹುಲ್ ಗಾಂಧಿಯನ್ನು ಗುರಿಯಾಗಿಸಲು ಶಾಲಾ ಮಗುವಿನ ಕತೆಯೊಂದನ್ನು ಹೇಳಿದ ಅವರು, ನಮ್ಮ ಈ ಮಗು ಸೋಲಿನಲ್ಲಿ “ಹೊಸ ವಿಶ್ವ ದಾಖಲೆ” ಮಾಡಿದೆ ಎಂದು ತಮಾಷೆ ಮಾಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿಈ ಬಾರಿ ಕಾಂಗ್ರೆಸ್ 99 ಸ್ಥಾನಗಳ ಗಳಿಸಿತು. ಇದು ಮಗುವಿನ ಕತೆ ನೆನಪಿಗೆ ತರುತ್ತದೆ. ಮಗುವೊಂದು ತಾನು 99 ಅಂಕಗಳನ್ನು ಪಡೆದಿದ್ದೇನೆ ಎಂದು ಎಲ್ಲರಿಗೂ ಹೇಳಿ ಖುಷಿ ಪಡುತ್ತಿತ್ತು. ಅದನ್ನು ಕೇಳಿ ಎಲ್ಲರೂ ಆ ಮಗುವಿನ ಬೆನ್ನು ತಟ್ಟುತ್ತಿದ್ದರು. ಆಗ ಬಂದ ಟೀಚರ್ ಆ ಮಗುವಿನ ಬಳಿ ನೀನೇಕೆ ಸ್ವೀಟ್ ಹಂಚುತ್ತಿದ್ದೀಯ? ಎಂದು ಕೇಳಿದರು. ವಾಸ್ತವದ ವಿಷಯ ಏನೆಂದರೆ ಆ ಮಗು 100ಕ್ಕೆ 99 ಅಂಕ ಪಡೆದಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಆ ಮಗುವಿಗೆ 543ರಲ್ಲಿ 99 ಅಂಕ ಪಡೆದಿತ್ತು ಎಂದು ಮೋದಿ ಹಾಸ್ಯಾಸ್ಪದವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ ಕಾಲೆಳೆದಿದ್ದಾರೆ.


ಮೋದಿ ಭಾಷಣ ಪ್ರಮುಖಾಂಶಗಳು

1. ಭ್ರಷ್ಟಾಚಾರದ ವಿರುದ್ಧ ಶೂನ್ಯ ಸಹಿಷ್ಣುತೆಯ ನೀತಿಗಾಗಿ ದೇಶವು ಎನ್‌ಡಿಎಗೆ ಮತ ಹಾಕಿದೆ. 2047ರ ಭಾರತ ಸಂಪೂರ್ಣವಾಗಿ ಬದಲಾಗಿರಲಿದೆ. ನಾವು ಜನರಿಗಾಗಿ 24 ಗಂಟೆಯೂ ಕೆಲಸ ಮಾಡುತ್ತಿದ್ದೇವೆ.

2.  “ಕಾಂಗ್ರೆಸ್ ಮತ್ತು ಅದರ ಪರಿಸರ ವ್ಯವಸ್ಥೆಯು ನಮ್ಮನ್ನು ಸೋಲಿಸಿದೆ ಎಂದು ಜನರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್‌ಗೆ ಜನರ ಜನಾದೇಶವೆಂದರೆ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳುವುದು. ಕಾಂಗ್ರೆಸ್ ಸತತ ಮೂರು ಬಾರಿ 100 ಅಂಕಗಳನ್ನು ದಾಟಲು ಸಾಧ್ಯವಾಗಲಿಲ್ಲ.

3. ನಮ್ಮ ಮೂರನೇ ಅವಧಿ ಎಂದರೆ ೨೦೪೭ರ ವಿಕಸಿತ ಭಾರತಕ್ಕಾಗಿ ಮೂರು ಪಟ್ಟು ಹೆಚ್ಚು ಶಕ್ತಿ ಹಾಕಿ ಕೆಲಸದ ವೇಗ ಮೂರು ಪಟ್ಟು ಹೆಚ್ಚಿಸುವುದಾಗಿದೆ.

ಟಾಪ್ ನ್ಯೂಸ್

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

supreem

NEET-UG ಪರೀಕ್ಷೆ ರದ್ದುಗೊಳಿಸದಂತೆ ನಿರ್ದೇಶನ ನೀಡಿ: 50 ಕ್ಕೂ ಹೆಚ್ಚು ಅಭ್ಯರ್ಥಿಗಳ ಮನವಿ

Up-Police

Uttara Pradesh: ಹಾಥರಸ್‌ ದುರಂತಕ್ಕೆ ಸಂಬಂಧಿಸಿ 6 ಮಂದಿ ಬಂಧನ

1-hemanth-soren-CM

Jharkhand; ಮತ್ತೆ ಸಿಎಂ ಆಗಿ ಹೇಮಂತ್ ಪ್ರಮಾಣವಚನ: ಶಿಬು ಸೊರೇನ್ ಭಾಗಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರುKundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

Kundapura ಪೊಲೀಸ್‌ ಹೆಸರಿನಲ್ಲಿ ಲಕ್ಷ ದೋಚಿದರು

1-asdsdas

Yakshagana; ಖ್ಯಾತ ಪ್ರಸಾಧನ ಕಲಾವಿದ ಬಾಲಕೃಷ್ಣ ನಾಯಕ್‌ ವಿಧಿವಶ

police crime

Jammu; ಶಿವನ ದೇವಾಲಯ ಧ್ವಂಸ: 43 ಆರೋಪಿಗಳ ಬಂಧನ

1-dssd

Heavy Rain; ಜುಲೈ 5 ರಂದು ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.