Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್


Team Udayavani, Sep 19, 2024, 1:34 PM IST

8

ಚೆನ್ನೈ: ಕಾಲಿವುಡ್‌ ಸ್ಟಾರ್‌ ಡೈರೆಕ್ಟರ್‌ ಲೋಕೇಶ್‌ ಕನಕರಾಜ್‌ (Lokesh Kanagaraj ಅವರ ʼಕೂಲಿʼ (Coolie) ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಸೂಪರ್‌ ಸ್ಟಾರ್‌ ರಜಿನಿಕಾಂತ್‌ (Rajinikanth)  ಸೇರಿದಂತೆ ಸಿನಿಮಾದಲ್ಲಿ ಮಲ್ಟಿಸ್ಟಾರ್ಸ್‌ ಗಳಿರುವ ಕಾರಣದಿಂದ ʼಕೂಲಿʼ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ.

ಸಿನಿಮಾ ಅನೌನ್ಸ್‌ ಆದ ದಿನದಿಂದ ಇದುವರೆಗೆ ಸಿನಿಮಾದಲ್ಲಿನ ಪಾತ್ರದ ಪರಿಚಯವನ್ನು ಮಾಡುತ್ತಾ ʼಕೂಲಿʼ ಮೇಲಿನ ಕುತೂಹಲವನ್ನು ಚಿತ್ರತಂಡ ಹೆಚ್ಚಾಗಿಸಿದೆ. ಇತ್ತೀಚಗೆ ನಟ ಉಪೇಂದ್ರ (Upendra), ಮಾಲಿವುಡ್‌ ನಟ  ಸೌಬಿನ್ ಶಾಹಿರ್ (Soubin Shahir), ಟಾಲಿವುಡ್‌ ʼಕಿಂಗ್‌ʼ ನಾಗಾರ್ಜುನ್‌ (Akkineni Nagarjuna) ಅವರ ಪಾತ್ರದ ಲುಕ್‌ ರಿವೀಲ್‌ ಆಗಿತ್ತು.

ಯಾವುದೇ ಒಂದು ದೊಡ್ಡ ಪ್ರಾಜೆಕ್ಟ್‌ ಶೂಟಿಂಗ್‌ ಹಂತದಲ್ಲಿದ್ದಾಗ, ಆ ಸೆಟ್‌ನಿಂದ ಒಂದಷ್ಟು ಫೋಟೋ ಹಾಗೂ ವಿಡಿಯೋಗಳು ಕೆಲವೊಮ್ಮೆ ಲೀಕ್‌ ಆಗುತ್ತವೆ. ಇದರಿಂದ ಆ ಚಿತ್ರದ ನಿರ್ದೇಶಕನಿಗೆ ಬೇಸರವಾಗುವುದು ಸಹಜ. ಇದೇ ರೀತಿಯ ಬೇಸರ ನಿರ್ದೇಶಕ ಲೋಕೇಶ್‌ ಕನಕರಾಜ್‌ ಅವರಿಗೆ ಆಗಿದ್ದು, ಈ ಕುರಿತು ಅವರು ಅಸಮಾಧಾನವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ: Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

ಕಾಲಿನ ಮೇಲೆ ಕಾಲು ಹಾಕಿಕೊಂಡು ಗೋಲ್ಡ್‌ ಕಲರ್‌ ವಾಚ್‌ ಧರಿಸಿರುವ ಕ್ಲಾಸ್‌ ಲುಕ್‌ ನಲ್ಲಿ ನಾಗಾರ್ಜುನ್‌ ಕಾಣಿಸಿಕೊಂಡಿರುವ ʼಸೈಮನ್‌ʼ ಲುಕ್‌ ಇತ್ತೀಚೆಗೆ ರಿವೀಲ್‌ ಆಗಿತ್ತು. ಈ ಪಾತ್ರದ ಮಾಸ್‌ ಸೀನ್‌ ವೊಂದು ಶೂಟ್‌ ಆಗುತ್ತಿದ್ದ ವೇಳೆ ಯಾರೋ ಒಬ್ಬರು ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಇಂಟರ್‌ ನೆಟ್ ನಲ್ಲಿ ಹರಿದು ಬಿಟ್ಟಿದ್ದಾರೆ.

ನಾಗಾರ್ಜುನ್‌ ಅವರ ಸುತ್ತಿಗೆಯಿಂದ ವ್ಯಕ್ತಿಯೊಬ್ಬನಿಗೆ ಹೊಡೆಯುತ್ತಿರುವ ದೃಶ್ಯದ ಶೂಟ್‌ ಆಗುತ್ತಿತ್ತು. ಇದನ್ನು ಮೊಬೈಲ್‌ ನಲ್ಲಿ ಚಿತ್ರೀಕರಿಸಿ ವೈರಲ್‌ ಮಾಡಿದ್ದಾರೆ. ಇದು ನಿರ್ದೇಶಕ ಲೋಕೇಶ್‌ ಅವರ ಗಮನಕ್ಕೆ ಬಂದಿದ್ದು, ಅವರು ಅಸಮಾಧಾನವನ್ನು ಹೊರ ಹಾಕಿದ್ದಾರೆ.

“ಒಂದು ರೆಕಾರ್ಡಿಂಗ್‌ನಿಂದಾಗಿ ಅನೇಕ ಜನರ ಎರಡು ತಿಂಗಳ ಶ್ರಮ ವ್ಯರ್ಥವಾಯಿತು. ಈ ರೀತಿ ಶ್ರಮವನ್ನು ಹಾಳು ಮಾಡುವ ಅಭ್ಯಾಸವನ್ನು ಯಾರು ಇಟ್ಟುಕೊಳ್ಳಬೇಡಿ ಎಂದು ನಾನು ವಿನಂತಿ ಮಾಡಿಕೊಳ್ಳುತ್ತೇನೆ ಎಂದು” ಲೋಕೇಶ್‌ ʼಎಕ್ಸ್‌ʼನಲ್ಲಿ ಬರೆದುಕೊಂಡಿದ್ದಾರೆ.

ಬಹು ನಿರೀಕ್ಷಿತ ʼಕೂಲಿʼಯಲ್ಲಿ ರಜಿನಿಕಾಂತ್‌, ನಾಗಾರ್ಜುನ್‌, ಸೌಬಿನ್‌, ಉಪೇಂದ್ರ ಜತೆ ಸತ್ಯರಾಜ್ (Satyaraj) ಮತ್ತು ಶ್ರುತಿ ಹಾಸನ್ (Shruti Haasan) ಕೂಡಾ ಸಿನಿಮಾದ ಭಾಗವಾಗಲಿದ್ದಾರೆ. ಇದರೊಂದಿಗೆ ಕನ್ನಡದ ರಚಿತಾ ರಾಮ್‌ ಸಿನಿಮಾದಲ್ಲಿ ನೆಗೆಟಿವ್‌ ಶೇಡ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಆದರೆ ಇದು ಇನ್ನಷ್ಟೇ ಅಧಿಕೃತವಾಗಬೇಕಿದೆ.

ಸದ್ಯ ರಜಿನಿಕಾಂತ್‌ ಅವರ ‌ʼವೆಟ್ಟೈಯನ್‌ ʼ ಅಕ್ಟೋಬರ್ 10ರಂದು ರಿಲೀಸ್‌ ಆಗಲಿದೆ. ಈ ಸಿನಿಮಾದ ಬಳಿಕ ಅವರು ʼಕೂಲಿʼಯಲ್ಲಿ ತೊಡಗಿಕೊಳ್ಳಲಿದ್ದಾರೆ.

ಟಾಪ್ ನ್ಯೂಸ್

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

100 ಎಫ್ಐಆರ್‌ ದಾಖಲಿಸಿದರೂ ಹೆದರಲ್ಲ: ಅಶೋಕ್‌

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

12

Actress Sakunthala: ಹೃದಯಾಘಾತದಿಂದ ಬಹುಭಾಷಾ ನಟಿ ʼಸಿ.ಐ.ಡಿ. ಶಕುಂತಲಾʼ ನಿಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.