Love Case; ಪೆಟ್ರೋಲ್ ಎರಚಿ ಬೆಂಕಿ: ನಾಲ್ವರಿಗೆ ಗಾಯ, ಮೂವರು ಗಂಭೀರ!

ಮುದ್ದೇಬಿಹಾಳದಲ್ಲಿ ಯುವತಿಯ ಮನೆಯಲ್ಲಿ ನಡೆದ ಬೆಚ್ಚಿ ಬೀಳುವ ಘಟನೆ

Team Udayavani, May 27, 2024, 8:43 PM IST

police crime

ಮುದ್ದೇಬಿಹಾಳ: ಜಿಲ್ಲೆ ಮುದ್ದೇಬಿಹಾಳದಲ್ಲಿ ಪ್ರೇಮ ಪ್ರಕರಣವೊಂದರಲ್ಲಿ ಪ್ರಿಯತಮೆಯ ಮನೆಯಲ್ಲಿಯೇ ಮಾತಿನ ಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿ, ಮರಣಾಂತಿಕ ಹಲ್ಲೆಗೆ ಯತ್ನಿಸಿದ ಪರಿಣಾಮ ಪ್ರೇಮಿ ಮತ್ತು ಪ್ರಿಯತಮೆಯ ಕುಟುಂಬದ ಮೂವರು ಸೇರಿ ನಾಲ್ವರಿಗೆ ಸುಟ್ಟ ಗಾಯಗಳಾಗಿದ್ದು ಇವರಲ್ಲಿ ಪ್ರೇಮಿಯೂ ಸೇರಿ ಮೂವರ ಸ್ಥಿತಿ ಗಂಭಿರವಾಗಿದೆ.

ಘಟನೆಯಲ್ಲಿ ಪ್ರೇಮಿ ಢವಳಗಿ ಗ್ರಾಮದ ರಾಹುಲ್ ರಾಮನಗೌಡ ಬಿರಾದಾರಗೆ ತಲೆಗೆ ಭಾರೀ ಪೆಟ್ಟಾಗಿದ್ದು ಶೇ.80ರಷ್ಟು ಸುಟ್ಟ ಗಾಯಗಳಿಂದ ಜಿಲ್ಲಾಸ್ಪತ್ರೆಯ ಐಸಿಯುದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಪ್ರಿಯತಮೆ ಐಶ್ವರ್ಯ ಮದರಿ ಅವರ ಚಿಕ್ಕಪ್ಪ ಮುತ್ತು ಮದರಿ, ಚಿಕ್ಕಮ್ಮ ಸೀಮಾ ಮದರಿ, ಕೆಲಸಗಾರ ನೀಲಕಂಠ ಹರನಾಳ ಅವರಿಗೂ ಸುಟ್ಟ ಗಾಯಗಳಾಗಿವೆ.

ಇವರಲ್ಲಿ ಸೀಮಾ ಪ್ರಾಣಾಪಾಯದಿಂದ ಪಾರಾಗಿದ್ದು ಮುತ್ತು ಮತ್ತು ನೀಲಕಂಠ ಅವರ ಸ್ಥಿತಿ ಗಂಭಿರವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದಾರೆ.

ಘಟನೆ ಕುರಿತು ಎರಡೂ ಕಡೆಯವರಿಂದ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ದೂರು, ಪ್ರತಿ ದೂರು ದಾಖಲಾಗಿದೆ. ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಡಿಎಸ್ಪಿ ಬಾಳಪ್ಪ ನಂದಗಾಂವ, ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಪಿಎಸೈಗಳಾದ ಸಂಜಯ್ ತಿಪ್ಪರಡ್ಡಿ, ಎಸ್.ಆರ್.ನಾಯಕ ಅವರು ಭೇಟಿ ನೀಡಿ ತನಿಖೆ ಕೈಕೊಂಡಿದ್ದಾರೆ.

ವಿಜಯಪುರದಿಂದ ಆಗಮಿಸಿದ್ದ ವಿಶೇಷ ತಂಡ ಘಟನಾ ಸ್ಥಳದಲ್ಲಿನ ಬೆರಳಚ್ಚು ಸೇರಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಈ ಘಟನೆಯಲ್ಲಿ ಯಾರು ಪೆಟ್ರೋಲ್ ಎರಚಿ ಯಾರ ಹತ್ಯೆಗೆ ಯತ್ನಿಸಿದರು ಅನ್ನೋದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.

ಕಳೆದ 5-6 ವರ್ಷಗಳಂದ ಪರಸ್ಪರ ಪ್ರೇಮಿಸುತ್ತಿದ್ದ ಐಶ್ವರ್ಯಾ ಮತ್ತು ರಾಹುಲ್ ಅವರ ಪ್ರೇಮ ಸಂಬಂಧ ಕಳೆದ ವರ್ಷದಿಂದ ಐಶ್ವರ್ಯಾಳ ನಿರಾಕರಣೆ ಹಿನ್ನೆಲೆ ಸ್ಥಗಿತಗೊಂಡಿದ್ದರಿಂದ ರಾಹುಲ್ ಕುಪಿತಗೊಂಡಿದ್ದು ಈ ಘಟನೆಗೆ ಕಾರಣ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

1-asdsad

Agumbe ಘಾಟಿ; ಭಾರೀ ವಾಹನ ಸಂಚಾರ ನಿಷೇಧ: ಪರ್ಯಾಯ ಮಾರ್ಗ

rain 3

Red Alert; ನಾಳೆ ದಕ್ಷಿಣ ಕನ್ನಡದ ಶಾಲೆಗಳಿಗೆ, ಪಿಯು ಕಾಲೇಜುಗಳಿಗೆ ರಜೆ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

1-wqeqwewq

CM ಹುದ್ದೆ ಬಿಟ್ಟು ಕೊಡಲಿ; ಸ್ವಾಮೀಜಿ ಹೇಳಿಕೆ ಬಳಿಕ ಕಾಂಗ್ರೆಸ್ ನಲ್ಲಿ ಅಲ್ಲೋಲ ಕಲ್ಲೋಲ

Sengoal

Parliment: ಸೆಂಗೋಲ್‌ ತೆರವುಗೊಳಿಸಿ ಎಂದ ಎಸ್‌ಪಿ ಸಂಸದ; ಬಿಜೆಪಿ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

Kundapura: ಗೋಪಾಡಿ; ತಾಯಿಯ ಸಾವು ಸಹಜ ; ಮರಣೋತ್ತರ ಪರೀಕ್ಷೆ ವರದಿ

5

Parkala: ಚಾಲಕನಿಗೆ ಮೂರ್ಛೆ; ಹಿಮ್ಮುಖವಾಗಿ ಚಲಿಸಿದ ಬಸ್

1-saddas

Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

Udupi: ವಿಮಾ ಕಂಪೆನಿ ವಿರುದ್ಧ ಜಿಲ್ಲಾ ಗ್ರಾಹಕ ದೂರು ಪರಿಹಾರ ಆಯೋಗ ತೀರ್ಪು 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.