ತೈಲೋತ್ಪನ್ನ, ಎಲ್‌ಪಿಜಿ ಬೆಲೆ ಏರಿಕೆ: ತ್ವರಿತ ಕ್ರಮ ಅನಿವಾರ್ಯ


Team Udayavani, Mar 11, 2021, 7:10 AM IST

ತೈಲೋತ್ಪನ್ನ, ಎಲ್‌ಪಿಜಿ ಬೆಲೆ ಏರಿಕೆ: ತ್ವರಿತ ಕ್ರಮ ಅನಿವಾರ್ಯ

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಕೆಲವು ತಿಂಗಳಿಂದ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದ್ದು ಇದರ ನೇರ ಪರಿಣಾಮವನ್ನು ದೇಶದ ಜನರು ಎದುರಿಸುವಂತಾಗಿದೆ. ದೇಶದಲ್ಲಿ ತೈಲೋತ್ಪನ್ನಗಳು ಮತ್ತು ಎಲ್‌ಪಿಜಿ ಬೆಲೆ ಗರಿಷ್ಠ ಪ್ರಮಾಣದಲ್ಲಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ. ಹತ್ತು ದಿನಗಳಿಂದೀಚೆಗೆ ತೈಲ ಬೆಲೆ ಒಂದಿಷ್ಟು ಸ್ಥಿರತೆಯನ್ನು ಕಾಯ್ದುಕೊಂಡಿದೆಯಾದರೂ ಗರಿಷ್ಠ ಮಟ್ಟದಲ್ಲಿಯೇ ಇದೆ. ಆದರೂ ಕೇಂದ್ರ ಮತ್ತು ರಾಜ್ಯ ಸರಕಾರಗಳು ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ಸುಂಕ, ವ್ಯಾಟ್‌ ಅನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇನ್ನೂ ಮೀನಮೇಷ ಎಣಿಸುತ್ತಿರುವುದು ಜನರ ಆಕ್ರೋಶವನ್ನು ಹೆಚ್ಚಿಸುವಂತೆ ಮಾಡಿದೆ.

ಕಚ್ಚಾತೈಲಕ್ಕಾಗಿ ಭಾರತವು ಸೌದಿ ಅರೇಬಿಯಾ, ಇರಾಕ್‌, ಯುಎಇ, ನೈಜೀ ರಿಯಾ, ವೆನಿಜುವೆಲಾವನ್ನು ಅವಲಂಬಿಸಿದ್ದು ಅಮೆರಿಕದಿಂದಲೂ ಅಲ್ಪ ಪ್ರಮಾಣದಲ್ಲಿ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ತೈಲ ಆಮದು ರಾಷ್ಟ್ರಗಳ ಪೈಕಿ ವಿಶ್ವದಲ್ಲಿ 3ನೇ ಸ್ಥಾನದಲ್ಲಿರುವ ಭಾರತವು ಸೌದಿ ಅರೇಬಿಯಾದಿಂದ ಗರಿಷ್ಠ ಕಚ್ಚಾತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಸೌದಿ ಆದಿಯಾಗಿ ಒಪೆಕ್‌ ರಾಷ್ಟ್ರಗಳು ತೈಲೋತ್ಪಾದನೆಯನ್ನು ಹೆಚ್ಚಿಸುವ ಜತೆಯಲ್ಲಿ ಬೆಲೆಯಲ್ಲಿ ಕಡಿತ ಮಾಡಬೇಕೆಂದು ಭಾರತ ನಿರಂತರವಾಗಿ ಮನವಿ ಮಾಡಿಕೊಳ್ಳುತ್ತಲೇ ಬಂದಿದೆಯಾದರೂ ಅಲ್ಲಿನ ಸರಕಾರಗಳು ಸ್ಪಂದಿಸುತ್ತಿಲ್ಲ. ಒಪೆಕ್‌ ರಾಷ್ಟ್ರಗಳು ತೈಲೋತ್ಪಾದನೆ ಕಡಿಮೆ ಮಾಡಿರುವುದಲ್ಲದೆ ಬೆಲೆಯಲ್ಲಿಯೂ ಭಾರೀ ಏರಿಸಿವೆ. ಅಲ್ಲದೆ ಸೌದಿಯಲ್ಲಿನ ತೈಲ ಸಂಗ್ರಹಾಗಾರದ ಮೇಲೆ ಹೌತಿ ಬಂಡು ಕೋರರು ನಡೆಸಿದ ದಾಳಿಯಿಂದಾಗಿ ಕಳೆದೆರಡು ದಿನಗಳಲ್ಲಿ ಸೌದಿಯಲ್ಲಿ ತೈಲ ಬೆಲೆ ದಿಢೀರನೆ ಏರಿಕೆಯಾಗಿದೆ. ಇದು ಭಾರತದ ಪಾಲಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಅಡುಗೆ ಅನಿಲದ ಬೆಲೆ ಏಳು ವರ್ಷಗಳ ಅವಧಿಯಲ್ಲಿ ದುಪ್ಪಟ್ಟಾಗಿದೆಯಲ್ಲದೆ ಎಲ್‌ಪಿಜಿ ಸಿಲಿಂಡರ್‌ಗಳ ಮೇಲೆ ಸರಕಾರ ನೀಡುತ್ತಿದ್ದ ಸಬ್ಸಿಡಿಯನ್ನೂ ಸ್ಥಗಿತಗೊಳಿಸಿದ್ದು ಗ್ರಾಹಕರನ್ನು ಕಂಗೆಡುವಂತೆ ಮಾಡಿದೆ.

ಒಂದು ವರ್ಷದ ಅವಧಿಯಲ್ಲಿ ಒಟ್ಟಾರೆ ತೈಲ ಮಾರುಕಟ್ಟೆಯಲ್ಲಿನ ಬೆಳವಣಿಗೆಗಳನ್ನು ಗಮನಿಸಿರುವ ಸರಕಾರ ಕೊನೆಗೂ ಎಚ್ಚೆತ್ತು ಕಚ್ಚಾ ತೈಲಕ್ಕಾಗಿ ಮಧ್ಯಪ್ರಾಚ್ಯ ದೇಶಗಳ ಜತೆ ಪಾಶ್ಚಾತ್ಯ ದೇಶಗಳತ್ತಲೂ ಮುಖ ಮಾಡಲು ಚಿಂತನೆ ನಡೆಸಿದೆ. ಅಮೆರಿಕದಿಂದ ಆಮದು ಮಾಡಿಕೊಳ್ಳಲಾಗುತ್ತಿರುವ ತೈಲ ಪ್ರಮಾಣದಲ್ಲಿ ಹೆಚ್ಚಳ, ರಷ್ಯಾದೊಂದಿಗಿನ ಒಪ್ಪಂದದ ನವೀ ಕರಣ, ಕಚ್ಚಾ ತೈಲಕ್ಕಾಗಿ ಇರಾನ್‌ಗೆ ಮೊರೆ ಮಾತ್ರವಲ್ಲದೆ ಗಯಾನಾದಿಂದಲೂ ತೈಲವನ್ನು ಆಮದು ಮಾಡಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಚ್ಚಾತೈಲಕ್ಕಾಗಿ ಮಧ್ಯಪ್ರಾಚ್ಯದ ಸೌದಿ ಅರೇಬಿಯಾ ಮತ್ತು ಇರಾಕ್‌ ಮೇಲಣ ಅವಲಂಬನೆಯನ್ನು ಕೊಂಚ ತಗ್ಗಿಸುವುದು ಸರಕಾರದ ಸದ್ಯದ ಚಿಂತನೆ. ಇವೆಲ್ಲದರ ಜತೆಯಲ್ಲಿ ನವೀಕರಿಸಬಹುದಾದ ಮೂಲಗಳಿಂದ ಗರಿಷ್ಠ ಪ್ರಮಾಣದ ಇಂಧನವನ್ನು ಉತ್ಪಾದಿಸಲು ಸರಕಾರ ಯೋಜನೆ ಹಾಕಿಕೊಂಡಿದೆ. ಇವೆಲ್ಲವೂ ದೂರದೃಷ್ಟಿಯ ಮತ್ತು ದೂರಗಾಮಿ ಪರಿಣಾಮದ ಯೋಜನೆಗಳಾಗಿರುವುದರಿಂದ ಇವು ಸದ್ಯ ತೈಲ ಬೆಲೆ ಏರಿಕೆ ಯಿಂದ ಕಂಗಾಲಾಗಿರುವ ಗ್ರಾಹಕರ ಮೇಲಿನ ಹೊರೆಯನ್ನು ಕಡಿಮೆ ಮಾಡಲು ಪೂರಕವಾಗಲಾರವು. ಈ ದಿಸೆಯಲ್ಲಿ ಸರಕಾರ ಶೀಘ್ರ ಕಾರ್ಯೋನ್ಮುಖವಾಗಿ ತೈಲೋತ್ಪನ್ನಗಳ ಬೆಲೆಯನ್ನು ನಿಯಂತ್ರಣದಲ್ಲಿಡಲು ತುರ್ತು ಕ್ರಮ ಕೈಗೊಳ್ಳುವುದು ಅನಿವಾ ರ್ಯವಾಗಿದೆ. ಇಲ್ಲವಾದಲ್ಲಿ ಅಗತ್ಯ ವಸ್ತುಗಳ ಧಾರಣೆಯೂ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿ ಹಣದುಬ್ಬರ ಮತ್ತಷ್ಟು ಹೆಚ್ಚಿ ದೇಶದ ಇಡೀ ಆರ್ಥಿಕ ವ್ಯವಸ್ಥೆಯ ಮೇಲೆ ಪರಿಣಾಮ ಬೀರಲಿರುವುದಂತೂ ನಿಶ್ಚಿತ.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.