Malaysia Master Super 500: ಪ್ರಶಸ್ತಿ ಜಯಿಸಿದ ಎಚ್‌.ಎಸ್‌. ಪ್ರಣಯ್‌


Team Udayavani, May 29, 2023, 7:03 AM IST

PRANAY 1

ಕೌಲಾಲಂಪುರ: ಭಾರತದ ಎಚ್‌.ಎಸ್‌. ಪ್ರಣಯ್‌ ಚೊಚ್ಚಲ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್‌ ಪ್ರಶಸ್ತಿಯೊಂದಿಗೆ ಸಂಭ್ರಮಿಸಿ ದ್ದಾರೆ. ಕೌಲಾಲಂಪುರದಲ್ಲಿ ನಡೆದ “ಮಲೇಷ್ಯಾ ಮಾಸ್ಟರ್ ಸೂಪರ್‌ 500” ಪಂದ್ಯಾವಳಿಯ ಪುರುಷರ ಸಿಂಗಲ್ಸ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಇದರೊಂದಿಗೆ ಅವರ 6 ವರ್ಷಗಳ ಪ್ರಶಸ್ತಿ ಬರ ನೀಗಿದೆ. ಹಾಗೆಯೇ ಭಾರತಕ್ಕೆ ವರ್ಷದ ಮೊದಲ ಬ್ಯಾಡ್ಮಿಂ ಟನ್‌ ಸಿಂಗಲ್ಸ್‌ ಪ್ರಶಸ್ತಿ ಒಲಿದಿದೆ.

ರವಿವಾರ ನಡೆದ ಜಿದ್ದಾಜಿದ್ದಿ ಫೈನಲ್‌ನಲ್ಲಿ 30 ವರ್ಷದ ಎಚ್‌.ಎಸ್‌. ಪ್ರಣಯ್‌ 21-19, 13-21, 21-18ರಿಂದ ಚೀನದ ವೆಂಗ್‌ ಹಾಂಗ್‌ ಯಾಂಗ್‌ ಅವರನ್ನು ಮಣಿಸಿದರು. ಬರೋಬ್ಬರಿ 94 ನಿಮಿಷಗಳ ಕಾಲ ಇವರ ಹೋರಾಟ ಸಾಗಿತು. ವೆಂಗ್‌ ಹಾಂಗ್‌ ಯಾಂಗ್‌ 34ನೇ ರ್‍ಯಾಂಕಿಂಗ್‌ ಆಟಗಾರನಾಗಿದ್ದು, 2022ರ ಏಷ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು.

ಕಳೆದ ವರ್ಷ ಭಾರತದ ಐತಿಹಾಸಿಕ “ಥಾಮಸ್‌ ಕಪ್‌’ ಜಯಭೇರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಣಯ್‌, ಸಿಂಗಲ್ಸ್‌ ಸಾಧನೆಯಲ್ಲಿ ಬಹಳ ಹಿಂದುಳಿದಿದ್ದರು. 2017ರ ಯುಎಸ್‌ ಓಪನ್‌ ಗ್ರ್ಯಾನ್‌ಪ್ರಿ ಚಿನ್ನದ ಪದಕ ಗೆದ್ದ ಬಳಿಕ ಪ್ರಶಸ್ತಿಯ ಬರಗಾಲದಲ್ಲಿದ್ದರು. ಕಳೆದ ವರ್ಷ ಸ್ವಿಸ್‌ ಓಪನ್‌ ಫೈನಲ್‌ ಪ್ರವೇಶಿಸಿದರೂ ಪ್ರಶಸ್ತಿ ಮರೀಚಿಕೆಯೇ ಆಗುಳಿದಿತ್ತು. ಬಳಿಕ ಮಲೇಷ್ಯಾ ಮತ್ತು ಸಿಂಗಾಪುರ್‌-1000 ಕೂಟದ ಸೆಮಿಫೈನಲ್‌ನಲ್ಲೇ ಮುಗ್ಗರಿಸಿದರು.

ಪ್ರಬಲ ಸವಾಲು
ಕೇರಳದವರಾದ, ವಿಶ್ವ ರ್‍ಯಾಂಕಿಂಗ್‌ನಲ್ಲಿ 9ನೇ ಸ್ಥಾನದಲ್ಲಿರುವ ಪ್ರಣಯ್‌ಗೆ ಚೀನದ 23 ವರ್ಷದ ಶಟ್ಲರ್‌ ಪ್ರಬಲ ಸವಾಲೊಡ್ಡಿದರು. ಪ್ರಣಯ್‌ ಕೇವಲ 2 ಅಂಕಗಳ ಅಂತರದಲ್ಲಿ ಮೊದಲ ಗೇಮ್‌ ವಶಪಡಿಸಿಕೊಂಡರು. ದ್ವಿತೀಯ ಗೇಮ್‌ನಲ್ಲಿ ತಿರುಗಿ ಬಿದ್ದ ವೆಂಗ್‌ ಹಾಂಗ್‌ ಯಾಂಗ್‌ 21-13ರಿಂದ ಗೆದ್ದು ಸಮಬಲ ಸಾಧಿಸಿದರು. ನಿರ್ಣಾಯಕ ಗೇಮ್‌ ಮತ್ತೆ ಬಿರುಸಿನಿಂದ ಸಾಗಿತು. ಅದೃಷ್ಟ ಭಾರತೀಯನ ಕೈ ಹಿಡಿಯಿತು.

ಪ್ರಶಸ್ತಿಯ ಹಾದಿಯಲ್ಲಿ ಎಚ್‌.ಎಸ್‌. ಪ್ರಣಯ್‌ ವಿಶ್ವದ 5ನೇ ರ್‍ಯಾಂಕಿಂಗ್‌ ಆಟಗಾರ ಚೌ ತೀನ್‌ ಚೆನ್‌, ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ ಲೀ ಶಿ ಫೆಂಗ್‌ ಹಾಗೂ ಜಪಾನ್‌ನ ಪ್ರಬಲ ಆಟಗಾರ ಕೆಂಟ ನಿಶಿಮೊಟೊ ಅವರನ್ನು ಸೋಲಿಸಿದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.