ನೆಲೆ ಕಲ್ಪಿಸಿ ಅಥವಾ ದಯಾಮರಣ ನೀಡಿ : ಮಲೆಮನೆ ನಿರಾಶ್ರಿತರ ಮನವಿ


Team Udayavani, Apr 7, 2022, 12:50 PM IST

1-asdsad

ಮಲೆಮನೆಯಲ್ಲಿ 2019 ರ ಮಹಾಮಳೆಗೆ ಕೊಚ್ಚಿ ಹೋದ ಮನೆ ಇದ್ದ ಜಾಗದಲ್ಲಿ ಗಿಡಗಂಟಿಗಳು ಬೆಳೆದಿರುವುದು.

ಕೊಟ್ಟಿಗೆಹಾರ:2019ರ ಮಹಾಮಳೆಗೆ ಮನೆ, ಜಮೀನು ಕಳೆದುಕೊಂಡ ಜಾವಳಿ ಗ್ರಾ.ಪಂ ವ್ಯಾಪ್ತಿಯ ಮಲೆಮನೆಯ ನೆರೆ ನಿರಾಶ್ರಿತರ ಬದುಕು ಇನ್ನೂ ನೆಲೆ ಕಂಡುಕೊಂಡಿಲ್ಲ.

2019ರ ಆಗಸ್ಟ್‌ ತಿಂಗಳಲ್ಲಿ ಸುರಿದ ಮಹಾಮಳೆಗೆ ಮಲೆಮನೆ ಗ್ರಾಮದ 5 ಕುಟುಂಬಗಳ ಮನೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದು ಈ ಗ್ರಾಮದಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಿಲ್ಲದಿರುವುದರಿಂದ ಸರ್ಕಾರ ಮನೆ ಕಟ್ಟಲು ಜಾಗ ಮತ್ತು ಕೃಷಿ ಭೂಮಿಯನ್ನು ಪರ್ಯಾಯವಾಗಿ ನೀಡುವುದಾಗಿ ತಿಳಿಸಿತ್ತು. ಆದರೆ ಈವರೆಗೆ ಸರ್ಕಾರ ನೆರೆ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಿಲ್ಲ. ಪುನರ್ವಸತಿ ಕಲ್ಪಿಸುವವರೆಗೆ ಬಾಡಿಗೆ ಮನೆಯಲ್ಲಿರುವಂತೆ ಮತ್ತು ಬಾಡಿಗೆ ಹಣ ನೀಡುವಂತೆ ತಿಳಿಸಿದ್ದ ಸರ್ಕಾರ ಪ್ರಾರಂಭದ 5 ತಿಂಗಳು ಮಾತ್ರ ಬಾಡಿಗೆ ಹಣ ನೀಡಿದ್ದು ಮತ್ತೆ  ಹಣವನ್ನು ನೀಡಿಲ್ಲ.

ಸರ್ಕಾರ ಪರ್ಯಾಯ ಜಾಗ ಗುರುತಿಸದ ಕಾರಣ ಪರ್ಯಾಯ ಜಾಗಕ್ಕೂ ಹೋಗಲಾಗದೇ ಬಾಡಿಗೆ ಮನೆಯಲ್ಲೂ ಇರಲಾಗದೇ ಅತಂತ್ರ ಸ್ಥಿತಿಯಲ್ಲಿ ಇಲ್ಲಿನ ನೆರೆ ಸಂತ್ರಸ್ತ ಕುಟುಂಬಗಳಿವೆ. ಪರ್ಯಾಯ ಜಾಗವನ್ನು ನೆರೆ ಸಂತ್ರಸ್ತ ಕುಟುಂಬಗಳಿಗೆ ನೀಡಲು ತಾಲ್ಲೂಕಿನ ಹಲವೆಡೆ ಜಾಗ ಗುರುತಿಸಿದ್ದು ಈ ಜಾಗ ಅರಣ್ಯ ಇಲಾಖೆಯದ್ದೋ ಅಥವಾ ಕಂದಾಯ ಇಲಾಖೆಗೆ ಸೇರಿದ್ದೋ ಎಂಬ ಗೊಂದಲದಿಂದ ಪುನರ್ವಸತಿ ನಿಂತ ನೀರಾಗಿದೆ.

ನಿರಾಶ್ರಿತರಿಂದ ದಯಾಮರಣ ಕೋರಲು ನಿರ್ಧಾರ
2019ರ ಮಹಾಮಳೆಗೆ ಮನೆ ಕಳೆದುಕೊಂಡ ಮಲೆಮನೆಯ ನೆರೆ ಸಂತ್ರಸ್ತರಾದ ಸತೀಶ್‌, ಅಶ್ವತ್ಥ್, ರಾಜು, ಚಂದ್ರೇಗೌಡ, ರಾಜೇಶ್‌ ಅವರ ಕುಟುಂಬಗಳು ಇಂದಿಗೂ ಕೂಡ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಮನೆ ಕೊಚ್ಚಿ ಹೋದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸೇರಿದಂತೆ ರಾಜ್ಯದ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳು ಅಧಿಕಾರಿಗಳು ಮಲೆಮನೆ ಗ್ರಾಮಕ್ಕೆ ಆಗಮಿಸಿದರೂ ಕೂಡ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದೇ ಇರುವುದು ನೆರೆ ಸಂತ್ರಸ್ತರ ನಿರೀಕ್ಷೆಯನ್ನು ಹುಸಿಗೊಳಿಸಿದೆ. ಕೇವಲ ಭರವಸೆಗೆ ಸೀಮಿತವಾದ ಪುನರ್ವಸತಿಯಿಂದಾಗಿ ಮಲೆಮನೆಯ ನೆರೆ ಸಂತ್ರಸ್ತರು ರಾಷ್ಟ್ರಪತಿಗಳಿಗೆ ದಯಾಮರಣಕೋರಿ ಅರ್ಜಿ ಸಲ್ಲಿಸಲು ನಿರ್ಧರಿಸಿದ್ದಾರೆ.

”2019 ರಲ್ಲಿ ನೆರೆಯಲ್ಲಿ ಮನೆ, ಜಮೀನು ಕಳೆದುಕೊಂಡು ಬಾಡಿಗೆ ಮನೆಯಲ್ಲಿದ್ದೇವೆ. ಸರ್ಕಾರ ಬಾಡಿಗೆ ಹಣವನ್ನು ನೀಡುತ್ತಿಲ್ಲ. ಪರ್ಯಾಯ ಜಾಗವನ್ನು ನೀಡುತ್ತಿಲ್ಲ. ಸರ್ಕಾರ ಪರ್ಯಾಯ ಜಾಗ ನೀಡದೇ ಇದ್ದರೆ ಮಲೆಮನೆಯ ನೆರೆ ಸಂತ್ರಸ್ತರು ರಾಷ್ಟ್ರಪತಿಗಳಿಗೆ ದಯಾಮರಣ ಕೋರಿ ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ”
ಅಶ್ವತ್ಥ್ ಜಾವಳಿ. ನೆರೆ ಸಂತ್ರಸ್ತ, ಮಲೆಮನೆ

ಸಂತೋಷ್‌ ಅತ್ತಿಗೆರೆ

ಟಾಪ್ ನ್ಯೂಸ್

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

By Election: Announcement of By-Election for the Dakshina Kannada Local Bodies Constituency

By Election: ದ. ಕನ್ನಡ ಸ್ಥಳೀಯ ಸಂಸ್ಥೆಗಳ ಪರಿಷತ್ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

Job Opportunities:ಪಂಜಾಬ್‌ and ಸಿಂಧ್‌ ಬ್ಯಾಂಕ್‌-213 ಆಫೀಸರ್‌ ಹುದ್ದೆಗೆ ಅರ್ಜಿ ಆಹ್ವಾನ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-chikkamagaluru

ಗಣಪತಿ ವಿಸರ್ಜನೆ ವೇಳೆ ಕುಣಿಯುವ ವಿಚಾರಕ್ಕೆ ಗಲಾಟೆ; ಯುವಕನಿಗೆ ಬ್ಲೇಡ್ ನಿಂದ ಹಲ್ಲೆ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ

CT Ravi ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ

ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್‌ ರೈಡ್:‌ ವಿಡಿಯೋ ವೈರಲ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

1-wewqe

Contractors Association ಅಧ್ಯಕ್ಷ ಕೆಂಪಣ್ಣ ವಿಧಿವಶ; ಗಣ್ಯರ ಸಂತಾಪ

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Kolar: ಹಕ್ಕಿಪಿಕ್ಕಿ ಕಾಲೋನಿ ಮಕ್ಕಳಿಗೆ ಅಕ್ಕಿ,ಮೊಟ್ಟೆ ಕೊಟ್ಟಿಲ್ಲ!

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.