![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 13, 2022, 1:46 PM IST
ಕೊಲ್ಕತಾ : ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿದರವನ್ನು ನಾಲ್ಕು ದಶಕದ ಕನಿಷ್ಠ ಮಟ್ಟಕ್ಕೆ ಇಳಿಸಿದ ಒಂದು ದಿನದ ನಂತರ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಕೇಂದ್ರ ಸರಕಾರದ ವಿರುದ್ಧ ಕಿಡಿ ಕಾರಿ ‘ಜನ ವಿರೋಧಿ ಮತ್ತು ಕಾರ್ಮಿಕ ವಿರೋಧಿ ಹೆಜ್ಜೆ’ ಎಂದು ಕರೆದಿದ್ದಾರೆ.
ಯುಪಿಯಲ್ಲಿ ಭರ್ಜರಿ ಗೆಲುವಿನ ನಂತರ, ಬಿಜೆಪಿ ಸರ್ಕಾರವು ತನ್ನ ಉಡುಗೊರೆಯನ್ನು ತತ್ ಕ್ಷಣವೇ ಹೊರತಂದಿದೆ! ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ನಾಲ್ಕು ದಶಕಗಳ ಕನಿಷ್ಠ ಮಟ್ಟಕ್ಕೆ ಇಳಿಸಲು ಪ್ರಸ್ತಾಪಿಸುವ ಮೂಲಕ ಅದು ಒಮ್ಮೆಗೇ ತನ್ನ ಮುಖವಾಡವನ್ನು ಬಿಚ್ಚಿಡುತ್ತಿದೆ ಎಂದು ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.
ರೈತರು, ಕಾರ್ಮಿಕರು ಮತ್ತು ಮಧ್ಯಮ ವರ್ಗಗಳ ವೆಚ್ಚದಲ್ಲಿ ದೊಡ್ಡ ಬಂಡವಾಳದ ಹಿತಾಸಕ್ತಿಗಳನ್ನು ಪ್ರತಿಪಾದಿಸುವ ಪ್ರಸ್ತುತ ಕೇಂದ್ರ ಸರಕಾರದ ಜನವಿರೋಧಿ, ಕಾರ್ಮಿಕ ವಿರೋಧಿ ಹೆಜ್ಜೆಯನ್ನು ಇದು ಬಹಿರಂಗಪಡಿಸುತ್ತದೆ. ಒಗ್ಗಟ್ಟಿನ ಪ್ರತಿಭಟನೆಗಳ ಮೂಲಕ ಕರಾಳ ಉಪಕ್ರಮವನ್ನು ವಿಫಲಗೊಳಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಇಪಿಎಫ್ ಒನ ಕೇಂದ್ರ ಮಂಡಳಿಯ ಟ್ರಸ್ಟಿಗಳ ಸಭೆಯಲ್ಲಿ 2021-22ನೇ ಆರ್ಥಿಕ ವರ್ಷದಲ್ಲಿ ಭವಿಷ್ಯ ನಿಧಿ ಠೇವಣಿ ಮೇಲಿನ ಬಡ್ಡಿದರವನ್ನು ಶೇ.8.1ಕ್ಕೆ ಇಳಿಸಲು ನಿರ್ಧಾರ ಕೈಗೊಂಡಿತ್ತು.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.