ಮಂಗಳೂರು: ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನ ಪತ್ತೆ!; ತನಿಖೆಗೆ ಆಗ್ರಹ
ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನ ಪತ್ತೆಯಾಗಿದೆ.
Team Udayavani, Apr 21, 2022, 7:18 PM IST
ಮಂಗಳೂರು: ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮದ ಮಸೀದಿ ಕಟ್ಟಡದಲ್ಲಿ ಪ್ರಾಚೀನ ದೇವಸ್ಥಾನದ ಕುರುಹುಗಳು ಪತ್ತೆಯಾಗಿದ್ದು, ಮಸೀದಿ ಪರವಾನಿಗೆ ರದ್ದುಗೊಳಿಸಿ ಮತ್ತು ಪುರಾತತ್ವ ಇಲಾಖೆಯಿಂದ ತನಿಖೆ ನಡೆಸಲು ಆದೇಶಿಸಲು ಆಗ್ರಹ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.
ಮಂಗಳೂರು ತಾಲೂಕಿನ ಗುರುಪುರ ಹೋಬಳಿಯ ತೆಂಕ ಉಳಿಪಾಡಿ ಗ್ರಾಮ, ಗಂಜಿಮಠ ಪಂಚಾಯಿತಿಯಲ್ಲಿರುವ ಅಸ್ಸಾಯಿದ್ ಅಬ್ದುಲ್ಲಾಹಿಲ್ ಮದನಿ ಜುಮಾ ಮಸೀದಿ ಕಟ್ಟಡ ನವೀಕರಣ ಸಂದರ್ಭದಲ್ಲಿ ಮಸೀದಿ ಅರ್ಧ ಕಟ್ಟಡ ಕೆಡವಿದಾಗ ಪುರಾತನ ದೇವಸ್ಥಾನ ಪತ್ತೆಯಾಗಿದೆ.
ಮೇಲ್ನೋಟಕ್ಕೆ ನೋಡಿದಾಗ ಪುರಾತನ ದೇವಸ್ಥಾನವನ್ನು ಕೆಡವಿ ಮಸೀದಿ ಕಟ್ಟಡ ಕಟ್ಟಿರುವುದು ಕಂಡುಬರುತ್ತದೆ. ಕಟ್ಟಡದ ಒಳಗೆ ಮತ್ತು ಹೊರಗಡೆ ನೋಡುವಾಗ ಪ್ರಾಚೀನ ದೇವಸ್ಥಾನದ ಕಟ್ಟಡದ ಶೈಲಿಯಲ್ಲಿ ಕಂಡು ಬರುತ್ತಿದೆ ಆದುದರಿಂದ ಗಂಜಿಮಠ ಗ್ರಾಮಪಂಚಾಯತಿ ನೀಡಿದ ಕಟ್ಟಡ ಪರವಾನಿಗೆ ನಂ 11/2021/22 ರ ಪ್ರಕಾರ ನೀಡಿರುವ ಮಸೀದಿ ನವೀಕರಣದ ಅನುಮತಿಯನ್ನು ರದ್ದುಗೊಳಿಸಿ ಇದನ್ನು ಪರಿಶೀಲಿಸಿ ಪುರಾತತ್ವ ಇಲಾಖೆಗೆ ತನಿಖೆ ನಡೆಸಲು ಆದೇಶಿಸಬೇಕು ಮತ್ತು ಆ ಸ್ಥಳದಲ್ಲಿರುವ ಕಟ್ಟಡವನ್ನು ಯಥಾಸ್ಥಿತಿಯಲ್ಲಿರುವಂತೆ ಕಾಪಾಡಿಕೊಳ್ಳಲು ಕ್ರಮಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ, ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ಮತ್ತು ತಹಶೀಲ್ದಾರ್ ಅವರಿಗೆ ಮನವಿ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.