![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 13, 2023, 12:58 PM IST
ನವದೆಹಲಿ: ಭಾರತದ ಅತೀ ದೊಡ್ಡ ಐಟಿ ಕಂಪನಿಗಳಲ್ಲಿ ಒಂದಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ಕಂಪನಿ ಅನಿರೀಕ್ಷಿತ ಬೆಳವಣಿಗೆಗೆ ಸಾಕ್ಷಿಯಾಗಿದೆ. ಜಗತ್ತಿನಾದ್ಯಂತ ಕೋವಿಡ್ 19 ಸೋಂಕು ತಲೆದೋರಿದ ಮೂರು ವರ್ಷಗಳ ಬಳಿಕ ಟಿಸಿಎಸ್ ವರ್ಕ್ ಫ್ರಂ ಹೋಮ್ ಅನ್ನು ರದ್ದುಗೊಳಿಸಿದ್ದು, ಇದರ ಪರಿಣಾಮ ಮಹಿಳಾ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿರುವ ಘಟನೆ ಹೆಚ್ಚಳವಾಗಿದೆ.
ಇದನ್ನೂ ಓದಿ:Dalal Street: ಬಾಂಬೆ ಷೇರುಪೇಟೆ- ಎಂಆರ್ ಎಫ್ ಭಾರತದ ಅತೀ ದುಬಾರಿ ಷೇರು…
ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಯಾವುದೇ ಲಿಂಗತಾರತಮ್ಯವಿಲ್ಲದೇ ಕಂಪನಿಯಲ್ಲಿ ಮಹಿಳೆಯರಿಗೆ ಹಲವಾರು ಉದ್ಯೋಗಾವಕಾಶಗಳನ್ನು ಕಲ್ಪಿಸಿದೆ. ಏತನ್ಮಧ್ಯೆ ವರ್ಕ್ ಫ್ರಂ ಹೋಮ್ (WFH) ನಿಯಮವನ್ನು ರದ್ದುಗೊಳಿಸಿದ್ದರಿಂದ ಮಹಿಳಾ ಉದ್ಯೋಗಿಗಳು ಹೆಚ್ಚಿನ ಪ್ರಮಾಣದಲ್ಲಿ ರಾಜೀನಾಮೆ ಕೊಡಲು ಕಾರಣವಾಗಿದೆ ಎಂದು ಕಂಪನಿ ತಿಳಿಸಿದೆ.
ಟಿಸಿಎಸ್ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಮಿಲಿಂದ್ ಲಕ್ಕಡ್ ಅವರ ಮಾಹಿತಿ ಪ್ರಕಾರ, ವರ್ಕ್ ಫ್ರಂ ಹೋಮ್ ಅವಕಾಶವನ್ನು ನಿಲ್ಲಿಸಿದ ನಂತರ ಮಹಿಳಾ ಉದ್ಯೋಗಿಗಳು ಸಾಮೂಹಿಕ ರಾಜೀನಾಮೆ ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸಾಮಾನ್ಯವಾಗಿ ಟಿಸಿಎಸ್ ನಲ್ಲಿ ರಾಜೀನಾಮೆ ವಿಚಾರದಲ್ಲಿ ಮಹಿಳೆಯರಿಗಿಂತ ಪುರುಷರ ಸಂಖ್ಯೆ ಹೆಚ್ಚು, ಆದರೆ ಇದೀಗ ಪುರುಷರನ್ನು ಮೀರಿ ಮಹಿಳೆಯರೇ ಅತ್ಯಧಿಕ ಸಂಖ್ಯೆಯಲ್ಲಿ ಕಂಪನಿಗೆ ರಾಜೀನಾಮೆ ನೀಡಿರುವುದಾಗಿ ಮಿಲಿಂದ್ ವಿವರಿಸಿದ್ದಾರೆ.
ಟಿಸಿಎಸ್ ನಲ್ಲಿ 6,00,000 ಲಕ್ಷಕ್ಕೂ ಅಧಿಕ ಜನರು ಉದ್ಯೋಗಿಗಳಿದ್ದಾರೆ. ಇದರಲ್ಲಿ ಶೇ.35ರಷ್ಟು ಮಹಿಳೆಯರು. 2023ರ ಆರ್ಥಿಕ ವರ್ಷದಲ್ಲಿ ಕಂಪನಿಯಲ್ಲಿ ಶೇ.38ರಷ್ಟು ಮಹಿಳಾ ಉದ್ಯೋಗಿಗಳಿದ್ದಾರೆ. ಇದರಲ್ಲಿ ಶೇ.3ರಷ್ಟು ಉನ್ನತ ಹುದ್ದೆಯಲ್ಲಿದ್ದಾರೆ. ಕಳೆದ ವರ್ಷ ಟಿಸಿಎಸ್ ಶೇ.20ರಷ್ಟು ಮಹಿಳಾ ಉದ್ಯೋಗಿಗಳನ್ನು ಕಳೆದುಕೊಂಡಿದೆ ಎಂದು ವಿವರಿಸಿದೆ.
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
Less Burden: ಆರ್ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.