Bangladesh: ಶೇಖ್ ಹಸೀನಾ ರಾಜೀನಾಮೆ ಬಳಿಕ 500ಕ್ಕೂ ಅಧಿಕ ಕೈದಿಗಳು ಜೈಲಿನಿಂದ ಪರಾರಿ!
ಭಾರತ ಗಡಿ ಭಾಗದಲ್ಲಿ ಬಿಗು ಭದ್ರತೆಯನ್ನು ಕೈಗೊಂಡಿದೆ.
Team Udayavani, Aug 6, 2024, 12:43 PM IST
ಢಾಕಾ: ತೀವ್ರ ಹಿಂಸಾಚಾರದ ನಡುವೆ ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ ನಂತರ ಶೇರ್ಪುರ್ ಜೈಲಿನಿಂದ ಭಾರೀ ಪ್ರಮಾಣದಲ್ಲಿ ಕೈದಿಗಳು ಪರಾರಿಯಾಗಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ.
ಸೋಮವಾರ (ಆಗಸ್ಟ್ 05) ಮಧ್ಯಾಹ್ನ ಈ ಘಟನೆ ನಡೆದಿದ್ದು, ಕನಿಷ್ಠ 518 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಜೀ ನ್ಯೂಸ್ ವರದಿ ಪ್ರಕಾರ, ಹಲವರು ಶಸ್ತ್ರಸ್ತ್ರಾ ಸಹಿತ ಎಸ್ಕೇಪ್ ಆಗಿರುವುದಾಗಿ ವಿವರಿಸಿದೆ.
ಭಾರತ-ಬಾಂಗ್ಲಾದೇಶ ಗಡಿಯಿಂದ ಸುಮಾರು 100 ಕಿಲೋ ಮೀಟರ್ ದೂರದಲ್ಲಿರುವ ಶೇರ್ಪುರ್ ಸೆಂಟ್ರಲ್ ಜೈಲಿನಿಂದ ಕೈದಿಗಳು ಪರಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಭಾರತ ಗಡಿ ಭಾಗದಲ್ಲಿ ಬಿಗು ಭದ್ರತೆಯನ್ನು ಕೈಗೊಂಡಿದೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಗಡಿಯಲ್ಲಿ ಗಡಿ ಭದ್ರತಾ ಪಡೆ(BSF)ಯನ್ನು ಹೆಚ್ಚಿಸಲಾಗಿದೆ. ಪರಾರಿಯಾದ ಕೈದಿಗಳಲ್ಲಿ 20 ಮಂದಿ ಭಯೋತ್ಪಾದಕ ಸಂಘಟನೆಗೆ ಸೇರಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:Sagara: ಭಟ್ಕಳ ದಿಂದ ಬೆಂಗಳೂರಿಗೆ ಹೊರಟಿದ್ದ ಸಾರಿಗೆ ಬಸ್ ಬೆಂಕಿಗಾಹುತಿ… ತಪ್ಪಿದ ದುರಂತ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.