![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 9, 2021, 6:17 PM IST
ಮೈಸೂರು : ಕೇವಲ ಪರಿಶಿಷ್ಟ ಪಂಗಡದವರು ಮಾತ್ರ ದಲಿತರಲ್ಲ,ತುಳಿತಕ್ಕೊಳಗಾದ ಎಲ್ಲರೂ ದಲಿತರೇ;ನಾನು ಸಹ ತುಳಿತಕ್ಕೆ ಒಳಗಾಗಿದ್ದೇನೆ. ಹಾಗಾಗಿ ನಾನು ಕೂಡ ದಲಿತನೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿಕೆ ನೀಡಿದ್ದಾರೆ.
ಹಿನಕಲ್ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ,’ತಳ ಸಮುದಾಯ ಜನ ಜಾಗೃತರಾಗದಿದ್ದರೆ ಬದಲಾವಣೆ ಕಷ್ಟ.ನನಗೆ ಐದು ವರ್ಷ ಸಿಎಂ ಆಗುವ ಅವಕಾಶ ಸಿಕ್ಕಿತ್ತು.ಅಧಿಕಾರಕ್ಕೆ ಬಂದ ಕೂಡಲೇ ಎಸ್ಸಿಪಿ, ಟಿಎಸ್ಪಿ ಅನುಧಾನ ಮೀಸಲಿಟ್ಟೆ.ನಾನು ಅಧಿಕಾರಕ್ಕೆ ಬರುವ ಮುನ್ನ ಯಾವ ಸರ್ಕಾರಗಳು ಜನಸಂಖ್ಯೆಗನುಗುಣವಾಗಿ ಹಣ ಮೀಸಲಿಟ್ಟಿರಲಿಲ್ಲ.
ಮೊದಲ ಬಾರಿಗೆ ಕರ್ನಾಟಕದಲ್ಲಿ ಕಾನೂನು ರೂಪಿಸಿದೆ. ಇಂದಿಗೂ ದೇಶದಲ್ಲಿ ಈ ಕಾನೂನನ್ನ ತಂದಿಲ್ಲ.ಫಾರ್ ದಿ ಫಸ್ಟ್ ಟೈಮ್ ಇನ್ ದಿ ಹಿಸ್ಟರಿ ಆಫ್ ಕರ್ನಾಟಕ. ಸಿಎಂ ಆದ ಒಂದು ಘಂಟೆಯೊಳಗೆ ಅಂಬೇಡ್ಕರ್, ವಾಲ್ಮೀಕಿ, ಅರಸು ಅಭಿವೃದ್ಧಿ ನಿಗಮಗಳ ಸಾಲವನ್ನ ಬಡ್ಡಿ ಸಮೇತ ಮನ್ನಾ ಮಾಡಿದೆ’ ಎಂದರು.
ವೇದಿಯ ಮೇಲೆ ದಲಿತ ಸಿಎಂ ಕೂಗು
ದಲಿತ ಸಿಎಂ ಬಗ್ಗೆ ಭಾಷಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪ ಮಾಡಿ , ‘ಹೊಟ್ಟೆಪಾಡಿಗೆ ದಲಿತರು ಬಿಜೆಪಿ ಸೇರುತ್ತಾರೆ ಎಂದು ನನ್ನ ಭಾಷಣವನ್ನ ತಿರುಚಿದರು, ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ದಲಿತರು ಸಿಎಂ ಆದರೆ ನನ್ನದು ಏನೂ ತಕರಾರು ಇಲ್ಲ.ಕಾಂಗ್ರೆಸ್ ನಲ್ಲಿ ಯಾರು ಸಿಎಂ ಆಗಬೇಕು ಅನ್ನೋದನ್ನ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಶಾಸಕರು ಸೂಚಿಸಿದವರನ್ನ ಹೈಕಮಾಂಡ್ ಮುಖ್ಯಮಂತ್ರಿ ಅಂತಾ ಸೂಚಿಸುತ್ತಾರೆ. ಒಂದು ವೇಳೆ ದಲಿತರು ಸಿಎಂ ಆದರೆ ನಾನು ಸ್ವಾಗತ ಮಾಡುತ್ತೇನೆ. ಕಾಂಗ್ರೆಸ್ ಪಕ್ಷ ಮೂರ್ನಾಲ್ಕು ರಾಜ್ಯಗಳಲ್ಲಿ ದಲಿತ ಸಿಎಂ ಮಾಡಿದೆ’ ಎಂದರು.
ಸೋಲಿನ ಬಗ್ಗೆ ವ್ಯಾಖ್ಯಾನ
ಕೇರ್ಗಳ್ಳಿ ಹೊಂಬಾಳಮ್ಮ ಸಿದ್ದರಾಮೇಶ್ವರ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಬಗ್ಗೆ ವ್ಯಾಖ್ಯಾನ ಮಾಡಿದರು.
‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ಕ್ಷೇತ್ರಕ್ಕೆ ಬರುವುದಕ್ಕೆ ತುಂಬಾ ಬೇಸರ ಆಗಿತ್ತು.ಹಲವು ದಿನಗಳ ಬಳಿಕ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಿದ್ದೇನೆ. ಚುನಾವಣೆಯಲ್ಲಿ ನಾನು ಜಿಟಿ ದೇವೇಗೌಡ ಪರಸ್ಪರ ಎದುರಾಗಿದ್ದೆವು. ಚುನಾವಣೆಯಲ್ಲಿ ನನ್ನನ್ನೇ ಸೋಲಿಸಿದ್ದ ಗಿರಾಕಿ. ಸೋತ ಬಳಿಕ ಇಬ್ಬರೂ ಒಂದೇ ವೇದಿಕೆಯಲ್ಲಿ ಕುಳಿತುಕೊಳ್ಳುವ ಬಗ್ಗೆ ಸಾಕಷ್ಟು ಕುತೂಹಲ ಇತ್ತು.ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತವನು, ಜಿ.ಟಿ.ಗೆದ್ದಿದ್ದಾರೆ.ಜನರು ಕರೆದ ಮೇಲೆ ಒಂದೇ ವೇದಿಕೆಗೆ ಬರಲೇ ಬೇಕು’ ಎಂದರು.
‘ಜಿ.ಟಿ.ದೇವೇಗೌಡ ಕಾಂಗ್ರೆಸ್ ಗೆ ಬಂದಿದ್ದಾನೆ ಅಂತಾ ಜನ ಮಾತನಾಡಿಕೊಳ್ಳುತ್ತಿದ್ದಾರೆ. ಜಿ.ಟಿ. ದೇವೇಗೌಡ ಗೆ ಕಾಂಗ್ರೆಸ್ ಬರುವುದಕ್ಕೆ ಮನಸ್ಸು ಇದೆ .ಆದರೆ ಹೆಚ್.ಡಿ. ದೇವೇಗೌಡ, ಕುಮಾರಸ್ವಾಮಿ ಅಲ್ಲಿಯೇ ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷ ಸಾಕಷ್ಟು ವರ್ಷಗಳ ಇತಿಹಾಸ ಇದೆ.ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬರೋದಿದ್ದರೆ ಬರಬಹುದು.ಯಾರೇ ಬಂದರು ಪಕ್ಷಕ್ಕೆ ಸ್ವಾಗತ’ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.