Karnataka Election 2023: ಎಂ 3 ಮತಯಂತ್ರ ಈ ಬಾರಿಯ ವಿಶೇಷ


Team Udayavani, Apr 5, 2023, 8:30 AM IST

M 3

ಮಂಗಳೂರು: ಈ ಬಾರಿ ಮತದಾರರು ಹೊಸದಾದ ಎಂ-3 (ಮಾರ್ಕ್‌-3) ಮತಯಂತ್ರಗಳಲ್ಲಿ ಮತಹಾಕಬಹುದು. ಹಿಂದಿನ ಬಿಇಎಲ್‌ ಉತ್ಪಾದಿತ ಮತಯಂತ್ರಗಳ ಬದಲಿಗೆ ಹೈದರಾಬಾದ್‌ನ ಎಲೆಕ್ಟ್ರಾನಿಕ್ಸ್‌ ಕಾರ್ಪೊ ರೇಷನ್‌ ಆಫ್‌ ಇಂಡಿಯಾ ಲಿ. ಸಂಸ್ಥೆಯವರು ಉತ್ಪಾದಿ ಸಿರುವ ನೂತನ ಮಾರ್ಕ್‌ 3 ಮತಯಂತ್ರಗಳನ್ನು ತರಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 3,687 ಮತದಾನ ಘಟಕ, 2,587 ನಿಯಂತ್ರಣ ಘಟಕ ಹಾಗೂ 2,790 ವಿವಿಪಾಟ್‌ಗಳು ಆಗಮಿಸಿದ್ದು, ಅವುಗಳನ್ನು ಭದ್ರತಾ ಕೊಠಡಿಯಲ್ಲಿ ಈಗಾಗಲೇ ಇರಿಸಲಾಗಿದೆ. ಅಲ್ಲದೇ ಅವುಗಳ ಪ್ರಥಮ ಹಂತದ ತಪಾಸಣೆಯನ್ನೂ ಕೈಗೊಳ್ಳಲಾಗಿದೆ.

ಮೊದಲ ರ್‍ಯಾಂಡಮೈಸೇಶನ್‌ ಆದ ಕೂಡಲೇ ಈ ಮತಯಂತ್ರಗಳನ್ನು ಚುನಾವಣಾಧಿಕಾರಿಗಳಿಗೆ ಹಸ್ತಾಂತರಿಸಿ ಮುಂದಿನ ಮತದಾನ ಪ್ರಕ್ರಿಯೆ ನಡೆಯುತ್ತದೆ. ಒಟ್ಟು 1,680 ಮತಗಟ್ಟೆಗಳು ಜಿಲ್ಲೆಯಲ್ಲಿವೆ. ಒಂದು ಮತಯಂತ್ರದಲ್ಲಿ ನೋಟಾ ಸೇರಿ 16 ಅಭ್ಯರ್ಥಿಗಳ ಹೆಸರು ಹಾಕಬಹುದು, ಹೆಚ್ಚು ಅಭ್ಯರ್ಥಿಗಳಿದ್ದರೆ ಹೆಚ್ಚುವರಿ ಮತದಾನ ಘಟಕಗಳನ್ನು ಅಳವಡಿಸಬೇಕಾಗುತ್ತದೆ.

ಪ್ರಯೋಜನಗಳೇನು?
ಹೊಸ ಮತಯಂತ್ರಗಳ ಪ್ರಯೋಜನವೆಂದರೆ ಇವು ಹಗುರ ಹಾಗೂ ತೆಳುವಾಗಿವೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ತಯಾರಿಸಲಾಗಿವೆ.
ಹಿಂದಿನ ಮತಯಂತ್ರಗಳಲ್ಲಿ ಒಂದು ಕಂಟ್ರೋಲ್‌ ಯುನಿಟ್‌ಗೆ 4 ಬ್ಯಾಲಟ್‌ ಯುನಿಟ್‌ಗಳನ್ನಷ್ಟೇ ಜೋಡಿಸಲು ಸಾಧ್ಯವಿತ್ತು. ಈಗಿನ ಯಂತ್ರದಲ್ಲಿ 24 ಬ್ಯಾಲಟ್‌ ಯುನಿಟ್‌ ಜೋಡಿಸಬಹುದು. ಹೀಗಾಗಿ 384 ಅಭ್ಯರ್ಥಿಗಳಿದ್ದರೂ ಇದರಲ್ಲಿ ಸಂಭಾಳಿಸಬಹುದು.

ಎಂ-3 ಕಂಟ್ರೋಲ್‌ ಯುನಿಟ್‌ನಲ್ಲಿ ಬ್ಯಾಟರಿ ಬಾಕಿ ಪ್ರಮಾಣ ನಿರಂತರವಾಗಿ ತೋರಿಸುತ್ತದೆ. ಇದರಿಂದಾಗಿ ಬ್ಯಾಟರಿ ಮುಗಿಯುವ ಮುನ್ನ ಮತಗಟ್ಟೆ ಅಧಿ ಕಾರಿಯು ಬೇರೆ ಬ್ಯಾಟರಿ ನೀಡುವಂತೆ ಕೇಳಿಕೊಂಡು ಮತದಾನ ಪ್ರಕ್ರಿಯೆ ಅಡ್ಡಿಯಾಗದಂತೆ ನಿರ್ವಹಿಸಬಹುದು.

ಸ್ವಯಂ ಪರಿಶೀಲನೆ
ಈ ಇವಿಎಂಗಳು ಪ್ರತಿಬಾರಿ ಸ್ವಿಚ್‌ ಆನ್‌ ಮಾಡಿದಾಗಲೂ ತನ್ನ ಘಟಕಗಳ ಸ್ಥಿತಿಯನ್ನು ಸ್ವಯಂ ಪರಿಶೀಲನೆ ಮಾಡುತ್ತವೆ. ಇದರಿಂದಾಗಿ ಇವಿಎಂ, ವಿವಿಪಾಟ್‌ಗಳು ಮತದಾನ ಶುರುವಾಗುವ ಮೊದಲೇ ಸರಿಯಿದೆಯೇ ಎನ್ನುವುದನ್ನು ತಿಳಿಯಲು ಸಾಧ್ಯ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.