Government: ಸಚಿವರ ಆತುರದ ಹೇಳಿಕೆ: ಸರಕಾರ ಇಕ್ಕಟ್ಟಿಗೆ?

ಕಾನೂನು, ಕೋಮು ಸೂಕ್ಷ್ಮ ವಿಚಾರಗಳಲ್ಲಿ ಸೂಕ್ಷ್ಮತೆ ಕಳೆದುಕೊಂಡವರಂತೆ ವರ್ತನೆ

Team Udayavani, May 27, 2023, 7:01 AM IST

congress flag

ಬೆಂಗಳೂರು: ಸರಕಾರ ಅಸ್ತಿತ್ವಕ್ಕೆ ಬಂದು ಒಂದು ವಾರವಷ್ಟೇ ಆಗಿದ್ದು, ಇನ್ನೂ ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ರಚನೆಯಾಗಿಲ್ಲ. ಅದಾಗಲೇ ಕೆಲವು ಸಚಿವರು ಕಾನೂನು ಮತ್ತು ಕೋಮು ಸೂಕ್ಷ್ಮ ವಿಚಾರಗಳಲ್ಲಿ ಅತ್ಯಾತುರದ ಹೇಳಿಕೆಗಳನ್ನು ಕೊಡಲಾರಂಭಿಸಿದ್ದಾರೆ. ಪ್ರಣಾಳಿಕೆಯಲ್ಲಿ ಕಾಂಗ್ರೆಸ್‌ ಕೊಟ್ಟ 5 ಗ್ಯಾರಂಟಿಗಳ ಭವಿಷ್ಯ ಏನಾಗುತ್ತೋ ಗೊತ್ತಿಲ್ಲ. ಆದರೆ ಸಚಿವರ ಇಂತಹ ಹೇಳಿಕೆಗಳು ಮುಂದಿನ ದಿನಗಳಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದಂತೂ ಖಚಿತ.

ಮುಖ್ಯವಾಗಿ ನ್ಯಾಯಾಲಯದಲ್ಲಿ ವಿಚಾರಣೆಯ ಹಂತದಲ್ಲಿರುವ ಮೀಸಲಾತಿ, ಮತಾಂತರ ನಿಷೇಧ, ಗೋಹತ್ಯೆ ನಿಷೇಧ, ಹಿಜಾಬ್‌ ಮತ್ತಿತರ ಪ್ರಕರಣಗಳಲ್ಲಿ “ಅಪಕ್ವ’ ಮಾತುಗಳು ಕಾಂಗ್ರೆಸ್‌ನ ಕೆಲವು ಸಚಿವರು, ಶಾಸಕರಿಂದ ಕೇಳಿ ಬರುತ್ತಿವೆ. ಕಾಯ್ದೆ ಮತ್ತು ನೀತಿಗಳನ್ನು ರೂಪಿಸುವ ಅಧಿಕಾರ ಇರುವಂತೆ ಅಂತಹ ಕಾಯ್ದೆ ಅಥವಾ ನೀತಿಗಳು ನ್ಯಾಯಾಲಯದಲ್ಲಿ ಪ್ರಶ್ನಿಸಲ್ಪಟ್ಟಿರುವಾಗಲೂ ಅವುಗಳನ್ನು ಹಿಂಪಡೆದುಕೊಳ್ಳುವ ಅಧಿಕಾರ ಸರಕಾರಕ್ಕೆ ಇರುತ್ತದೆ. ಆದರೆ ಅದರ ಬಗ್ಗೆ ಹೇಳಿಕೆ ನೀಡಲು ಈಗ ಸಕಾಲವಲ್ಲ.
ಪಠ್ಯಪುಸ್ತಕ ಪರಿಷ್ಕರಣೆ, ಗೋ ಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ರದ್ದು ಕಾಯ್ದೆ ಎಲ್ಲವನ್ನೂ ಮತ್ತೂಮ್ಮೆ ವಾಪಸ್‌ ತಂದು ಪರಿಷ್ಕರಣೆ ಮಾಡಿಯೇ ಸಿದ್ಧ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. ಇದರ ಜತೆಗೆ ಹಿಜಾಬ್‌, ಆರೆಸ್ಸೆಸ್‌ ನಿಷೇಧದ ವಿಚಾರವನ್ನೂ ಅವರು ಪ್ರಸ್ತಾವಿಸಿದ್ದಾರೆ. ಆದರೆ ಮೀಸಲಾತಿ ಹೆಚ್ಚಳ ಸಹಿತ ಗೋಹತ್ಯೆ ನಿಷೇಧ, ಮತಾಂತರ ನಿಷೇಧ, ಎಪಿಎಂಸಿ ರದ್ದು ಕಾಯ್ದೆ ವಿಚಾರ ಹೈಕೋರ್ಟ್‌ನಲ್ಲಿ ಇನ್ನೂ ವಿಚಾರಣ ಹಂತದಲ್ಲಿದೆ. ಹಿಜಾಬ್‌ ವಿಚಾರ ಸುಪ್ರೀಂಕೋರ್ಟ್‌ನಲ್ಲಿದೆ. ಈ ಹಂತದಲ್ಲಿ ಸರಕಾರ ಅಥವಾ ಸಚಿವರು ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದು ಸರಿಯಲ್ಲ.

ಅದೇ ರೀತಿ ಪೊಲೀಸ್‌ ಇಲಾಖೆಯನ್ನು ಕೇಸರಿಕರಣ ಮಾಡಲು ನಮ್ಮ ಸರಕಾ‌ುವುದಿಲ್ಲ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಮಾತು ಸಹಿಕ ಕೆಲವು ಸಚಿವರ “ನಿಷೇಧ’ದ ಮಾತುಗಳ ಮೂಲಕ ಕಾಂಗ್ರೆಸ್‌ ಸರಕಾರ ಆರಂಭದ ದಿನಗಳಿಂದಲೇ ಬಿಜೆಪಿಗೆ ಒಂದೊಂದಾಗಿ ರಾಜಕೀಯ ಅಸ್ತ್ರಗಳನ್ನು ಕೊಡುತ್ತಿದೆ.

ಸರಕಾರಕ್ಕೆ ತಾನೇ ರೂಪಿಸಿರುವ ಅಥವಾ ಹಿಂದಿನ ಸರಕಾರಗಳು ಜಾರಿಗೆ ತಂದಿರುವ ಕಾಯ್ದೆ ಮತ್ತು ನೀತಿಗಳನ್ನು ಹಿಂಪಡೆದುಕೊಳ್ಳಲು ಅಧಿಕಾರ ಇರುತ್ತದೆ. ಯಾವುದೇ ಕಾಯ್ದೆ ಅಥವಾ ನೀತಿಗಳು ನ್ಯಾಯಾಲಯದಲ್ಲಿ ಪ್ರಶ್ನಿಸಲ್ಪಟ್ಟು ವಿಚಾರಣ ಹಂತದಲ್ಲಿರುವಾಗಲೂ ಸರಕಾರ ಕಾಯ್ದೆ ಅಥವಾ ನೀತಿಗಳನ್ನು ಹಿಂಪಡೆದುಕೊಳ್ಳಬಹುದು. ಕಾಯ್ದೆಗಳನ್ನು ಕಾನೂನು ರೀತಿ ರದ್ದುಪಡಿಸಬೇಕಾದರೆ ಅವುಗಳನ್ನು ಶಾಸನಸಭೆಯಲ್ಲಿ ಮಂಡಿಸಿ ನಿರಸನಗೊಳಿಸಬೇಕು. ಒಂದು ವೇಳೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಅಥವಾ ತರಾತುರಿಯ ಕ್ರಮ ಜರಗಿಸಬಾರದು ಎಂದು ನ್ಯಾಯಾಲಯ ಹೇಳಿದ್ದರೆ ಅದು ಇತ್ಯರ್ಥ ಆಗುವ ತನಕ ಸರಕಾರದ ಮುಂದೆ ಸೀಮಿತ ಅವಕಾಶಗಳು ಇರುತ್ತವೆ. ಹೊರಗಡೆ ಯಾರು ಏನೇ ಹೇಳಿದರೂ ನ್ಯಾಯಾಲಯಕ್ಕೆ ನೀಡುವ ಸರಕಾರದ ಲಿಖೀತ ಹೇಳಿಕೆಯೇ ಅಂತಿಮವಾಗುತ್ತದೆ ಎಂದು ಕಾನೂನು ತಜ್ಞರು ಹೇಳುತ್ತಾರೆ.

ಯಾವುದೇ ಕಾನೂನು ಜಾರಿಗೆ ಬಂದ ಮೇಲೆ ಅದರ ಮಾನ್ಯತೆ ಅಥವಾ ಸಿಂಧುತ್ವವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು. ಕಾಯ್ದೆಗಳನ್ನು ರದ್ದುಪಡಿಸುವ ಅಧಿಕಾರ ಕೋರ್ಟ್‌ಗಿದೆ. ಒಂದು ವೇಳೆ ಯಾವುದೇ ಕಾಯ್ದೆಯು ಸುಪ್ರೀಂಕೋರ್ಟ್‌ ಇಲ್ಲವೆ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಇದ್ದು, ಅಂತಿಮ ತೀರ್ಪು ಬರುವುದಕ್ಕಿಂತ ಮುಂಚೆಯೇ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಸರಿಯಾದ ಕ್ರಮವಲ್ಲ.
– ಬಿ.ವಿ. ಆಚಾರ್ಯ, ಮಾಜಿ ಅಡ್ವೊಕೇಟ್‌ ಜನರಲ್‌

ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.