ನಿಮ್ಮ ವಂಶ ನಿರ್ವಂಶವಾಗುತ್ತದೆ: ಕೆ. ವೆಂಕಟೇಶ್ ವಿರುದ್ಧ ಶಾಸಕ ಕೆ.ಮಹದೇವ್ ಕಿಡಿ

ದೇವಾಲಯದ ಹಣ ದುರ್ಬಳಕೆ ಮಾಡಿಕೊಂಡ ಆರೋಪ

Team Udayavani, Mar 8, 2023, 6:35 PM IST

1-wqee-wqe

ಪಿರಿಯಾಪಟ್ಟಣ: ನಾನು ದೇವಾಲಯದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದೇನೆ ಎಂದು ಸುಳ್ಳು ಆರೋಪ ಮಾಡುತ್ತಿರುವ ಮಾಜಿ ಶಾಸಕ ಕೆ.ವೆಂಕಟೇಶ್ ರವರಿಗೆ ನೈತಿಕತೆ ಹಾಗೂ ದೇವರ ಮೇಲೆ ನಂಬಿಕೆ ಇದ್ದರೆ ಇಂದು ನಡೆಯುವ ಮಸಣಿಕಮ್ಮ ಬ್ರಹ್ಮ ರಥೋತ್ಸವದಲ್ಲಿ ಬಂದು ದೇವರ ಮುಂದೆ ಪ್ರಮಾಣ ಮಾಡಲಿ ಎಂದು ಶಾಸಕ ಕೆ.ಮಹದೇವ್ ಸವಾಲು ಹಾಕಿದ್ದಾರೆ.

ತಾಲೂಕಿನ ಕರಡಿಬೊಕ್ಕೆ ಗ್ರಾಮದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಸ್ತೆ ಅಭಿವೃದ್ದಿ ಕಾಮಗಾರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ,ನಾಲ್ಕುವರೆ ವರ್ಷಗಳಿಂದ ಕಾಣೆಯಾಗಿದ್ದ ಮಾಜಿ ಶಾಸಕ ಕೆ.ವೆಂಕಟೇಶ್ ದಿಢೀರ್ ಪ್ರತ್ಯಕ್ಷರಾಗಿ ಸುಳ್ಳು ಆರೋಪಗಳನ್ನು ಮಾಡುತ್ತಾ ತಾಲೂಕಿನ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀಮಸಣಿಕಮ್ಮ ದೇವಾಲಯದಲ್ಲಿ ಶಾಸಕ ಕೆ.ಮಹದೇವ್ ಅವರ ಪಕ್ಷದ ಕೆಲವು ಮುಖಂಡರು ಸೇರಿಕೊಂಡು 1.26 ಕೋಟಿ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಸುಳ್ಳು ಆರೋಪಿಸಿದ್ದಾರೆ. ದೇವಾಲಯ ಮುಜರಾಯಿ ಇಲಾಖೆಗೆ ಸೇರಿದ್ದು, ಅಲ್ಲಿನ ಹಣ ಸರಕಾರದ ಖಜಾನೆಯಲ್ಲಿರುತ್ತದೆ ಹೀಗಿರುವಾಗ ಆ ಹಣವನ್ನು ನಾನು ಹೇಗೆ ಲಪಟಾಯಿಸಲು ಸಾಧ್ಯ, ನನಗೆ ದೇವರ ಮೇಲೆ ಅಪಾರ ಭಕ್ತಿ ಮತ್ತು ನಂಬಿಕೆ ಇದೆ ಹಾಗಾಗಿ ತಿಂಗಳಿಗೆ ಒಮ್ಮೆ ದೇವಾಲಯಕ್ಕೆ ಹೋಗಿ ಪೂಜೆ ಮಾಡಿಸಿ ಬರುತ್ತೇನೆ. ಇದೇ ಮಾಜಿ ಶಾಸಕರಿಗೆ ದೇವರ ಮೇಲೆ ನಂಬಿಕೆ ಮತ್ತು ಭಕ್ತಿ ಯಾವುದು ಇಲ್ಲ, ಹಾಗೇನಾದರೂ ಅವರಿಗೆ ದೇವರ ಮೇಲೆ ನಿಜವಾಗಿಯೂ ಭಕ್ತಿ ಇದ್ದರೆ ಇಂದು ಬ್ರಾಹ್ಮಿ ಮುಹೂರ್ತದಲ್ಲಿ ನಡೆಯುವ ಮಸಣಿಕಮ್ಮ ತಾಯಿಯ ಬ್ರಹ್ಮ ರಥೋತ್ಸವಕ್ಕೆ ಅವರು ಬರಲಿ, ನಾನು ಬರುತ್ತೇನೆ “ಅಲ್ಲಿ ನಾನು ದೇವರ ಹಣವನ್ನು ಲೂಟಿ ಮಾಡಿಲ್ಲ” ಎಂದು ದೇವರ ಕೊರಳಿಗೆ ಹಾರ ಹಾಕುತ್ತೇನೆ ಅದೇ ರೀತಿ ನನ್ನ ಮೇಲೆ ಸುಳ್ಳು ಆರೋಪ ಮಾಡಿರುವ ವೆಂಕಟೇಶ್ ರವರು ಕೂಡ ಇವನು ದೇವರ ಹಣವನ್ನು ಲೂಟಿ ಮಾಡಿದ್ದಾನೆ ಎಂದು ದೇವರ ಕೊರಳಿನಿಂದ ಹಾರ ಎತ್ತಲಿ, ನಾನೆನಾದರೂ ದೇವಾಲಯದ ಹಣವನ್ನು ಲೂಟಿ ಮಾಡಿದ್ದರೆ ನನ್ನ ವಂಶ ನಿರ್ವಂಶವಾಗಲಿ, ಇಲ್ಲದಿದ್ದರೆ ವೆಂಕಟೇಶ್ ರವರ ವಂಶ ನಾಶವಾಗಲಿ ಎಂದು ಆಕ್ರೋಶ ಹೊರ ಹಾಕಿದರು.

ಪತ್ರಕರ್ತರ ಮನೆ ಹಾಳಾಗಲಿ
ಮಾಜಿ ಶಾಸಕ ಕೆ.ವೆಂಕಟೇಶ್ ರವರು ಮಸಣಿಕಮ್ಮ ದೇವಾಲಯದ ಹಣವನ್ನು ಮಹದೇವ್ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳುವಾಗ ಪತ್ರಕರ್ತರು ಸಾಕ್ಷಿ ಕೇಳಬೇಕಿತ್ತು ಆದರೆ ಅವರು ಮಾಡುವ ಆರೋಪಗಳನ್ನು ಪತ್ರಿಕೆಗಳಲ್ಲಿ ಬರೆದು ನನ್ನ ಮನಸ್ಸಿಗೆ ನೋವು ಮಾಡಿದ್ದೀರಿ. ಪತ್ರಕರ್ತರು ಅವರು ಮಾಡುವ ಆರೋಪಗಳನ್ನು ಪತ್ರಿಕೆಗೆ ಹಾಕುವ ಮೊದಲು ನನ್ನನ್ನು ಕೇಳಬೇಕಿತ್ತು, ಅದನ್ನು ಬಿಟ್ಟು ಅವರು ಮಾಡಿರುವ ಆರೋಪಗಳೇ ನಿಜವೆಂದು ಭಾವಿಸಿ ಪತ್ರಿಕೆಗಳಲ್ಲಿ ಬರೆದು ನನ್ನ ತೇಜೋವಧೆ ಮಾಡಿದ್ದೀರಿ ನಿಮ್ಮ ಮನೆ ಹಾಳಾಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪಿಆರ್ಇಡಿ ಎಇಇ ಮಲ್ಲಿಕಾರ್ಜುನ್ ಸಹಾಯಕಿ ಮೇಘನಾ, ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಯ್ಯ ಶೆಟ್ಟಿ, ಮುಖಂಡರಾದ ರಂಗಸ್ವಾಮಿ, ಗಗನ್, ಅಶ್ವಿನ್ ಕುಮಾರ್, ನವಿಲೂರು ರಾಜು, ಜಲೇಂದ್ರ, ಚಿರು ದಿರ್ಜಿವಾಲಾ, ಅಶೋಕ್, ಚಲುವರಾಜು, ವಿದ್ಯಾಶಂಕರ್, ಸೇರಿದಂತೆ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು

Mys-Udgiri-1

Mob Attack: ಉದಯಗಿರಿ ಪೊಲೀಸ್‌ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ

24

80 ಸಾವಿರ ಲಂಚ ಸ್ವೀಕರಿಸುವಾಗ ಸಬ್‌ ಇನ್ಸ್‌ಪೆಕ್ಟರ್‌ ಲೋಕ ಬಲೆಗೆ

11

Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್‌’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.