ಸಮಾಜ ಸೇವಕ ರಫೀಕ್ ಬಡೇಘರ್ ಅವರ ಮಾದರಿ ಕಾರ್ಯ

ಅನಾಥ ವೃದ್ಧ ದಂಪತಿ ನೆರವಿಗೆ ನಿಂತು ಸೇವೆ

Team Udayavani, Sep 30, 2021, 6:43 PM IST

badeghar

ಬೈಲಹೊಂಗಲ : ಅನಾಥ ವೃದ್ಧ ದಂಪತಿ ಅನುಭವಿಸುತ್ತಿರುವ ಸಂಕಷ್ಟವನ್ನು ಮನಗಂಡು ಅವರ ನೆರವಿಗೆ ಧಾವಿಸುವುದರ ಮೂಲಕ ಸಾಮಾಜಿಕ ಕಾರ್ಯಕರ್ತ ರಫೀಕ್ ಬಡೇಘರ್ ಅವರು ಮಾದರಿ ಎನಿಸಿಕೊಂಡಿದ್ದಾರೆ.

ಅನಾಥ ವೃದ್ಧ ದಂಪತಿಗಳಾದ ಮೂಲತ: ಮಹಾರಾಷ್ಟ್ರದ ಇಂಚಲಕರಜಿಯವರಾದ ಬಸವರಾಜ ಮಲಕಾಜಪ್ಪ ಸೊಲಾಪೂರೆ ಮತ್ತು ಸಾವಿತ್ರಿ ಬಸವರಾಜ ಸೊಲಾಪೂರೆ ಅವರು ಬೆಳಗಾವಿಯ  ವೃದ್ಧಾಶ್ರಮದಲ್ಲಿನ ವ್ಯವಸ್ಥೆಯ ಕುರಿತು ಬೇಸರ ವ್ಯಕ್ತಪಡಿಸಿ, ವೃದ್ಧಾಶ್ರದಲ್ಲಿ ನಿಷ್ಕಾಳಜಿ ತೋರುತ್ತಿದ್ದು, ಸರಿಯಾದ ಊಟ, ಚಿಕಿತ್ಸೆ ಸಿಗುತ್ತಿಲ್ಲ. ನಿತ್ಯ ನರಕಯಾತನೆ ಅನುಭವಿಸುತ್ತಿದ್ದೇವೆ. ನಮ್ಮ ಮಾತು ಕೇಳುವವರು ಯಾರೂ ಇಲ್ಲ. ಏನಾದರೂ ಹೇಳಲು ಹೋದರೆ ನಮ್ಮ ಮಾತಿಗೆ ಬೆಲೆಯೇ ಇಲ್ಲ ಎಂದು ನೋವು ತೋಡಿಕೊಂಡಿದ್ದರು.

ತೀವ್ರವಾಗಿ ನೊಂದಿದ್ದ ವೃದ್ಧ ದಂಪತಿ ಬೈಲಹೊಂಗಲಕ್ಕೆ ಬಂದಿದ್ದರು. ರಫೀಕ್ ಬಡೇಘರ್ ಅವರು ಅವರಿಗೆ ಬಾಡಿಗೆ ಮನೆ ಕೊಡಿಸಿ, ಸ್ವಂತ ಹೂವು -ಹಣ್ಣಿನ ಅಂಗಡಿ ಹಾಕಿ ಕೊಟ್ಟು ಜೀವನೋಪಾಯಕ್ಕೆ ನೆರವಾಗಿದ್ದಾರೆ.

ವ್ಯಾಪಾರಕ್ಕಾಗಿ ಅಂಗಡಿಯ ಮುಂದೆ ಬ್ಯಾನರ್ ಹಾಕಿದ್ದು ‘ನಾವು ಅನಾಥರಿದ್ದು ತಾವುಗಳು ನಮ್ಮ ಅಂಗಡಿಯಲ್ಲಿ ಹೂವು. ಹಣ್ಣು-ಹಂಪಲು ಖರೀದಿ ಮಾಡಿ, ನಮಗೆ ಸಹಾಯ ಮಾಡಿರಿ ಎನ್ನುವ ಬ್ಯಾನರ್ ಹಾಕಿಕೊಂಡು ವ್ಯಾಪಾರ-ವಹಿವಾಟು ನಡೆಸುತ್ತಿದ್ದೇವೆ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವೈದ್ಯ ಸಾಹಿತಿ ಡಾ.ಎಸ್.ಎಸ್.ದೇವಲಾಪೂರ ಅವರು ಅನಾಥ ವೃದ್ಧ ದಂಪತಿಯ ಚಿಕಿತ್ಸೆಯನ್ನು ಉಚಿತವಾಗಿ ನೋಡಿಕೊಳ್ಳುತ್ತೇವೆಂದು ಭರವಸೆ ನೀಡಿದ್ದಾರೆ.

ವೃದ್ಧಾಶ್ರಮಗಳಲ್ಲಿ ಅನಾಥರಿಗೆ, ಬುದ್ಧಿಮಾಂಧ್ಯರಿಗೆ, ಅಂಗವಿಕಲರಿಗೆ ಸರಿಯಾದ ಊಪಚಾರ, ಕಾಳಜಿ ಮಾಡದೆ ಅಮಾನವೀಯ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಖಂಡನೀಯ. ಅಧಿಕಾರಗಳ ದಿವ್ಯ ನಿರ್ಲಕ್ಷತನದಿಂದ ಅನಾಥರು ನರಕಯಾತನೆ ಅನುಭವಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ, ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಅಂಗವೀಕಲರ ಇಲಾಖೆಗೆ ಸರಕಾರ ಕೋಟ್ಯಾಂತರ ರೂ.ಹಣ ಖುರ್ಚು ಮಾಡುತ್ತಿರುವುದು ಯಾವ ಉದ್ದೇಶಕ್ಕಾಗಿ. ಅನಾಥರಿಗೆ ಸರಿಯಾದ ಊಟ, ಚಿಕಿತ್ಸೆ, ವಸತಿ ನೀಡದ ಅಮಾನವೀಯ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಸರಿಯಾದ ಕ್ರಮವಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮವಹಿಸಿ ತಪ್ಪಿಸ್ಥರಿಗೆ ಶಿಕ್ಷೆ ವಿಧಿಸಬೇಕು.
ರಫೀಕ್ ಬಡೇಘರ, ಸಾಮಾಜಿಕ ಕಾರ್ಯಕರ್ತರು, ಬೈಲಹೊಂಗಲ

ನಾವು ಅನಾಥ ದಂಪತಿಗಳು ನಮಗೆ ಯಾರೂ ದಿಕ್ಕಿಲ್ಲ. ವೃದ್ಧಾಶ್ರಮಗಳಲ್ಲಿ ನಮ್ಮನ್ನು ಕೀಳಾಗಿ ಕಾಣುತ್ತಾರೆ. ಸರಿಯಾದ ಊಟ, ವಸತಿ, ಚಿಕಿತ್ಸೆ ನೀಡದೆ ನಾಯಿಗಿಂತ ಕಡೆಯಾಗಿ ನೋಡುತ್ತಾರೆ. ಸಾಮಾಜಿಕ ಕಾರ್ಯಕರ್ತ ರಫೀಕ ಬಡೇಘರ್ ಅವರು  ಬಾಡಿಗೆ ಮನೆ ಕೊಡಿಸಿ, ಜೀವನೋಪಾಯಕ್ಕಾಗಿ ಅಂಗಡಿ ಹಾಕಿಕೊಟ್ಟು ಸಮಾಜದಲ್ಲಿ ಬದುಕಲು ಹೇಳಿಕೊಟ್ಟಿದ್ದಾರೆ. ನಮ್ಮೆಲ್ಲ ಕಷ್ಟಗಳಿಗೆ ಬೆನ್ನೆಲುಬಾಗಿ ನಿಲ್ಲುವೆ ಎಂದು ಹೇಳಿದ್ದರಿಂದ ನಮ್ಮಲ್ಲಿ ಆತ್ಮಸ್ಥೈರ್ಯ ಹೆಚ್ಚಿದೆ.

ಬಸವರಾಜ ಸೊಲಾಪೂರೆ ಅನಾಥ ವೃದ್ಧ

ವರದಿ: ಸಿ.ವೈ.ಮೆಣಸಿನಕಾಯಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.