![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 6, 2021, 3:50 PM IST
ಬೆಂಗಳೂರು : ಮೊದಲು ಕಾನೂನು ದಿನಾಚರಣೆ ಅಂತ ಆಚರಣೆ ಮಾಡುತ್ತಿದ್ದೇವು, ಅಂಬೇಡ್ಕರ್ ಹಾಗೂ ಸಂವಿಧಾನಕ್ಕೆ ಗೌರವ ಸಿಗುವ ಸಲುವಾಗಿ ನ.26, 2015ರಂದು ಪ್ರಧಾನಿ ನರೇಂದ್ರ ಮೋದಿ ‘ಸಂವಿಧಾನ ದಿನಾಚರಣೆ’ ಘೋಷಣೆ ಮಾಡಿದರು ಎಂದು ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ರಾಜ್ಯ ಪದಾಧಿಕಾರಿಗಳು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿ,ಕೆಳ ಸಮುದಾಯದ ಸಿಂಹ ಗರ್ಜನೆ ಅಂಬೇಡ್ಕರ್ ಕಳೆದುಕೊಂಡು 65 ವರ್ಷ ಆಗಿದೆ. ಅಂಬೇಡ್ಕರ್ ತರಹ ಶಕ್ತಿ ಭಾರತದಲ್ಲಿ ಮತ್ತೆ ಹುಟ್ಟುತ್ತೆ ಎಂಬ ಭರವಸೆ ಇಲ್ಲ. ದೇಶದಲ್ಲಿ ಇದ್ದಂತಹ ಅಶ್ವರ್ಶತೆ, ಸಮಾನತೆ ಸೇರಿದಂತೆ ಅನೇಕ ವಿಚಾರದಲ್ಲಿ ಧ್ವನಿ ಮಾಡಿದ್ದೇ ಅಂಬೇಡ್ಕರ್ ಎಂದರು.
ಇಂದು ನಮಗೆ ಸೂರ್ಯನ ರೀತಿಯಲ್ಲಿ ಬೆಳಕಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದೇವೆ. ಸಂವಿಧಾನ ಗೌರವಿಸುವ ಕೆಲಸ ಮಾಡುತ್ತಿದ್ದೇವೆ. ನವಂಬರ್ 26ರಂದು ಸಂವಿಧಾನ ದಿನಾಚರಣೆ ಮಾಡುತ್ತಿದ್ದೇವೆ ಎಂದರು.
ನವೆಂಬರ್ 26ರಿಂದ ಇಂದಿನವರೆಗೂ ಅಂಬೇಡ್ಕರ್ ಗೌರವಿಸುವ ಅಭಿಯಾನ ಮಾಡಲಾಗಿದೆ. ಇಂದು ಅಂಬೇಡ್ಕರ್ ಅಗಲಿದ ದಿನ. ಇಂದು ನಾವು ಸಂತೋದಿಂದ ಇಲ್ಲ ಆರು ದಶಕದ ಕಾಲ ಬಿಜೆಪಿ ಆಡಳಿತ ಮಾಡಲಿಲ್ಲ. ಕಾಂಗ್ರೆಸ್ ಆಡಳಿತದಲ್ಲಿ ಅಂಬೇಡ್ಕರ್ ಅವಮಾನ ಮಾಡಿದರು. ದಲಿತರನ್ನು ವೋಟ್ ಬ್ಯಾಂಕ್ ಮಾಡಿಕೊಂಡು, ದಲಿತರಿಗೆ ಗೌರವ ಕೊಡಲಿಲ್ಲ. ಮೋದಿ, ನಡ್ಡಾ ನೇತೃತ್ವದಲ್ಲಿ ಅಂಬೇಡ್ಕರ್ ಅವರಿಗೆ ಗೌರವ ಸಿಗುತ್ತಿದೆ ಎಂದರು.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ರಾಜ್ಯ ಪದಾಧಿಕಾರಿಗಳು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಗೌರವ ಅರ್ಪಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ @arunbpbjp & ಪ್ರಮುಖರು ಉಪಸ್ಥಿತರಿದ್ದರು.
#Ambedkar pic.twitter.com/bFJROgm6Ik— BJP Karnataka (@BJP4Karnataka) December 6, 2021
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.