Modi Poland Visit: ಪೋಲೆಂಡ್‌ಗೆ ಆಗಮಿಸಿದ ಪ್ರಧಾನಿ ಮೋದಿ; ಗುಜರಾತಿ ನೃತ್ಯ ಸ್ವಾಗತ, ಜೈಕಾರ

ಅನಿವಾಸಿ ಭಾರತೀಯರಿಂದ ನರೇಂದ್ರ ಮೋದಿಗೆ ಭರ್ಜರಿ ಸ್ವಾಗತ, ವಿವಿಧ ಘೋಷಣೆ

Team Udayavani, Aug 21, 2024, 9:56 PM IST

Poland

 ವಾರ್ಸಾ (ಪೋಲೆಂಡ್‌):  ಪ್ರಧಾನಿ ನರೇಂದ್ರ ಮೋದಿ ಪೋಲೆಂಡ್‌ ಹಾಗೂ ಉಕ್ರೇನ್‌ ದೇಶಗಳ ಅಧಿಕೃತ ಭೇಟಿಗಾಗಿ ಬುಧವಾರ ಸಂಜೆ ಪೋಲೆಂಡ್‌ನ ವಾರ್ಸಾ ಫ್ರೆಡರಿಕ್‌ ಚಾಪಿನ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದರು.  45 ವರ್ಷಗಳ ನಂತರ ಮಧ್ಯ ಯುರೋಪಿಯನ್ ದೇಶಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ನಾಯಕ (ಪ್ರಧಾನಿ) ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಭಾರತ ಮತ್ತು ಪೋಲೆಂಡ್ ತಮ್ಮ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 70ನೇ ವಾರ್ಷಿಕೋತ್ಸವ ಆಚರಿಸುತ್ತಿರುವಾಗ ಪೋಲೆಂಡ್​ನ ವಾರ್ಸಾಗೆ ಅವರ ಭೇಟಿ ಮಹತ್ವ ಪಡೆದಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ  ಪ್ರಧಾನಿ ಮೋದಿ, ಪೋಲೆಂಡ್‌ನಲ್ಲಿ ಬಂದಿಳಿದು ಇಲ್ಲಿನ ವಿವಿಧ ಕಾರ್ಯಕ್ರಮಗಳ ಎದುರು ನೋಡುತ್ತಿದ್ದೇನೆ. ಈ ಭೇಟಿಯು ಭಾರತ ಪೋಲೆಂಡ್ ಸ್ನೇಹ ಬಲಪಡಿಸುತ್ತದೆ ಮತ್ತು ಉಭಯ ರಾಷ್ಟ್ರಗಳ ಜನರಿಗೆ ಪ್ರಯೋಜನ  ಸಿಗಲಿದೆ ಎಂದು ಬರೆದಿದ್ದಾರೆ.

ಅನಿವಾಸಿ ಭಾರತೀಯರಿಂದ ಅದ್ಧೂರಿ ಸ್ವಾಗತ: 
ಪೋಲೆಂಡ್​ನಲ್ಲಿ ಭಾರತೀಯ ವಲಸಿಗರು ಪ್ರಧಾನಿ ಮೋದಿ  ಆಗಮನಕ್ಕಾಗಿ ಕಾಯುತ್ತಿದ್ದರು. ಈ ವೇಳೆ ಪೋಲೆಂಡ್​ನ ಕಲಾವಿದರು ವಾರ್ಸಾ ಹೋಟೆಲ್​ನಲ್ಲಿ ಭಾರತೀಯ ಸಾಂಪ್ರದಾಯಿಕ ನೃತ್ಯದ ಮೂಲಕ ಮೋದಿಗೆ ಸ್ವಾಗತ ನೀಡಿದರು.
ವಾರ್ಸಾದ ಹೋಟೆಲ್ ಎದುರು ಮೋದಿ  ನೋಡಲು ಅನಿವಾಸಿ ಭಾರತೀಯರು ಸೇರಿದ್ದರು. ಮೋದಿ ಆಗಮಿಸುತ್ತಿದ್ದಂತೆ ಅವರು ಜೈಕಾರ ಹಾಕಿ ಸಂತಸ ವ್ಯಕ್ತಪಡಿಸಿದರು.

1979ರಲ್ಲಿ ಮೊರಾರ್ಜಿ ದೇಸಾಯಿ ನಂತರ 45 ವರ್ಷಗಳಲ್ಲಿ ಪೋಲೆಂಡ್‌ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ.  ರಕ್ಷಣಾ ಸಹಕಾರ ಮತ್ತು ಮಾಹಿತಿ ತಂತ್ರಜ್ಞಾನ, ಔಷಧೀಯ ಮತ್ತು ವಾಹನ ತಯಾರಿಕೆಯಲ್ಲಿ ಸಂಬಂಧಗಳ ಹೆಚ್ಚಿಸುವ ನಿರೀಕ್ಷೆಯಿದೆ.


ಗುಜರಾತಿ ನೃತ್ಯದ ಆಕರ್ಷಣೆ; ‘ಭಾರತ್ ಮಾತಾ ಕೀ ಜೈ’, ‘ಜೈ ಶ್ರೀರಾಮ್’ ಘೋಷಣೆ
ಸಂಜೆ ಪೋಲೆಂಡ್​ಗೆ ತಲುಪಿದ ಪ್ರಧಾನಿ ನರೇಂದ್ರ ಮೋದಿಗೆ  ಗುಜರಾತಿ ನೃತ್ಯದ ಮೂಲಕ ಸ್ವಾಗತ ಕೋರಿದ್ದಾರೆ. ಬಳಿಕ ಅನಿವಾಸಿ ಭಾರತೀಯರು ಮೋದಿಯವರ ಕಾಣುತ್ತಿದ್ದಂತೆ ‘ಭಾರತ್ ಮಾತಾ ಕೀ ಜೈ’, ‘ಜೈ ಶ್ರೀರಾಮ್’ ಘೋಷಣೆಗಳ ಕೂಗಿ ತಮ್ಮ ಸಂಭ್ರಮ ವ್ಯಕ್ತಪಡಿಸಿದರು. ಈ ವೇಳೆ ನರೇಂದ್ರ ಮೋದಿ ಪೋಲೆಂಡ್‌ನಲ್ಲಿರುವ ಭಾರತೀಯ ಸಮುದಾಯದವರಿಗೆ ಆಟೋಗ್ರಾಫ್ ಹಾಕಿ, ಫೋಟೋಗೆ ಪೋಸ್ ಕೊಟ್ಟರು. ಕೆಲವರು ಮಹಿಳೆಯರು ಮೋದಿಯವರ ಕೈಗೆ ರಾಖಿಯನ್ನೂ ಕಟ್ಟಿದರು.

ನಮ್ಮ ರಾಜತಾಂತ್ರಿಕ ಸಂಬಂಧಗಳ 70 ವರ್ಷಗಳನ್ನು ನಾವು ಗುರುತಿಸುತ್ತಿರುವ ಸಂದರ್ಭದಲ್ಲಿ ಪೋಲೆಂಡ್‌ಗೆ ನನ್ನ ಭೇಟಿ ಬಂದಿದೆ. ಪೋಲೆಂಡ್ ಮಧ್ಯ ಯುರೋಪ್‌ನಲ್ಲಿ ಪ್ರಮುಖ ಆರ್ಥಿಕ ಪಾಲುದಾರ. ಪ್ರಜಾಪ್ರಭುತ್ವ ಮತ್ತು ಬಹುತ್ವಕ್ಕೆ ನಮ್ಮ ಪರಸ್ಪರ ಬದ್ಧತೆಯು ನಮ್ಮ ಸಂಬಂಧವನ್ನು ಮತ್ತಷ್ಟು ಬಲಪಡಿಸುತ್ತದೆ. ನನ್ನ ಸ್ನೇಹಿತ ಪ್ರಧಾನಿ ಡೊನಾಲ್ಡ್ ಟಸ್ಕ್ ರನ್ನು ಭೇಟಿ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ.

ಸ್ಮಾರಕಗಳಿಗೆ ಗೌರವ ನಮನ:
ವಾರ್ಸಾದಲ್ಲಿರುವ ಜಾಮ್‌ ಸಾಹೇಬ್‌ ನವಾನಗರ ಸ್ಮಾರಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು. ಈ ಸ್ಮಾರಕವು ನವಾನಗರದ (ಜಾಮ್‌ನಗರ) ಮಹಾರಾಜ  ಜಾಮ್‌ ಸಾಹೇಬ್‌ ದ್ವಿಗ್ವಿಜಯ ಸಿನ್ಹಾಜಿ ರಣಜಿತ್‌ಸಿನ್ಹಾಜಿ ಸವಿನೆನಪಿಗಾಗಿ ಕಟ್ಟಿಸಲಾಗಿದೆ. ೧೯೪೨ರ ಎರಡನೇ ಮಹಾಯುದ್ಧ ಸಂದರ್ಭದಲ್ಲಿ ನಿರಾಶ್ರಿತರಾಗಿದ್ದ ಪೊಲೀಶ್‌ ಮಕ್ಕಳಿಗೆ ವಸತಿ ವ್ಯವಸ್ಥೆ ಈ ಮಹಾರಾಜ ಕಲ್ಪಿಸಿದ್ದ ಅವರ ನೆನಪಿಗೆ ಸ್ಮಾರಕ ನಿರ್ಮಿಸಿದರು.

ಟಾಪ್ ನ್ಯೂಸ್

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಶಾರುಖ್‌ – ಅಟ್ಲಿ ʼಜವಾನ್‌ʼ

Jawan‌ Movie: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ಸೂಪರ್‌ ಹಿಟ್ ʼಜವಾನ್‌ʼ

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

Good News: ಶೀಘ್ರದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ? ಪಂಕಜ್‌ ಜೈನ್

1-ffsdf

Chikkaballapur ನಗರಸಭೆ ಕೋಲಾಹಲ; ಡಾ.ಸುಧಾಕರ್ ಮೇಲುಗೈ: ಸವಾಲು ಹಾಕಿದ ಪ್ರದೀಪ್ ಈಶ್ವರ್!

HDK

Nagamangala Riots: ಗಲಭೆಗೆ ಕಾಂಗ್ರೆಸ್‌ ಸರಕಾರದ ತುಷ್ಟೀಕರಣ ನೀತಿಯೇ ಕಾರಣ: ಎಚ್‌ಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

1-sadsadasd

Ganesh festival; ಡೋಲು-ತಾಸೆಯವರ ಸಂಖ್ಯೆಗೆ NGT ನಿರ್ಬಂಧಕ್ಕೆ ಸುಪ್ರೀಂ ತಡೆ

Sitaram Yechury

Sitaram Yechury: ಹಿರಿಯ ಕಮ್ಯುನಿಸ್ಟ್‌ ನಾಯಕ ಸೀತಾರಾಮ್‌ ಯೆಚೂರಿ ಇನ್ನಿಲ್ಲ

Road Mishap: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

Road Mishap: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಮಗು ಸೇರಿ ಐವರು ಸ್ಥಳದಲ್ಲೇ ಮೃತ್ಯು

Cow: ಗೋ ಹತ್ಯೆ ನಿಷೇಧಕ್ಕೆ ಒತ್ತಾಯ-ಗೋ ಮಹಾಸಭಾ ಕಾರ್ಯಕ್ರಮಕ್ಕೆ ನಾಗಾಲ್ಯಾಂಡ್‌ ಅನುಮತಿ ನಕಾರ

Cow: ಗೋ ಹತ್ಯೆ ನಿಷೇಧಕ್ಕೆ ಒತ್ತಾಯ-ಗೋ ಮಹಾಸಭಾ ಕಾರ್ಯಕ್ರಮಕ್ಕೆ ನಾಗಾಲ್ಯಾಂಡ್‌ ಅನುಮತಿ ನಕಾರ

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

1-baghi

Hombale Films ಬಹು ನಿರೀಕ್ಷಿತ ಬಘೀರ ಚಿತ್ರದ ರಿಲೀಸ್ ಡೇಟ್ ಘೋಷಣೆ

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Road Mishap: ಸ್ಕೂಟಿಗೆ ಬೈಕ್‌ ಡಿಕ್ಕಿ; ಬೈಕ್ ಸವಾರ ಮೃತ್ಯು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 10ನೇ ರೀಲ್ಸ್ ಪ್ರಸಾರ

Ronny actress Samikshaa

Ronny ಗೆಲ್ಲುವ ಸಿನಿಮಾ: ನಟಿ ಸಮೀಕ್ಷಾ

akhilesh

Akhilesh Yadav ಗಂಭೀರ ಆರೋಪ: ಅಯೋಧ್ಯೆಯಲ್ಲಿ ಭಾರೀ ಭೂ ಹಗರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.