Budget ಹೊಸ ತೆರಿಗೆ ವ್ಯವಸ್ಥೆಗೇ ಹೆಚ್ಚು ತೆರಿಗೆದಾರರ ಬೆಂಬಲ
ಸರಳೀಕರಣಗೊಂಡಿದ್ದರಿಂದಲೇ ಹೆಚ್ಚು ಜನ ಬಳಕೆ
Team Udayavani, Jul 23, 2024, 11:31 PM IST
ಕಳೆದ ವರ್ಷ ಜಾರಿಗೊಳಿಸಿದ ಹೊಸ ತೆರಿಗೆ ಪದ್ಧತಿಯನ್ನು ಮೂರನೇ ಎರಡರಷ್ಟು ತೆರಿಗೆದಾರರು ಆಯ್ಕೆ ಮಾಡಿಕೊಂಡಿದ್ದಾರೆ. ಆದರೆ ಖಚಿತವಾಗಿ ಎಷ್ಟು ಮಂದಿ ಎನ್ನುವುದನ್ನು ಸರಕಾರ ಹೇಳಿಕೊಂಡಿಲ್ಲ. ತೆರಿಗೆ ವ್ಯವಸ್ಥೆಯಲ್ಲಿ ಸರಕಾರ ಬದಲಾವಣೆಗಳನ್ನು ತಂದಿರಲಿಲ್ಲ. ಆದರೆ, ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಸರಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.
ಇಂಥ ಕ್ರಮಗಳನ್ನು ಕೈಗೊಂಡದ್ದರಿಂದಲೇ 2022-23ನೇ ಸಾಲಿನ ಲ್ಲಿ ಶೇ.58 ಕಾರ್ಪೊರೇಟ್ ತೆರಿಗೆ ಸಂಗ್ರಹವಾಗಲು ಕಾರಣವಾಯಿತು. ಜತೆಗೆ ತೆರಿಗೆ ವ್ಯವಸ್ಥೆ ಸರಳೀಕರಣಗೊಳಿಸಿದ್ದು ಕೂಡ ಪಾವತಿದಾರರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಬಜೆಟ್ನಲ್ಲಿ ತಿಳಿಸಿದೆ. ರಿಟರ್ನ್ಸ್ ಸಲ್ಲಿಕೆ ಬಳಿಕ ಅದನ್ನು ಕ್ಷಿಪ್ರವಾಗಿ ಮೌಲ್ಯಮಾಪನ ಮಾಡಿ ಕ್ಲೇಮುಗಳನ್ನು ಪಡೆಯುವ ಪ್ರಕ್ರಿಯೆಯನ್ನೂ ಸರಳಗೊಳಿಸಲಾಗಿದೆ. ಇದು ಕೂಡ ತೆರಿಗೆದಾರರ ಮನ ಗೆಲ್ಲುವಲ್ಲಿ ಸಾಧ್ಯವಾಗಿದೆ. ಹೊಸ ತೆರಿಗೆ ವ್ಯವಸ್ಥೆಯನ್ನು 2020ರಲ್ಲಿ ಜಾರಿ ಮಾಡಲಾಗಿತ್ತು. ಇದನ್ನು ಕಳೆದ ವರ್ಷದಿಂದ ಕಡ್ಡಾಯಗೊಳಿಸಲಾಗಿತ್ತು. ಆದರೂ ಹಳೇ ತೆರಿಗೆ ಪದ್ಧತಿ ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ.
ಅಲ್ಪಾವಧಿ ಬಂಡವಾಳ ಗಳಿಕೆ ಮೇಲಿನ ತೆರಿಗೆ ಶೇ.20ಕ್ಕೇರಿಕೆ
ದೀರ್ಘಾವಧಿ ಬಂಡವಾಳ ಗಳಿಕೆ ತೆರಿಗೆ ಇಳಿಕೆ
ಈಕ್ವಿಟಿಯಲ್ಲಿ ಒಂದು ವರ್ಷಕ್ಕಿಂತ ಕಡಿಮೆ ಅವಧಿಯಲ್ಲಿ ಮಾಡುವ ಹೂಡಿಕೆ ವಿಧಿಸಲಾಗುವ ಕ್ಯಾಪಿಟಲ್ ಗೈನ್ ಟ್ಯಾಕ್ಸ್ (ಬಂಡವಾಳ ಗಳಿಕೆ ತೆರಿಗೆ) ಮಿತಿಯನ್ನು ಹೆಚ್ಚಿಸಲು ಕೇಂದ್ರ ಸರಕಾರ ಉದ್ದೇಶಿಸಿದೆ. ಪ್ರಸ್ತುತ ಊ ತೆರಿಗೆಯ ಪ್ರಮಾಣ ಅದು ಶೇ.15ರಷ್ಟು ಇದ್ದು ಅದನ್ನು ಶೇ.20ರಷ್ಟಕ್ಕೆ ಹೆಚ್ಚಿಸಲು ಉದ್ದೇಶಿಸಲಾಗಿದೆ. ಅದೇ ರೀತಿ 12 ತಿಂಗಳಿಗಿಂತ ಹೆಚ್ಚು ಅವಧಿಯನ್ನು ಹೊಂದಿರುವ ಹೂಡಿಕೆಗಳ ಮೇಲಿನ ತೆರಿಗೆ ಪ್ರಮಾಣವನ್ನು ಶೇ.10ರಿಂದ ಶೇ.12.5ಕ್ಕೆ ಹೆಚ್ಚಿಸುವ ಪ್ರಸ್ತಾಪ ಸರಕಾರದ ಮುಂದೆ ಇದೆ.
ಈಕ್ವಿಟಿ ಆಧಾರಿತ ಮ್ಯೂಚ್ಯುವಲ್ ಫಂಡ್ಗಳು, ಉದ್ದಿಮೆ ಆಧಾರಿತ ಟ್ರಸ್ಟ್ಗಳ ಮೇಲೆ ವಿಧಿಸಲಾಗುವ ಅಲ್ಪಾವಧಿ ಬಂಡವಾಳ ತೆರಿಗೆಯನ್ನು ಶೇ.15ರಿಂದ ಶೇ.20ಕ್ಕೆ ಏರಿಕೆ ಮಾಡಲಾಗಿದೆ. ಬಾಂಡ್ಗಳು, ಡಿಬೆಂಚರ್ಗಳ ಮೇಲೆ ಮಾಡುವ ದೀರ್ಘಾವಧಿ ಕ್ಯಾಪಿಟಲ್ ಗೈನ್ ಟ್ಯಾಕ್ಸ್ ಮಿತಿಯನ್ನು ಶೇ.20ರಿಂದ ಶೇ.12.5ಕ್ಕೆ ಇಳಿಕೆ ಮಾಡಲು ಈ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಆದರೆ ಬಾಂಡ್ಗಳು ಮತ್ತು ಡಿಬೆಂಜರ್ ಕ್ಷೇತ್ರಗಳಿಗೆ ಸಂಬಂಧಿಸಿದ ಅಲ್ಪಾವಧಿ ಕ್ಯಾಪಿಟಲ್ ಗೈನ್ ಟ್ಯಾಕ್ಸ್ನಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ
Fake Visa: ನಕಲಿ ವೀಸಾ ಉತ್ಪಾದನೆಯ ಫ್ಯಾಕ್ಟರಿ ಪತ್ತೆ-ಮೂವರು ಆರೋಪಿಗಳ ಬಂಧನ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.